AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಭದ್ರತಾ ಲೋಪ: ಮನೋರಂಜನ್ ಮನೆಗೆ 2 ಬಾರಿ ಬಂದಿದ್ದ ಸಾಗರ್ ಶರ್ಮಾ

Parliment security breach: ಸಾಗರ್ ಶರ್ಮ ಮೈಸೂರಿನಲ್ಲಿ ಎಲ್ಲೆಲ್ಲಿ ಓಡಾಡಿದ್ದ, ಬೇರೆ ಯಾರನ್ನೆಲ್ಲ ಸಂಪರ್ಕ ಮಾಡಿದ್ದ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಮೈಸೂರಿಗೆ ಬಂದು ಹೋಗಿದ್ದನ್ನು ಮನೋಹರ್ ಕುಟುಂಬಸ್ಥರು ಕೂಡ ಖಚಿತ ಪಡಿಸಿದ್ದಾರೆ.

ಲೋಕಸಭೆ ಭದ್ರತಾ ಲೋಪ: ಮನೋರಂಜನ್ ಮನೆಗೆ 2 ಬಾರಿ ಬಂದಿದ್ದ ಸಾಗರ್ ಶರ್ಮಾ
ಲೋಕಸಭೆ ಭದ್ರತಾ ಲೋಪ: ಮನೋರಂಜನ್ ಮನೆಗೆ 2 ಬಾರಿ ಬಂದಿದ್ದ ಸಾಗರ್ ಶರ್ಮಾ
ದಿಲೀಪ್​, ಚೌಡಹಳ್ಳಿ
| Updated By: Ganapathi Sharma|

Updated on: Dec 15, 2023 | 10:52 AM

Share

ಮೈಸೂರು, ಡಿಸೆಂಬರ್ 15: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ (Parliment security breach) ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹಾಗೂ ಮೈಸೂರು ಪೊಲೀಸರಿಂದ ತನಿಖೆಗಳು ನಡೆಯುತ್ತಿದ್ದು ಆರೋಪಿ ಮನೋರಂಜನ್ (Manotanjan) ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಇದೇ ವೇಳೆ, ಮತ್ತೊಬ್ಬ ಆರೋಪಿ ಸಾಗರ್ ಶರ್ಮಾ (Sagar Sharma), ಮೈಸೂರಿನಲ್ಲಿರುವ ಮನೋರಂಜನ್ ನಿವಾಸಕ್ಕೆ 2 ಬಾರಿ ಬಂದುಹೋಗಿದ್ದ ಎಂಬುದು ತಿಳಿದುಬಂದಿದೆ.

ಸಾಗರ್ ಬಗ್ಗೆ ಮನೋರಂಜನ್ ತನ್ನ ತಂದೆ, ತಾಯಿಗೂ ಸುಳ್ಳು ಹೇಳಿದ್ದ. ಕಾಲೇಜಿನ ಸಹಪಾಠಿ ಎಂದು ಪರಿಚಯಿಸಿದ್ದ. ಮೈಸೂರಿನ ವಿಜಯನಗರದಲ್ಲಿರುವ ಡಿ.ಮನೋರಂಜನ್ ಮನೆಗೆ ಸಾಗರ್​ ಶರ್ಮಾ ಎರಡು ಬಾರಿ ಬಂದಿದ್ದು, ಮನೆಯಲ್ಲಿ ಊಟ ಮಾಡಿ ಹೋಗಿದ್ದ. ಆತ ಆಟೋ ಚಾಲಕನಾಗಿದ್ದರೂ ಸಹಪಾಠಿ ಎಂದು ಮನೋರಂಜನ್​ ಸುಳ್ಳು ಹೇಳಿದ್ದ ಎಂಬ ಮಾಹಿತಿ ಪೊಲೀಸರಿಗೆ ದೊರೆತಿದೆ.

ಸಾಗರ್ ಶರ್ಮ ಮೈಸೂರಿನಲ್ಲಿ ಎಲ್ಲೆಲ್ಲಿ ಓಡಾಡಿದ್ದ, ಬೇರೆ ಯಾರನ್ನೆಲ್ಲ ಸಂಪರ್ಕ ಮಾಡಿದ್ದ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಮೈಸೂರಿಗೆ ಬಂದು ಹೋಗಿದ್ದನ್ನು ಮನೋಹರ್ ಕುಟುಂಬಸ್ಥರು ಕೂಡ ಖಚಿತ ಪಡಿಸಿದ್ದಾರೆ.

ಮೈಸೂರಿನಲ್ಲಿ ಮುಖ್ಯಮಂತ್ರಿಗಳ ನಿವಾಸ ಕೂಡ ಇರುವುದರಿಂದ ಮತ್ತಷ್ಟು ಆತಂಕ‌‌ ವ್ಯಕ್ತವಾಗಿದೆ. ಸಾಗರ್ ಶರ್ಮಾ ಮೈಸೂರಿಗೆ ಎರಡು ಬಾರಿ ಬಂದಿದ್ದರ ಉದ್ದೇಶ ಏನು ಎನ್ನುವುದರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಮೈಸೂರಿನಲ್ಲಿ ಬಿಗಿ ಭದ್ರತೆ

ಲೋಕಸಭೆ ಭದ್ರತಾ ಉಲ್ಲಂಘನೆ ವಿಚಾರವಾಗಿ ಒಬ್ಬ ಆರೋಪಿಯ ಮನೆ ಇರುವ ಹಾಗೂ ಮತ್ತೊಬ್ಬ ಆರೋಪಿ ಓಡಾಡಿದ್ದ ಮೈಸೂರಿನಲ್ಲಿ ಬಿಗಿ ಭದ್ರತೆ ಮುಂದುವರಿಸಲಾಗಿದೆ. ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿರೋ ಆರೋಪಿ ಮನೋರಂಜನ್ ನಿವಾಸಕ್ಕೆ ಕೂಡ ಪೊಲೀಸ್ ಭದ್ರತೆ ಮುಂದುವರಿಸಲಾಗಿದೆ.

ಈ ಮಧ್ಯೆ, ಮನೋರಂಜನ್ ಹಿನ್ನೆಲೆ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಆದರೆ ಮನೋರಂಜನ್ ಲೋಕಸಭಾ ಕಲಾಪಕ್ಕೆ ದಾಳಿ ಮಾಡಿದ್ದು ಯಾಕೆಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಆತ ಈಗಾಗಲೇ ದೆಹಲಿ ಪೊಲೀಸರ ವಶದಲ್ಲಿದ್ದಾನೆ.

ಇದನ್ನೂ ಓದಿ: ಸಂಸತ್​ ಭದ್ರತೆ ಉಲ್ಲಂಘನೆ: ಆರೋಪಿ ಸಾಗರ್​ ಶರ್ಮಾ ಮನೆಯಲ್ಲಿ ಸಿಕ್ಕ ಡೈರಿಯಲ್ಲಿ ಏನಿದೆ?

ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ

ಸಂಸತ್‌ನಲ್ಲಿ ಕೋಲಾಹಲ ನಡೆಸಿದ ಯುವಕರಿಗೆ ಪಾಸ್ ನೀಡಿದ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ಶುಕ್ರವಾರವೂ ಪ್ರತಿಭಟನೆ ನಡೆದಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗದ ಸದಸ್ಯರು ಪ್ರತಾಪ್ ಸಿಂಹ ಕೈಯಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದ ಭಾವಚಿತ್ರದ ಫ್ಲೆಕ್ಸ್ ಅನ್ನು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಹಾಕಿದ್ದಾರೆ. ಇದೀಗ ಪಾಲಿಕೆ ಸಿಬ್ಬಂದಿ ಫ್ಲೆಕ್ಸ್ ತೆರವುಗೊಳಿಸಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!