AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಭವನ ದಾಳಿ; ಮುಂದುವರೆದ ಮನೋರಂಜನ್ ಕುಟುಂಬಸ್ಥರ ವಿಚಾರಣೆ, ಮೈಸೂರಿನಲ್ಲೇ ವಾಸ್ತವ್ಯ ಹೂಡಿದ ದೆಹಲಿ ಪೊಲೀಸ್

Parliament Security Breach: ಇಡೀ ದೇಶವನ್ನೇ ಬೆಚ್ಚಿ‌ಬೀಳಿಸಿದ್ದ ಸಂಸತ್ ಮೇಲಿನ ಸ್ಮೋಕ್ ಬಾಂಬ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣದ ಎ1 ಆರೋಪಿ ಮೈಸೂರಿನ ಮನೋರಂಜನ ಪೋಷಕರನ್ನ ದೆಹಲಿಯ ತನಿಖಾ ತಂಡ ತೀವ್ರ ವಿಚಾರಣೆಗೊಳಪಡಿಸಿದೆ. ನಿನ್ನೆ ದೆಹಲಿ ಪೊಲೀಸರು ಮನೋರಂಜನ್ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ಇಂದು ಕೂಡ ವಿಚಾರಣೆ ಮುಂದುವರೆಯುವ ಸಾಧ್ಯತೆ ಇದೆ.

ಸಂಸತ್ ಭವನ ದಾಳಿ; ಮುಂದುವರೆದ ಮನೋರಂಜನ್ ಕುಟುಂಬಸ್ಥರ ವಿಚಾರಣೆ, ಮೈಸೂರಿನಲ್ಲೇ ವಾಸ್ತವ್ಯ ಹೂಡಿದ ದೆಹಲಿ ಪೊಲೀಸ್
ಆರೋಪಿ ಮನೋರಂಜನ್ ಮನೆ
ದಿಲೀಪ್​, ಚೌಡಹಳ್ಳಿ
| Edited By: |

Updated on: Dec 20, 2023 | 12:09 PM

Share

ಮೈಸೂರು, ಡಿ.20: ದೆಹಲಿ ಸಂಸತ್ ಭವನ ಮೇಲಿನ ದಾಳಿ ಪ್ರಕರಣದಲ್ಲಿ(Parliament Security Breach) ಭಾಗಿಯಾಗಿದ್ದ ಮೈಸೂರಿನ (Mysuru) ಮನೋರಂಜನ್ ನಿವಾಸದಲ್ಲಿ ದೆಹಲಿ ಪೊಲೀಸರ ತಲಾಶ್ ಮುಂದುವರೆದಿದೆ. ನಿನ್ನೆ ಮನೋರಂಜನ್ ನಿವಾಸಕ್ಕೆ ಭೇಟಿ ನೀಡಿ ಮನೋರಂಜನ್ ತಾಯಿ ಮತ್ತು ಸಹೋದರಿಯನ್ನ ಸತತ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿ ಹೇಳಿಕೆಯನ್ನ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದ ದೆಹಲಿ ಪೊಲೀಸರು (Delhi Police) ಇಂದು ಕೂಡ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದಾರೆ. ಜೊತೆಗೆ ಇಂದು ಕೂಡ ಮನೋರಂಜನ್ ಕುಟುಂಬಸ್ಥರನ್ನ ವಿಚಾರಣೆ ನಡೆಸಲಿದ್ದಾರೆ.

ಇಡೀ ದೇಶವನ್ನೇ ಬೆಚ್ಚಿ‌ಬೀಳಿಸಿದ್ದ ಸಂಸತ್ ಮೇಲಿನ ಸ್ಮೋಕ್ ಬಾಂಬ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣದ ಎ1 ಆರೋಪಿ ಮೈಸೂರಿನ ಮನೋರಂಜನ ಪೋಷಕರನ್ನ ದೆಹಲಿಯ ತನಿಖಾ ತಂಡ ತೀವ್ರ ವಿಚಾರಣೆಗೊಳಪಡಿಸಿದೆ. ನಿನ್ನೆ ದೆಹಲಿ ಪೊಲೀಸರು ಮನೋರಂಜನ್ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ಇಂದು ಕೂಡ ವಿಚಾರಣೆ ಮುಂದುವರೆಯುವ ಸಾಧ್ಯತೆ ಇದೆ. ಸದ್ಯ ದೆಹಲಿ ಪೊಲೀಸರು ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದು ತಾವು ಇರುವಲ್ಲಿಗೆಯೇ ಮನೋರಂಜನ್ ತಂದೆ ದೇವಾರಾಜೇಗೌಡರನ್ನು ಕರೆಸಿಕೊಳ್ಳುವ ಸಾಧ್ಯತೆ ಇದೆ. ಇನ್ನು ದೇವಾರಾಜೇಗೌಡರಿಗೆ ಬ್ಯಾಂಕ್ ಸ್ಟೇಟ್ ಮೆಂಟ್ ತೆಗದುಕೊಂಡು ಬರುವಂತೆ ಸೂಚಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೋರಂಜನ್ ಹಣದ ಮೂಲದ ಬಗ್ಗೆ ದೆಹಲಿ ಪೊಲೀಸರು ಸಾಕಷ್ಟು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಮನೋರಂಜನ್​ಗೆ ಸಂಬಂಧ ಪಟ್ಟ ಪಾಸ್ ಪೋರ್ಟ್, ಬ್ಯಾಂಕ್ ಪಾಸ್ ಬುಕ್ ಹಾಗೂ ಕೆಲವು ನೋಟ್ ಪುಸ್ತಕಗಳನ್ನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮನೋರಂಜನ್ ಪೋಷಕರ ಸುದೀರ್ಘ ವಿಚಾರಣೆ: ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದ ದೆಹಲಿ ಪೊಲೀಸ್​

ದೆಹಲಿ ಪೊಲೀಸರ ಮುಂದೆ ಮನೋರಂಜನ್ ಕೊಟ್ಟಿರುವ ಹೇಳಿಕೆ ಹಾಗೂ ಪೋಷಕರು‌ ಕೊಡುತ್ತಿರುವ ಹೇಳಿಕೆಗೂ ಸಾಕಷ್ಟು ವ್ಯತ್ಯಾಸಗಳು ಕಂಡು ಬರುತ್ತಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಸಾಗರಶ ರ್ಮಾ ಎರಡು ಬಾರಿ ಮನೋರಂಜನ್ ನಿವಾಸಕ್ಕೆ ಬಂದಿರುವ ಬಗ್ಗೆ ಪೋಷಕರು ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಮನೋರಂಜನ್ ಮೈಸೂರಿಗೆ ಬಂದೇ ಇಲ್ಲ ಎಂದು ವಿಚಾರಣ ವೇಳೆ ಹೇಳಿದ್ದಾನೆ. ಜೊತೆಗೆ ಮನೋರಂಜನಗೆ ಯಾರು ಹಣದ ಸಹಾಯ ಮಾಡುತ್ತಿದ್ದರು ಎಂಬ ಬಗ್ಗೆಯೂ ದೆಹಲಿ ಪೊಲೀಸರಿಗೆ ಸರಿಯಾದ ಮಾಹಿತಿಗಳು ಲಭ್ಯವಾಗಿಲ್ಲ. ಹೀಗಾಗಿ ಬ್ಯಾಂಕ್ ಸ್ಟೇಂಟ್ ಮೆಂಟ್ ಪರಿಶೀಲನೆಗೆ ದೆಹಲಿ ಪೊಲೀಸರು ಮುಂದಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ