AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ​ ಅವರಿಗೆ ಸಚಿವ ಹೆಚ್​ಸಿ ಮಹದೇವಪ್ಪರಿಂದ ಅಧಿಕೃತ ಆಹ್ವಾನ

ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದ್ದು, ಪ್ರತಿ ವರ್ಷದಂತೆ ಈ ಬಾರಿ ಕೂಡ ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿಗೆ ಗೌರವಧನ ನೀಡಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹದೇವಪ್ಪ ಅವರು ಆಹ್ವಾನ ನೀಡಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿ ಹಲವರು ಸಾಥ್ ನೀಡಿದರು.

ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ​ ಅವರಿಗೆ ಸಚಿವ ಹೆಚ್​ಸಿ ಮಹದೇವಪ್ಪರಿಂದ ಅಧಿಕೃತ ಆಹ್ವಾನ
ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಅವರಿಗೆ ಅಧಿಕೃತ ಆಹ್ವಾನ
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 29, 2024 | 9:46 PM

Share

ಮೈಸೂರು, ಸೆ.29: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಸಾಂಸ್ಕೃತಿಕ ನಗರಿ ಮೈಸೂರಿ(Mysore)ನಲ್ಲಿ ಮೆರಗು ಬಂದಿದೆ. ಈ ಬಾರಿ ಸಾಹಿತಿ ಹಂಪಾ ನಾಗರಾಜಯ್ಯ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಅದರಂತೆ ಪ್ರತಿ ವರ್ಷದಂತೆ ಈ ಬಾರಿ ಕೂಡ ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿಗೆ ಗೌರವಧನ ನೀಡಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹದೇವಪ್ಪ ಅವರು ಆಹ್ವಾನ ನೀಡಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿ ಹಲವರು ಸಾಥ್ ನೀಡಿದರು.

ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದ್ದು, ಅಕ್ಟೋಬರ್​ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ. ದಸರಾ ಸಮೀಪಿಸುತ್ತಿದ್ದಂತೆ ಅರಮನೆಯಲ್ಲಿ ದಸರಾ ಸಿದ್ದತೆಗಳು ಬರದಿಂದ ಸಾಗಿದೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಪ್ ಬದಲಾಯಿಸುತ್ತಿದ್ರೆ, ಮತ್ತೊಂದೆಡೆ ಅರಮನೆ ಗೋಡೆಗಳಿಗೆ ಸುಣ್ಣ ಬಣ್ಣ ಬಳಿಯಲಾಗುತ್ತಿದೆ. ಹೌದು, ದಸರಾ ಸಮೀಪಿಸುತ್ತಿದ್ದಂತೆ ಅರಮನೆಯಲ್ಲಿ ಅಳವಡಿಸಿರುವ ದೀಪಗಳಲ್ಲಿ ಕೆಟ್ಟುಹೋಗಿರುವ ವಿದ್ಯುತ್ ದೀಪಾಗಳನ್ನು ಬದಲಾಯಿಸುವ ಕಾರ್ಯ ಬರದಿಂದ ಸಾಗಿದೆ. ಇಡೀ ಅರಮನೆಯನ್ನ ಒಂದು ಲಕ್ಷ ವಿದ್ಯುತ್ ದೀಪಾಗಳಿಂದ ಅಲಂಕರಿಸಲಾಗಿದೆ.

ಇದನ್ನೂ ಓದಿ:ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ನಡೆಯುವ ಸಮಯ ಇಲ್ಲಿದೆ

ವಿವಿಧ ಹೂಗಳಿಂದ ಅರಮನೆ ಆವರಣ ಅಲಂಕಾರ

ಇನ್ನು ಇದೇ ರೀತಿ ಅರಮನೆಗೆ ಸುಣ್ಣ ಬಣ್ಣ ಬಳಿಯುವ ಕೆಲಸವನ್ನು ಮಾಡಲಾಗುತ್ತಿದೆ. ಸದ್ಯ ಹಬ್ಬದ ಸಂಧರ್ಭದಲ್ಲಿ ಮನೆಗಳಿಗೆ ಹೇಗೆ ಸುಣ್ಣ ಬಣ್ಣ ಬಳಿಯುತ್ತೇವೆ ಅದೇ ಮಾದರಿಯಲ್ಲಿ ಇಡೀ ಅರಮನೆಯ ಪ್ರಾಂಗಣದಲ್ಲಿ ಬಣ್ಣ ಬಳಿಯಲಾಗುತ್ತಿದೆ. ಅದೇ ರೀತಿ ಅರಮನೆ ಆವರಣವನ್ನ ವಿವಿಧ ಹೂಗಳಿಂದ ಅಲಂಕರಿಸಲಾಗುತ್ತೆ. ಸುಮಾರು 15 ಕ್ಕು ಹೆಚ್ಚು ಜಾತಿಯ 10 ಸಾವಿರಕ್ಕು ಹೆಚ್ಚು ಹೂಕುಂಡಗಳಿಂದ ಅಲಂಕರಿಸಲಾಗುತ್ತಿದೆ.

ಒಟ್ಟಾರೆ, ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು, ಇದಕ್ಕಾಗಿ ಅರಮನೆ ಆಡಳಿತ ಮಂಡಳಿ ಬರದಿಂದ ಸಿದ್ದತೆ ಮಾಡಿಕೊಳ್ಳುತ್ತಿದೆ. ಒಟ್ಟಿನಲ್ಲಿ ವಿಶ್ವವೇ ತಿರುಗಿ ನೋಡುವಂತಹ ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಮಲ್ಲಿಗೆ ನಗರಿ ಮೈಸೂರು ಸಜ್ಜಾಗುತ್ತಿದ್ದು, ಇತ್ತ ದಸರಾ ಗಜಪಡೆ ಭರ್ಜರಿ ಕಸರತ್ತು ಕೂಡ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್