AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಭದ್ರತಾ ಲೋಪ: ಸಂಕಷ್ಟಕ್ಕೀಡಾದ ಮನೋರಂಜನ್ ಕುಟುಂಬಸ್ಥರು, ಮೈಸೂರು ಬಿಟ್ಟು ತೆರಳದಂತೆ ಸೂಚನೆ

ಮುಂದಿನ ಸೂಚನೆ ನೀಡುವ ವರೆಗೂ ಯಾವುದೇ ಪತ್ರಿಕೆ, ಹಳೆಯ ಪುಸ್ತಕ ಮಾರಾಟ ಮಾಡಬೇಡಿ ಎಂದು ಆರೋಪಿ ಮನೋರಂಜನ್ ಪೋಷಕರಿಗೆ ಗುಪ್ತಚರ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಶುಕ್ರವಾರ ಮನೋರಂಜನ್ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿದ್ದರು.

ಲೋಕಸಭೆ ಭದ್ರತಾ ಲೋಪ: ಸಂಕಷ್ಟಕ್ಕೀಡಾದ ಮನೋರಂಜನ್ ಕುಟುಂಬಸ್ಥರು, ಮೈಸೂರು ಬಿಟ್ಟು ತೆರಳದಂತೆ ಸೂಚನೆ
ಸಂಗ್ರಹ ಚಿತ್ರ
TV9 Web
| Edited By: |

Updated on:Dec 16, 2023 | 11:31 AM

Share

ಮೈಸೂರು, ಡಿಸೆಂಬರ್ 16: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ (Parliament Security Breach) ಪ್ರಕರಣ​ಕ್ಕೆ ಸಂಬಂಧಿಸಿ ಮೈಸೂರಿನ ವಿಜಯನಗರದಲ್ಲಿರುವ ಆರೋಪಿ ಮನೋರಂಜನ್ (D Manoranjan) ಕುಟುಂಬಸ್ಥರಿಗೆ ಈಗ ಸಂಕಷ್ಟ ಎದುರಾಗಿದೆ. ಶುಕ್ರವಾರವಷ್ಟೇ ಅವರ ಮನೆಗೆ ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದ ಗುಪ್ತಚರ ಇಲಾಖೆ ಅಧಿಕಾರಿಗಳು, ಇದೀಗ ಮೈಸೂರು ಬಿಟ್ಟು ಎಲ್ಲೂ ತೆರಳದಂತೆ ಕುಟುಂಬಸ್ಥರಿಗೆ ಸೂಚನೆ ನೀಡಿದ್ದಾರೆ.

ನಮ್ಮ ಸೂಚನೆ ಬರುವವರೆಗೂ ಮೈಸೂರಿನಿಂದ ಹೊರಗಡೆ ತೆರಳಬೇಡಿ. ತೀರಾ ತುರ್ತು ಇದ್ದರೆ ನಮ್ಮ ಗಮನಕ್ಕೆ ತಂದು ಅನುಮತಿ ಮೇಲೆ ತೆರಳಿ. ಮನೆಗೆ ಯಾವ ಸಂಬಂಧಿಕರಿಗೂ ಸದ್ಯಕ್ಕೆ ಬಾರದಂತೆ ಸೂಚನೆ ಕೊಡಿ. ಪ್ರತಿ ನಿತ್ಯ ನಿಮಗೆ ಬರುವ ಕರೆಗಳ ಮಾಹಿತಿಯನ್ನು ಕಡ್ಡಾಯವಾಗಿ ನಮಗೆ ತಿಳಿಸಿ. ಎಲ್ಲಾ ಕರೆಗಳನ್ನು ತಪ್ಪದೆ ಸ್ವೀಕರಿಸಬೇಕು ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಮನೋರಂಜನ್ ಕುಟುಂಬದವರಿಗೆ ಸೂಚಿಸಿದ್ದಾರೆ.

ಮುಂದಿನ ಸೂಚನೆ ನೀಡುವ ವರೆಗೂ ಯಾವುದೇ ಪತ್ರಿಕೆ, ಹಳೆಯ ಪುಸ್ತಕ ಮಾರಾಟ ಮಾಡಬೇಡಿ ಎಂದು ಆರೋಪಿ ಮನೋರಂಜನ್ ಪೋಷಕರಿಗೆ ಗುಪ್ತಚರ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಶುಕ್ರವಾರ ಮನೋರಂಜನ್ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿದ್ದರು. ಸುಮಾರು 1 ಗಂಟೆಗೂ ಹೆಚ್ಚು ಸಮಯದಿಂದ ಮನೋರಂಜನ್ ಮನೆಯಲ್ಲಿ ತಪಾಸಣೆ ನಡೆಸಿ ಹಿಂದಿರುಗಿದ್ದರು.

ಇದನ್ನೂ ಓದಿ: ಸಂಸತ್​​ನೊಳಗೆ ನುಸುಳಿ ಹಂಗಾಮ ಮಾಡಿದ ಮನೋರಂಜನ್ ಮನೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಪರಿಶೀಲನೆ

ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಜಿಗಿದಿದ್ದ ಮನೋರಂಜನ್ ಡಿ ಮತ್ತು ಸಾಗರ್ ಶರ್ಮಾ ಹಳದಿ ಅನಿಲದಿಂದ ತುಂಬಿರುವ ಡಬ್ಬಿಗಳನ್ನು ತೆರೆದು ಸ್ಪ್ರೇ ಮಾಡಿದ್ದರು. ಬಳಿಕ ಲೋಕಸಭೆ ಸಂಸದರು ಅವರನ್ನು ಹಿಡಿದು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದರು. ಘಟನೆಯು ದೇಶದಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ಇದೀಗ ವಿವಿಧ ಆಯಾಮಗಳಲ್ಲಿ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್ ಮನೆಗೆ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:24 am, Sat, 16 December 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?