AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ವಿರುದ್ಧ ಅಸಮಾಧಾನ; ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು

ಕಾರ್ಖಾನೆಯಲ್ಲಿ 60 KLDP ಸಾಮರ್ಥ್ಯದ ಡಿಸ್ಟಿಲರಿ ಘಟಕದಿಂದ ಸ್ಥಳೀಯರಿಗೆ ಸಮಸ್ಯೆಯಾಗುತ್ತಿದ್ದು 150 KLDP ವಿಸ್ತರಿಸಿದರೆ ಮತ್ತಷ್ಟು ಸಮಸ್ಯೆ ಹೆಚ್ಚಾಗುತ್ತೆ. ಹೀಗಾಗಿ ಡಿಸ್ಟಿಲರಿ ಘಟಕ ವಿಸ್ತರಣೆ ಮಾಡದಂತೆ ಆಗ್ರಹಿಸಿದ್ದಾರೆ.

ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ವಿರುದ್ಧ ಅಸಮಾಧಾನ; ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು
ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ವಿರುದ್ಧ ಅಸಮಾಧಾನ; ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು
TV9 Web
| Edited By: ಆಯೇಷಾ ಬಾನು|

Updated on: Oct 20, 2021 | 8:42 AM

Share

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲೂಪುರದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ವಿರುದ್ಧ ಮಲ್ಲೂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲದೆ ಅಧ್ಯಕ್ಷರು, ಸದಸ್ಯರು ಸಾಮೂಹಿಕ ರಾಜೀನಾಮೆಗೆ ನಿರ್ಧಾರ ಮಾಡಿದ್ದಾರೆ.

ಕಾರ್ಖಾನೆಯ ಡಿಸ್ಟಿಲರಿ ಘಟಕ ವಿಸ್ತರಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಕಾರ್ಖಾನೆಯಲ್ಲಿ 60 KLDP ಸಾಮರ್ಥ್ಯದ ಡಿಸ್ಟಿಲರಿ ಘಟಕ ಕಾರ್ಯ ನಿರ್ವಹಿಸುತ್ತಿದೆ. ಆದ್ರೆ ಅದನ್ನು 150 KLDPಗೆ ವಿಸ್ತರಿಸಲು ಕಾರ್ಖಾನೆ ಮುಂದಾಗಿದೆ. ಕಾರ್ಖಾನೆಯಲ್ಲಿ 60 KLDP ಸಾಮರ್ಥ್ಯದ ಡಿಸ್ಟಿಲರಿ ಘಟಕದಿಂದ ಸ್ಥಳೀಯರಿಗೆ ಸಮಸ್ಯೆಯಾಗುತ್ತಿದ್ದು 150 KLDP ವಿಸ್ತರಿಸಿದರೆ ಮತ್ತಷ್ಟು ಸಮಸ್ಯೆ ಹೆಚ್ಚಾಗುತ್ತೆ. ಹೀಗಾಗಿ ಡಿಸ್ಟಿಲರಿ ಘಟಕ ವಿಸ್ತರಣೆ ಮಾಡದಂತೆ ಆಗ್ರಹಿಸಿದ್ದಾರೆ.

60 KLDP ಸಾಮರ್ಥ್ಯದ ಡಿಸ್ಟಿಲರಿ ಘಟಕದಿಂದ ಅಳಗಂಚಿ ಪುರ, ಮಲ್ಲುಪುರ, ಅಳಗಂಚಿ ಗ್ರಾಮ ಸೇರಿ ಹಲವು ಗ್ರಾಮಗಳಲ್ಲಿನ ಜನ, ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಜೊತೆಗೆ ಗ್ರಾಮ ಪಂಚಾಯಿತಿ ಸದಸ್ಯರು ಕೋರ್ಟ್ ಮೊರೆ ಹೋಗಿದ್ದು ಯಥಾಸ್ಥಿತಿ ಕಾಪಾಡುವಂತೆ ನ್ಯಾಯಾಲಯ ಸೂಚಿಸಿತ್ತು. ಆದ್ರೆ ಕೋರ್ಟ್ ಆದೇಶ ಲೆಕ್ಕಿಸದೆ ಘಟಕ ವಿಸ್ತರಿಸುತ್ತಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ರಾಜೀನಾಮೆ ನೀಡಲು ಗ್ರಾ.ಪಂ. ಸದಸ್ಯರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: ರೈತರಿಗೆ ಹಣ ಪಾವತಿ ಬಾಕಿ ಇಟ್ಟುಕೊಂಡಿರುವ 7 ಸಕ್ಕರೆ ಕಾರ್ಖಾನೆಗಳಿಗೆ 2 ದಿನ ಗಡುವು ನೀಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ