AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ನಾಳೆ ದಕ್ಷಿಣಕಾಶಿ ನಂಜನಗೂಡಿನಲ್ಲಿ ಪಂಚ ಮಹಾರಥೋತ್ಸವ; ಕಾರ್ಯಕ್ರಮಗಳ ವಿವರ ಹೀಗಿದೆ’

ನಾಳೆ ದಕ್ಷಿಣಕಾಶಿ ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಪುರಾಣ ಪ್ರಸಿದ್ಧ ಗೌತಮ ಪಂಚ ಮಹಾರಥೋತ್ಸವ ವಿಜೃಂಭಣೆಯಿಂದ ನೆರವೇರಲಿದೆ. ಬೆಳಗ್ಗೆ 6.00ರಿಂದ 6.40ರವರೆಗಿನ ಶುಭ ಲಗ್ನದಲ್ಲಿ ಶ್ರೀ ಮನ್ಮಹಾಗೌತಮ ರಥಾರೋಹಣದೊಂದಿಗೆ ಪಂಚ ಮಹಾರಥೋತ್ಸವ ಕಾರ್ಯಕ್ರಮ ಜರುಗಲಿದೆ.

ಮೈಸೂರು: ನಾಳೆ ದಕ್ಷಿಣಕಾಶಿ ನಂಜನಗೂಡಿನಲ್ಲಿ ಪಂಚ ಮಹಾರಥೋತ್ಸವ; ಕಾರ್ಯಕ್ರಮಗಳ ವಿವರ ಹೀಗಿದೆ'
ನಾಳೆ ದಕ್ಷಿಣಕಾಶಿ ನಂಜನಗೂಡಿನಲ್ಲಿ ಪಂಚ ಮಹಾರಥೋತ್ಸವ
ಕಿರಣ್ ಹನುಮಂತ್​ ಮಾದಾರ್
|

Updated on:Apr 01, 2023 | 1:55 PM

Share

ಮೈಸೂರು: ನಾಳೆ(ಏ.2) ದಕ್ಷಿಣಕಾಶಿ ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ(Nanjanagudu Srikanteshwara Swami) ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಪುರಾಣ ಪ್ರಸಿದ್ಧ ಗೌತಮ ಪಂಚ ಮಹಾರಥೋತ್ಸವ ವಿಜೃಂಭಣೆಯಿಂದ ನೆರವೇರಲಿದೆ. ಬೆಳಗ್ಗೆ 6.00ರಿಂದ 6.40ರವರೆಗಿನ ಶುಭ ಲಗ್ನದಲ್ಲಿ ಶ್ರೀ ಮನ್ಮಹಾಗೌತಮ ರಥಾರೋಹಣದೊಂದಿಗೆ ಪಂಚ ಮಹಾರಥೋತ್ಸವ ಕಾರ್ಯಕ್ರಮ ಜರುಗಲಿದೆ. ಇನ್ನು ಈ ರಥೋತ್ಸವಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಲಿದ್ದಾರೆ‌.

ಕಾರ್ಯಕ್ರಮಗಳ ವಿವರ ಹೀಗಿದೆ

ನಂಜುಂಡೇಶ್ವರ ಎಂದೇ ಹೆಸರಾದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಜರುಗುವ ದೊಡ್ಡ ಜಾತ್ರಾ ಮಹೋತ್ಸವದ ಪಂಚ ಮಹಾರಥೋತ್ಸವದಲ್ಲಿ ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಉತ್ಸವ ಮೂರ್ತಿಗಳನ್ನು 5 ಅಲಂಕೃತ ರಥಗಳಲ್ಲಿ ಪ್ರತಿಷ್ಠಾಪಿಸಲಾಗುವುದು. ಅರ್ಚಕರು ಪೂಜಾ, ವಿಧಿ ವಿಧಾನಗಳನ್ನು ಪೂರೈಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಬಳಿಕ ದೇವಾಲಯದ ಆವರಣದಿಂದ ಸಂಪ್ರದಾಯದಂತೆ ಗಣಪತಿ ರಥವನ್ನು ರಥ ಬೀದಿಯಲ್ಲಿ ಹೊರಡಿಸಲಾಗುತ್ತದೆ. ತದನಂತರ ಅದರ ಹಿಂದೆ ಶ್ರೀಕಂಠೇಶ್ವರ ಸ್ವಾಮಿಯ ಬೃಹತ್ ರಥ, ಪಾರ್ವತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ ರಥಗಳು ಹಿಂಬಾಲಿಸಲಿದೆ.

ಇದನ್ನೂ ಓದಿ:ಐತಿಹಾಸಿಕ ಬೇಲೂರಿನ ಜಾತ್ರೆಯಲ್ಲಿ ಮತ್ತೆ ಶುರುವಾದ ಧರ್ಮ ಸಂಘರ್ಷ; ದೇವಾಲಯದಲ್ಲಿ ಕುರಾನ್​ ಪಠಣ ವಿರೋಧ

ಇದರೊಂದಿಗೆ ಶ್ರೀಕಂಠೇಶ್ವರಸ್ವಾಮಿಯನ್ನು ಹೊತ್ತ 10 ಅಡಿ ವ್ಯಾಸದ 6 ಬೃಹತ್‌ ಚಕ್ರಗಳನ್ನೊಳಗೊಂಡಿರುವ ವಿಶಿಷ್ಟ ಕಲಾ ಕೆತ್ತನೆ, ನಾನಾ ಬಣ್ಣಗಳ ವಸ್ತ್ರಗಳು, ವಿವಿಧ ಬಗೆಯ ಪುಷ್ಪಗಳು, ಬಣ್ಣದ ಧ್ವಜಗಳಿಂದ ಅಲಂಕೃತಗೊಂಡಿದ್ದ ಸುಮಾರು 95 ಅಡಿ ಎತ್ತರದ ಬೃಹತ್‌ ರಥವನ್ನು ಜಾತಿ ಧರ್ಮಗಳ ಬೇಧವಿಲ್ಲದೆ ಎಲ್ಲಾ ವರ್ಗದ ಜನರು ಸೇರಿ ಭಕ್ತಿ ಭಾವದಿಂದ ಎಳೆಯುವರು. ಈ ಭವ್ಯ ಸಂದರ್ಭವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಮೂಲೆಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಹಾಗೆಯೇ ಏಪ್ರಿಲ್ 4ರಂದು ರಾತ್ರಿ 7ಗಂಟೆಗೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವ ಜರುಗಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:54 pm, Sat, 1 April 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು