AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಭದ್ರತಾ ಲೋಪ: ಸಂಕಷ್ಟಕ್ಕೀಡಾದ ಮನೋರಂಜನ್ ಕುಟುಂಬಸ್ಥರು, ಮೈಸೂರು ಬಿಟ್ಟು ತೆರಳದಂತೆ ಸೂಚನೆ

ಮುಂದಿನ ಸೂಚನೆ ನೀಡುವ ವರೆಗೂ ಯಾವುದೇ ಪತ್ರಿಕೆ, ಹಳೆಯ ಪುಸ್ತಕ ಮಾರಾಟ ಮಾಡಬೇಡಿ ಎಂದು ಆರೋಪಿ ಮನೋರಂಜನ್ ಪೋಷಕರಿಗೆ ಗುಪ್ತಚರ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಶುಕ್ರವಾರ ಮನೋರಂಜನ್ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿದ್ದರು.

ಲೋಕಸಭೆ ಭದ್ರತಾ ಲೋಪ: ಸಂಕಷ್ಟಕ್ಕೀಡಾದ ಮನೋರಂಜನ್ ಕುಟುಂಬಸ್ಥರು, ಮೈಸೂರು ಬಿಟ್ಟು ತೆರಳದಂತೆ ಸೂಚನೆ
ಸಂಗ್ರಹ ಚಿತ್ರ
TV9 Web
| Edited By: |

Updated on:Dec 16, 2023 | 11:31 AM

Share

ಮೈಸೂರು, ಡಿಸೆಂಬರ್ 16: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ (Parliament Security Breach) ಪ್ರಕರಣ​ಕ್ಕೆ ಸಂಬಂಧಿಸಿ ಮೈಸೂರಿನ ವಿಜಯನಗರದಲ್ಲಿರುವ ಆರೋಪಿ ಮನೋರಂಜನ್ (D Manoranjan) ಕುಟುಂಬಸ್ಥರಿಗೆ ಈಗ ಸಂಕಷ್ಟ ಎದುರಾಗಿದೆ. ಶುಕ್ರವಾರವಷ್ಟೇ ಅವರ ಮನೆಗೆ ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದ ಗುಪ್ತಚರ ಇಲಾಖೆ ಅಧಿಕಾರಿಗಳು, ಇದೀಗ ಮೈಸೂರು ಬಿಟ್ಟು ಎಲ್ಲೂ ತೆರಳದಂತೆ ಕುಟುಂಬಸ್ಥರಿಗೆ ಸೂಚನೆ ನೀಡಿದ್ದಾರೆ.

ನಮ್ಮ ಸೂಚನೆ ಬರುವವರೆಗೂ ಮೈಸೂರಿನಿಂದ ಹೊರಗಡೆ ತೆರಳಬೇಡಿ. ತೀರಾ ತುರ್ತು ಇದ್ದರೆ ನಮ್ಮ ಗಮನಕ್ಕೆ ತಂದು ಅನುಮತಿ ಮೇಲೆ ತೆರಳಿ. ಮನೆಗೆ ಯಾವ ಸಂಬಂಧಿಕರಿಗೂ ಸದ್ಯಕ್ಕೆ ಬಾರದಂತೆ ಸೂಚನೆ ಕೊಡಿ. ಪ್ರತಿ ನಿತ್ಯ ನಿಮಗೆ ಬರುವ ಕರೆಗಳ ಮಾಹಿತಿಯನ್ನು ಕಡ್ಡಾಯವಾಗಿ ನಮಗೆ ತಿಳಿಸಿ. ಎಲ್ಲಾ ಕರೆಗಳನ್ನು ತಪ್ಪದೆ ಸ್ವೀಕರಿಸಬೇಕು ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಮನೋರಂಜನ್ ಕುಟುಂಬದವರಿಗೆ ಸೂಚಿಸಿದ್ದಾರೆ.

ಮುಂದಿನ ಸೂಚನೆ ನೀಡುವ ವರೆಗೂ ಯಾವುದೇ ಪತ್ರಿಕೆ, ಹಳೆಯ ಪುಸ್ತಕ ಮಾರಾಟ ಮಾಡಬೇಡಿ ಎಂದು ಆರೋಪಿ ಮನೋರಂಜನ್ ಪೋಷಕರಿಗೆ ಗುಪ್ತಚರ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಶುಕ್ರವಾರ ಮನೋರಂಜನ್ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿದ್ದರು. ಸುಮಾರು 1 ಗಂಟೆಗೂ ಹೆಚ್ಚು ಸಮಯದಿಂದ ಮನೋರಂಜನ್ ಮನೆಯಲ್ಲಿ ತಪಾಸಣೆ ನಡೆಸಿ ಹಿಂದಿರುಗಿದ್ದರು.

ಇದನ್ನೂ ಓದಿ: ಸಂಸತ್​​ನೊಳಗೆ ನುಸುಳಿ ಹಂಗಾಮ ಮಾಡಿದ ಮನೋರಂಜನ್ ಮನೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಪರಿಶೀಲನೆ

ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಜಿಗಿದಿದ್ದ ಮನೋರಂಜನ್ ಡಿ ಮತ್ತು ಸಾಗರ್ ಶರ್ಮಾ ಹಳದಿ ಅನಿಲದಿಂದ ತುಂಬಿರುವ ಡಬ್ಬಿಗಳನ್ನು ತೆರೆದು ಸ್ಪ್ರೇ ಮಾಡಿದ್ದರು. ಬಳಿಕ ಲೋಕಸಭೆ ಸಂಸದರು ಅವರನ್ನು ಹಿಡಿದು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದರು. ಘಟನೆಯು ದೇಶದಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ಇದೀಗ ವಿವಿಧ ಆಯಾಮಗಳಲ್ಲಿ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್ ಮನೆಗೆ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:24 am, Sat, 16 December 23

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ