ಹೆಚ್​​.ಸಿ ಮಹದೇವಪ್ಪ ಕೃತಜ್ಞತಾ ಸಭೆ: ಬಾಡೂಟದ ವೇಳೆ ನೂಕುನುಗ್ಗಲು, ಅಜ್ಜಿ ಕಾಲು ಮುರಿತ

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹೆಳವರ ಹುಂಡಿ ಗ್ರಾಮದ ಬಳಿ ಆಯೋಜಿಸಲಾಗಿದ್ದ ಸಚಿವ ಡಾ. ಹೆಚ್​​.ಸಿ ಮಹದೇವಪ್ಪ ಕೃತಜ್ಞತಾ ಸಭೆಯಲ್ಲಿ ಬಾಡೂಟದ ವೇಳೆ ನೂಕುನುಗ್ಗಲು ಸಂಭವಿಸಿ ನೆಲಕ್ಕೆ ಬಿದ್ದಿದ್ದ ಅಜ್ಜಿಯೊಬ್ಬರ ಮೂಳೆ ಮುರಿದಿದೆ.

ಹೆಚ್​​.ಸಿ ಮಹದೇವಪ್ಪ ಕೃತಜ್ಞತಾ ಸಭೆ: ಬಾಡೂಟದ ವೇಳೆ ನೂಕುನುಗ್ಗಲು, ಅಜ್ಜಿ ಕಾಲು ಮುರಿತ
ಬಾಡೂಟದ ವೇಳೆ ನೂಕುನುಗ್ಗಲು
ವಿವೇಕ ಬಿರಾದಾರ

Updated on: Jun 04, 2023 | 9:12 PM

ಮೈಸೂರು: ಜಿಲ್ಲೆಯ ಟಿ.ನರಸೀಪುರ (T Narasipura) ತಾಲೂಕಿನ ಹೆಳವರ ಹುಂಡಿ ಗ್ರಾಮದ ಬಳಿ ಆಯೋಜಿಸಲಾಗಿದ್ದ ಸಚಿವ ಡಾ. ಹೆಚ್​​.ಸಿ ಮಹದೇವಪ್ಪ (H. C. Mahadevappa) ಕೃತಜ್ಞತಾ ಸಭೆಯಲ್ಲಿ ಬಾಡೂಟದ ವೇಳೆ ನೂಕುನುಗ್ಗಲು ಸಂಭವಿಸಿ ನೆಲಕ್ಕೆ ಬಿದ್ದಿದ್ದ ಅಜ್ಜಿಯೊಬ್ಬರ ಕಾಲು ಮುರಿದಿದೆ. ಚಿಕ್ಕಮುತ್ತಮ್ಮ (66) ಅಜ್ಜಿಯ ಮೂಳೆ ಮುರಿದಿದ್ದು, ಕೆ.ಆರ್ ಆಸ್ಪತ್ರೆಗೆ (KR Hospital) ದಾಖಲಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರಿಗೆ ಬಾಡೂಟ ಆಯೋಜಿಸಲಾಗಿತ್ತು. ಭರ್ಜರಿ ಬಾಡೂಟದ ವೇಳೆ ಭಾರಿ ನೂಕುನುಗ್ಗಲು ಸಂಭವಿಸಿದೆ. ನೂಕುನುಗ್ಗಲಲ್ಲಿ ಸಿಲುಕಿ ಕೆಳಗೆ ಬಿದ್ದ ಪರಿಣಾಮ ಚಿಕ್ಕಮುತ್ತಮ್ಮ ಅವರ ಮೂಳೆ ಮುರಿದಿದೆ.

ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸಾವು: ಚಾಲಕ ವಶಕ್ಕೆ

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಮೆಜೆಸ್ಟಿಕ್​ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ನಡೆದಿದೆ. ಲತಾ ಮೃತ ಮಹಿಳೆ. ಕೆಎಸ್​ಆರ್​ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಮತ್ತು ಪತಿ ಬೈಕ್​ನಲ್ಲಿ ಬಟ್ಟೆ ಅಂಗಡಿಗೆ ಶಾಪಿಂಗ್​ಗಾಗಿ ತೆರಳುತ್ತಿದ್ದರು. ಮತ್ತೊಂದು ಬೈಕ್​ನಲ್ಲಿ ಪುತ್ರಿ ಕೂಡ ತೆರಳುತ್ತಿದ್ದರು. ಈ ವೇಳೆ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಇಳಿಯುವ ವೇಳೆ ವೇಗವಾಗಿ ಬಲಕ್ಕೆ ಬಸ್ ಬಂದಿದ್ದು, ಬಸ್​​ ಹಿಂಬದಿ ದ್ವಿಚಕ್ರ ವಾಹನಕ್ಕೆ ಟಚ್ ಆಗಿ ಇಬ್ಬರು ರಸ್ತೆಗೆ ಬಿದ್ದಿದ್ದಾರೆ.

ಇದನ್ನೂ ಓದಿ:  Mysuru zoo: ಮೈಸೂರು ಮೃಗಾಲಯದಲ್ಲಿ ಹೊಸ ಆಕರ್ಷಣೆ, ರಿಂಗ್-ಟೈಲ್ಡ್ ಲೆಮರ್​ಗಳಿಗೆ ಸಿದ್ದವಾಯ್ತು ಮನೆ

ಈ ವೇಳೆ ಮಹಿಳೆ ಮೇಲೆ ಬಸ್​​ ಹರಿದಿದೆ. ಸದ್ಯ ಲತಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು

ರಾಯಚೂರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕೇರಾ ತಾಲ್ಲೂಕಿನ ಆಲದಮರದ ತಾಂಡದಲ್ಲಿ ನಡೆದಿದೆ. ವಿರೂಪಾಕ್ಷ(28) ಮೃತ ರ್ದುದೈವಿ. ವಿರೂಪಾಕ್ಷ ಅರಕೇರಾ ಜುಟಮರಡಿ ಕೆಇಬಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಇಂದು(ಜೂ.4) ವಿದ್ಯುತ್ ಪೂರೈಕೆಯ ಸಮಸ್ಯೆಯನ್ನು ಪರಿಹರಿಸಲು ಕಂಬ ಹತ್ತಿದ್ದನು. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು, ವಿದ್ಯುತ್ ಕಂಬದ ಮೇಲೆಯೇ ಕೊನೆಯುಸಿರೆಳದಿದ್ದಾನೆ. ಈ ಕುರಿತು ದೇವದುರ್ಗ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Sun, 4 June 23

Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Follow Us