AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಿಂಗಳ ಅವಧಿಯ ಅಧಿಕಾರಕ್ಕಾಗಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿ

ಇದೇ ಅಧಿಕಾರ ಸೆಪ್ಟಂಬರ್ 5ಕ್ಕೆ ಮೈಸೂರು ನಗರ ಪಾಲಿಕೆ ಮೇಯರ್​ ಅಧಿಕಾರವಧಿ ಅಂತ್ಯವಾಗಲಿದ್ದು, ಈ ಬಾರಿ ಹೇಗಾದರೂ ಮಾಡಿ ಅಧಿಕಾರದ ಚುಕ್ಕಾಣಿ ಹೊಡಿಯಲೇಬೇಕೆಂದು ಕಾಂಗ್ರೆಸ್​ ತೆರೆಮರೆಯ ಕಸರತ್ತು ನಡೆಸಿದೆ. ಹೀಗಾಗಿ ಇನ್ನೂ ಕೇವಲ ಎರಡು ತಿಂಗಳು ಮಾತ್ರ ಅಧಿಕಾರವಧಿ ಇದ್ದರೂ ಸಹ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಭಾರೀ ಜಿದ್ದಾಜಿದ್ದಿ ಏರ್ಪಟ್ಟಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಎರಡು ತಿಂಗಳ ಅವಧಿಯ ಅಧಿಕಾರಕ್ಕಾಗಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿ
ಮೈಸೂರು ನಗರ ಪಾಲಿಕೆ
ರಾಮ್​, ಮೈಸೂರು
| Edited By: |

Updated on: Aug 17, 2023 | 7:05 AM

Share

ಮೈಸೂರು, (ಆಗಸ್ಟ್ 17): ಮೈಸೂರು (Mysuru) ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ತವರು ಜಿಲ್ಲೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್(Congress) ಜಿಲ್ಲೆಯಲ್ಲಿ ದಿಗ್ವಿಜಯ ಪಡೆದಿದೆ ನಿಜ. ಆದ್ರೆ ಮೈಸೂರು ಮಹಾನಗರ ಪಾಲಿಕೆ(Mysore City Corporation) ಅಧಿಕಾರ ಮಾತ್ರ ಬಿಜೆಪಿ ಕೈಯಲ್ಲಿದೆ. ಇದೇ ಅಧಿಕಾರ ಸೆಪ್ಟಂಬರ್ 5 ಕ್ಕೆ ಅಂತ್ಯವಾಗಲಿದ್ದು, ಮುಂದಿನ ಉಳಿಯಲಿರೋ 2 ತಿಂಗಳ ಅಧಿಕಾರ ಪಡೆಯಲು ಕಾಂಗ್ರೆಸ್‌ ಕಸರತ್ತು ಆರಂಭಿಸಿದೆ. ಅಂದಹಾಗೆ..ಐದು ವರ್ಷದ ಅಧಿಕಾರದ ಅವಧಿಯಲ್ಲಿ ಮೊದಲ ಅವಧಿಗೆ ಮಾತ್ರ ಕೇವಲ 1 ವರ್ಷ ಮಾತ್ರ ಕಾಂಗ್ರೆಸ್‌ನ ಮೇಯರ್ ಆಯ್ಕೆ ಆಗಿದ್ರು. ಆ ಬಳಿಕ ಇಲ್ಲಿ ಜೆಡಿಎಸ್‌ ಹಾಗೂ ಬಿಜೆಪಿಯದ್ದೇ ಪಾರುಪತ್ಯ.

ಮೈಸೂರು ಪಾಲಿಕೆ ಒಟ್ಟು 65 ಸದಸ್ಯರ ಬಲ ಹೊಂದಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಎಂಎಲ್‌ಎ, ಎಂಪಿ ಸೇರಿದಂತೆ 9 ಜನಪ್ರತಿನಿಧಿಗಳೊಂದಿಗೆ ಒಟ್ಟು 74 ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ. ಇನ್ನು ಬಿಜೆಪಿ 25 ಸ್ಥಾನ ಗಳಿಸಿದ್ರೆ, ಕಾಂಗ್ರೆಸ್‌ 23 ಸದಸ್ಯರನ್ನ ಹೊಂದಿದೆ. ಜೆಡಿಎಸ್‌ ಕೂಡಾ 21 ಸ್ಥಾನದಲ್ಲಿ ಗೆದ್ದಿದೆ. ಇನ್ನು ಐವರು ಪಕ್ಷೇತರ ಸದಸ್ಯರಿದ್ದಾರೆ.

ಇದನ್ನೂ ಓದಿ: ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು

ಕಳೆದ ಬಾರಿ ಮೂರು ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದರಿಂದ ಬಿಜೆಪಿ ಗೆದ್ದು ಬೀಗಿತ್ತು. ಆದ್ರೆ ಈ ಬಾರಿ ಜೆಡಿಎಸ್‌ನಲ್ಲಿರುವ ಮುಸ್ಲಿಂ ಸದಸ್ಯರಿಗೆ ಗಾಳ ಹಾಕಿರುವ ಕಾಂಗ್ರೆಸ್‌ ಅವರ ಬಲದೊಂದಿಗೆ ಅಧಿಕಾರ ಹಿಡಿಯುವ ಕನಸು ಕಂಡಿದೆ. ಹಾಲಿ ಮೇಯರ್‌ ಅವಧಿ ಸೆಪ್ಟೆಂಬರ್ 5 ಕ್ಕೆ ಮುಗಿಯಲಿದೆ. ವಿಷ್ಯ ಅಂದ್ರೆ 2023ರ ನವೆಂಬರ್‌ 17 ಕ್ಕೆ ಪಾಲಿಕೆಯ ಸದಸ್ಯರ ಅವಧಿಯೇ ಮುಗಿಯಲಿದೆ. ಹೀಗಾಗಿ ಹೊಸ ಮೇಯರ್‌ಗೆ ಸಿಗೋದು ಕೇವಲ ಎರಡು ತಿಂಗಳ ಅಧಿಕಾರ ಮಾತ್ರ.

ಇನ್ನು ಈ ಅವಧಿಯಲ್ಲಿ ಮೈಸೂರು ದಸರಾ ಕೂಡಾ ಬರುವುದರಿಂದ ಕಾಂಗ್ರೆಸ್‌ನ ಮೇಯರ್‌ ಇರಬೇಕು ಎನ್ನುವುದು ಸಿದ್ದರಾಮಯ್ಯನವರ ಕನಸಾಗಿದೆ. ಹೀಗಾಗಿಯೇ ಕಾಂಗ್ರೆಸ್‌ ಹೇಗಾದರೂ ಮಾಡಿ ಮೈಸೂರು ಪಾಲಿಕೆಯ ಅಧಿಕಾರ ಹಿಡಿಯಲು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದೆ. ಹೀಗಾಗಿ ಕಾಂಗ್ರೆಸ್ ತನ್ನ 23 ಸದಸ್ಯರ ಜತೆ ಐವರು ಪಕ್ಷೇತರರು, ಐವರು ಜೆಡಿಎಸ್‌ ಸದಸ್ಯರಿಗೆ ಗಾಳ ಹಾಕಿದೆ. ಆದ್ರೆ ಇದು ಎಷ್ಟರ ಮಟ್ಟಿಗೆ ಸಕ್ಸಸ್‌ ಆಗುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ