ಲೋಕಸಭೆ ಭದ್ರತಾ ಲೋಪ: ಮನೋರಂಜನ್ ಮನೆಗೆ 2 ಬಾರಿ ಬಂದಿದ್ದ ಸಾಗರ್ ಶರ್ಮಾ

Parliment security breach: ಸಾಗರ್ ಶರ್ಮ ಮೈಸೂರಿನಲ್ಲಿ ಎಲ್ಲೆಲ್ಲಿ ಓಡಾಡಿದ್ದ, ಬೇರೆ ಯಾರನ್ನೆಲ್ಲ ಸಂಪರ್ಕ ಮಾಡಿದ್ದ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಮೈಸೂರಿಗೆ ಬಂದು ಹೋಗಿದ್ದನ್ನು ಮನೋಹರ್ ಕುಟುಂಬಸ್ಥರು ಕೂಡ ಖಚಿತ ಪಡಿಸಿದ್ದಾರೆ.

ಲೋಕಸಭೆ ಭದ್ರತಾ ಲೋಪ: ಮನೋರಂಜನ್ ಮನೆಗೆ 2 ಬಾರಿ ಬಂದಿದ್ದ ಸಾಗರ್ ಶರ್ಮಾ
ಲೋಕಸಭೆ ಭದ್ರತಾ ಲೋಪ: ಮನೋರಂಜನ್ ಮನೆಗೆ 2 ಬಾರಿ ಬಂದಿದ್ದ ಸಾಗರ್ ಶರ್ಮಾ
Edited By:

Updated on: Dec 15, 2023 | 10:52 AM

ಮೈಸೂರು, ಡಿಸೆಂಬರ್ 15: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ (Parliment security breach) ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹಾಗೂ ಮೈಸೂರು ಪೊಲೀಸರಿಂದ ತನಿಖೆಗಳು ನಡೆಯುತ್ತಿದ್ದು ಆರೋಪಿ ಮನೋರಂಜನ್ (Manotanjan) ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಇದೇ ವೇಳೆ, ಮತ್ತೊಬ್ಬ ಆರೋಪಿ ಸಾಗರ್ ಶರ್ಮಾ (Sagar Sharma), ಮೈಸೂರಿನಲ್ಲಿರುವ ಮನೋರಂಜನ್ ನಿವಾಸಕ್ಕೆ 2 ಬಾರಿ ಬಂದುಹೋಗಿದ್ದ ಎಂಬುದು ತಿಳಿದುಬಂದಿದೆ.

ಸಾಗರ್ ಬಗ್ಗೆ ಮನೋರಂಜನ್ ತನ್ನ ತಂದೆ, ತಾಯಿಗೂ ಸುಳ್ಳು ಹೇಳಿದ್ದ. ಕಾಲೇಜಿನ ಸಹಪಾಠಿ ಎಂದು ಪರಿಚಯಿಸಿದ್ದ. ಮೈಸೂರಿನ ವಿಜಯನಗರದಲ್ಲಿರುವ ಡಿ.ಮನೋರಂಜನ್ ಮನೆಗೆ ಸಾಗರ್​ ಶರ್ಮಾ ಎರಡು ಬಾರಿ ಬಂದಿದ್ದು, ಮನೆಯಲ್ಲಿ ಊಟ ಮಾಡಿ ಹೋಗಿದ್ದ. ಆತ ಆಟೋ ಚಾಲಕನಾಗಿದ್ದರೂ ಸಹಪಾಠಿ ಎಂದು ಮನೋರಂಜನ್​ ಸುಳ್ಳು ಹೇಳಿದ್ದ ಎಂಬ ಮಾಹಿತಿ ಪೊಲೀಸರಿಗೆ ದೊರೆತಿದೆ.

ಸಾಗರ್ ಶರ್ಮ ಮೈಸೂರಿನಲ್ಲಿ ಎಲ್ಲೆಲ್ಲಿ ಓಡಾಡಿದ್ದ, ಬೇರೆ ಯಾರನ್ನೆಲ್ಲ ಸಂಪರ್ಕ ಮಾಡಿದ್ದ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಮೈಸೂರಿಗೆ ಬಂದು ಹೋಗಿದ್ದನ್ನು ಮನೋಹರ್ ಕುಟುಂಬಸ್ಥರು ಕೂಡ ಖಚಿತ ಪಡಿಸಿದ್ದಾರೆ.

ಮೈಸೂರಿನಲ್ಲಿ ಮುಖ್ಯಮಂತ್ರಿಗಳ ನಿವಾಸ ಕೂಡ ಇರುವುದರಿಂದ ಮತ್ತಷ್ಟು ಆತಂಕ‌‌ ವ್ಯಕ್ತವಾಗಿದೆ. ಸಾಗರ್ ಶರ್ಮಾ ಮೈಸೂರಿಗೆ ಎರಡು ಬಾರಿ ಬಂದಿದ್ದರ ಉದ್ದೇಶ ಏನು ಎನ್ನುವುದರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಮೈಸೂರಿನಲ್ಲಿ ಬಿಗಿ ಭದ್ರತೆ

ಲೋಕಸಭೆ ಭದ್ರತಾ ಉಲ್ಲಂಘನೆ ವಿಚಾರವಾಗಿ ಒಬ್ಬ ಆರೋಪಿಯ ಮನೆ ಇರುವ ಹಾಗೂ ಮತ್ತೊಬ್ಬ ಆರೋಪಿ ಓಡಾಡಿದ್ದ ಮೈಸೂರಿನಲ್ಲಿ ಬಿಗಿ ಭದ್ರತೆ ಮುಂದುವರಿಸಲಾಗಿದೆ. ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿರೋ ಆರೋಪಿ ಮನೋರಂಜನ್ ನಿವಾಸಕ್ಕೆ ಕೂಡ ಪೊಲೀಸ್ ಭದ್ರತೆ ಮುಂದುವರಿಸಲಾಗಿದೆ.

ಈ ಮಧ್ಯೆ, ಮನೋರಂಜನ್ ಹಿನ್ನೆಲೆ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಆದರೆ ಮನೋರಂಜನ್ ಲೋಕಸಭಾ ಕಲಾಪಕ್ಕೆ ದಾಳಿ ಮಾಡಿದ್ದು ಯಾಕೆಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಆತ ಈಗಾಗಲೇ ದೆಹಲಿ ಪೊಲೀಸರ ವಶದಲ್ಲಿದ್ದಾನೆ.

ಇದನ್ನೂ ಓದಿ: ಸಂಸತ್​ ಭದ್ರತೆ ಉಲ್ಲಂಘನೆ: ಆರೋಪಿ ಸಾಗರ್​ ಶರ್ಮಾ ಮನೆಯಲ್ಲಿ ಸಿಕ್ಕ ಡೈರಿಯಲ್ಲಿ ಏನಿದೆ?

ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ

ಸಂಸತ್‌ನಲ್ಲಿ ಕೋಲಾಹಲ ನಡೆಸಿದ ಯುವಕರಿಗೆ ಪಾಸ್ ನೀಡಿದ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ಶುಕ್ರವಾರವೂ ಪ್ರತಿಭಟನೆ ನಡೆದಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗದ ಸದಸ್ಯರು ಪ್ರತಾಪ್ ಸಿಂಹ ಕೈಯಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದ ಭಾವಚಿತ್ರದ ಫ್ಲೆಕ್ಸ್ ಅನ್ನು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಹಾಕಿದ್ದಾರೆ. ಇದೀಗ ಪಾಲಿಕೆ ಸಿಬ್ಬಂದಿ ಫ್ಲೆಕ್ಸ್ ತೆರವುಗೊಳಿಸಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us