AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಪೇಪರ್​ಗೆ ಮೃತಪಟ್ಟ ವೃದ್ಧೆಯ ಹೆಬ್ಬೆಟ್ ಮುದ್ರೆ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ಫುಲ್ ವೈರಲ್

ಸಂಬಂಧಿಕರು ಮೃತ ವೃದ್ಧೆಯಿಂದ ಹೆಬ್ಬೆಟ್ ಮುದ್ರೆ ಹಾಕಿಸಿಕೊಳ್ಳುತ್ತಿದ್ದಾಗ ಮಹಿಳೆಯೊಬ್ಬರು ಪ್ರಶ್ನಿಸಿ, ಸಂಬಂಧಿಕರ ನಡೆಯನ್ನು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

ಖಾಲಿ ಪೇಪರ್​ಗೆ ಮೃತಪಟ್ಟ ವೃದ್ಧೆಯ ಹೆಬ್ಬೆಟ್ ಮುದ್ರೆ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ಫುಲ್ ವೈರಲ್
ಮೃತ ವೃದ್ಧೆಯ ಹೆಬ್ಬೆಟ್ ಮುದ್ರೆ ಒತ್ತಿಸಿಕೊಂಡ ಸಂಬಂಧಿಕರು
TV9 Web
| Edited By: sandhya thejappa|

Updated on:Nov 28, 2021 | 4:04 PM

Share

ಮೈಸೂರು: ಖಾಲಿ ಪೇಪರ್​ಗೆ ಮೃತಪಟ್ಟ ವೃದ್ಧೆ ಹೆಬ್ಬೆಟ್ ಮುದ್ರೆಯನ್ನು ಒತ್ತಿಸಿಕೊಂಡ ಘಟನೆ ಮೈಸೂರಿನ ಶ್ರೀರಾಂಪುರದಲ್ಲಿ ನಡೆದಿದೆ. ವೃದ್ಧೆ ಮೃತರಾಗಿದ್ದಾರೆ. ಆದರೆ ಮೃತ ಸಂಬಂಧಿಕರು ಈ ನಡುವೆ ಖಾಲಿ ಪೇಪರ್​ಗೆ ಹೆಬ್ಬೆಟ್ ಮುದ್ರೆ ಒತ್ತಿಸಿಕೊಂಡಿದ್ದಾರೆ. ಖಾಲಿ ಪೇಪರ್​ಗೆ ಮೃತ ವೃದ್ಧೆಯ ಮುದ್ರೆಯನ್ನು ಹಾಕಿಸಿಕೊಂಡ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.   ಸುಮಾರು 11 ದಿನದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಂಬಂಧಿಕರು ಮೃತ ವೃದ್ಧೆಯಿಂದ ಹೆಬ್ಬೆಟ್ ಮುದ್ರೆ ಹಾಕಿಸಿಕೊಳ್ಳುತ್ತಿದ್ದಾಗ ಮಹಿಳೆಯೊಬ್ಬರು ಪ್ರಶ್ನಿಸಿ, ಸಂಬಂಧಿಕರ ನಡೆಯನ್ನು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ವಿದ್ಯಾರಣ್ಯಾಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ವಿಡಿಯೋದಲ್ಲಿ ಇರುವವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇಂದು (ನ.28) 11ನೇ ದಿನದ ಕಾರ್ಯಕ್ರಮ ನಡೆಯುತ್ತಿದ್ದು, ವಿಡಿಯೋ ವೈರಲ್ ಆದ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು. ಸಂಬಂಧಿಕರ ನಡೆಯನ್ನ ಪ್ರಶ್ನಿಸಿ ವಿಡಿಯೋ ಮಾಡಿದ ಮಹಿಳೆ, ಹೆಬ್ಬೆಟ್ಟು ಮುದ್ರಿಸಿಕೊಂಡಿರುವ ಪತ್ರಗಳನ್ನ ಪಡೆಯಲು ಯತ್ನಿಸುತ್ತಾರೆ. ಆದರೆ ಮಹಿಳೆ ಕೈಗೆ ಖಾಲಿ ಪತ್ರಗಳು ಸಿಕ್ಕಿಲ್ಲ. ಮೃತ ಹೆಣ್ಣಿನ ಕೈಯಲ್ಲಿ ಹೀಗೆ ಮಾಡಿಸಿಕೊಳ್ಳುವುದು ತಪ್ಪು ಎಂದು ಹೇಳಿದ ಮಹಿಳೆ ಜೊತೆ ಸಂಬಂಧಿಕರು ಮಾತಿನ ಚಕಮಕಿ ನಡೆಸಿದ್ದಾರೆ. ಈ ಎಲ್ಲಾ ಸಂಗತಿಗಳು ವೈರಲ್ ಆದ ವಿಡಿಯೋದಲ್ಲಿ ತಿಳಿದುಬಂದಿದೆ.

ಆಸ್ತಿಗಾಗಿ ಗಲಾಟೆ ಹನ್ನೊಂದು ದಿನಗಳ ಹಿಂದೆ ಜಯಮ್ಮ(63) ಎಂಬುವವರು ಮೃತಪಟ್ಟಿದ್ದಾರೆ. ಜಯಮ್ಮನ ಕುಟುಂಬಕ್ಕೆ ಪಿತ್ರಾರ್ಜಿತವಾಗಿ 14 ಎಕರೆ ಆಸ್ತಿ ಇತ್ತು. ಜಯಮ್ಮ ಮದುವೆಯಾದ ಹೊಸದರಲ್ಲೇ ಪತಿಯಿಂದ ದೂರವಾಗಿದ್ದರಂತೆ. ಆಸ್ತಿ ಪಾಲು ಪಡೆಯಲು ಪತಿಯೂ ಬದುಕಿಲ್ಲ, ಮಕ್ಕಳೂ ಇಲ್ಲ. ಜಯಮ್ಮ‌ನ ಪಾಲಿನ ಪಿತ್ರಾರ್ಜಿತ ಆಸ್ತಿಗಾಗಿ ತವರು ಮನೆಯಲ್ಲಿ ಜಗಳವಾಗುತ್ತಿತ್ತು. ಜಯಮ್ಮನಿಗೆ ಇಬ್ಬರು ಅಕ್ಕಂದಿರು, ಒಬ್ಬ ತಮ್ಮ ಇದ್ದಾರೆ. ಅಕ್ಕನ ಮಗನ ಸುರೇಶ್‌ ಎಂಬುವವರು ಆಸ್ತಿಗಾಗಿ ಬಾಂಡ್ ಪೇಪರ್ ಮೇಲೆ ಸಹಿ ಹಾಕಿಸಿಕೊಂಡಿದ್ದಾರೆ ಅಂತ ತಿಳಿದುಬಂದಿದೆ.

ಇದನ್ನೂ ಓದಿ

ಕೊರೊನಾ ಕಾಣಿಸಿಕೊಂಡ ಕ್ಲಸ್ಟರ್​ಗಳಲ್ಲಿ ಕೊವಿಡ್19 ಪರೀಕ್ಷೆ ಕಡ್ಡಾಯ; ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬ್ರೇಕ್

‘ರೈಡ್ ಫಾರ್ ಅಪ್ಪು’: ಪುನೀತ್​ ಸ್ಮರಣಾರ್ಥ ಬೈಕ್ ಮೆರವಣಿಗೆಗೆ ಸಿ.ಎನ್. ಅಶ್ವತ್ಥ ನಾರಾಯಣ ಚಾಲನೆ

Published On - 3:02 pm, Sun, 28 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ