AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಪಿಜಿ ಅನುಮತಿ ಕೊಟ್ಟರೆ ಬೆಂಗಳೂರು-ಮೈಸೂರು ಹೈವೇಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಪ್ರತಾಪ್ ಸಿಂಹ

ಮಾರ್ಚ್​ 12ರಂದು ಬೆಂಗಳೂರು-ಮೈಸೂರು ಹೈವೇಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದು, ಎಸ್​ಪಿಜಿ ಅನುಮತಿ ಕೊಟ್ಟರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಗಂಗಾಧರ​ ಬ. ಸಾಬೋಜಿ
| Edited By: |

Updated on:Mar 01, 2023 | 3:56 PM

Share

ಮೈಸೂರು: ಮಾರ್ಚ್​ 12ರಂದು ಬೆಂಗಳೂರು-ಮೈಸೂರು ಹೈವೇಯನ್ನು (Bengaluru-Mysuru Highway) ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಎಸ್​ಪಿಜಿ ಅನುಮತಿ ಕೊಟ್ಟರೆ ಹೈವೇಯಲ್ಲಿ ರೋಡ್ ಶೋ ಮಾಡ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಒಟ್ಟು 2 ಕಿಲೋ ಮೀಟರ್​ ರೋಡ್ ಶೋ ನಡೆಸಲು ಉದ್ದೇಶಿಸಿದ್ದೇವೆ. ಬಳಿಕ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಬೃಹತ್​ ಸಮಾವೇಶ ನಡೆಯುತ್ತದೆ ಎಂದರು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಸುಮಾರು 3,500 ಕೋಟಿ ವೆಚ್ಚದಲ್ಲಿ 115 ಕಿ.ಮೀ. ಹೈವೇ ನಿರ್ಮಾಣ ಮಾಡಲಾಗಿದೆ. ಎಕ್ಸ್‌ಪ್ರೆಸ್‌ವೇಗೆ ಕಾವೇರಿ ಎಕ್ಸ್‌ಪ್ರೆಸ್‌ವೇ ಎಂದು ಹೆಸರಿಸುವಂತೆ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿಚಾರ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, ಟೋಲ್ ಸಂಗ್ರಹವನ್ನು ಮಾರ್ಚ್ 14ರವರೆಗೆ ಮುಂದೂಡಿದ್ದೇವೆ. ಬೆಂಗಳೂರು-ನಿಡಘಟ್ಟವರೆಗೂ ಟೋಲ್ ಸಂಗ್ರಹ ಮಾಡಲಾಗುತ್ತದೆ. ಸರ್ವಿಸ್ ರಸ್ತೆ ಪೂರ್ಣಗೊಳ್ಳಲು ಜಮೀನು ಕುರಿತ ಕೇಸ್​​ ಬಾಕಿ ಇದೆ‌. ಕೋರ್ಟ್​​ನಲ್ಲಿ ತೀರ್ಮಾನವಾದ ಮೇಲೆ ಸರ್ವಿಸ್ ರಸ್ತೆ ಸಹ ಆರಂಭಿಸುವುದಾಗಿ ಪ್ರತಾಪ್​ ಸಿಂಹ ಹೇಳಿದರು.

ಇದನ್ನೂ ಓದಿ: Toll Rates: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ತಾತ್ಕಾಲಿಕ ಟೋಲ್ ದರಗಳನ್ನು ಇಲ್ಲಿ ಪರಿಶೀಲಿಸಿ

ಬೆಂಗಳೂರಿನಿಂದ ನಿಡಘಟ್ಟವರೆಗಿನ 56-ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಬಳಸುವ ವಾಹನಗಳ ಟೋಲ್ ದರಗಳ ಮಾಹಿತಿಯನ್ನು NHAI ಅಧಿಕಾರಿಗಳು ತಿಳಿಸಿದ್ದಾರೆ. ಕಾರುಗಳು ಮತ್ತು ಇತರ ಲಘು ಮೋಟಾರು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಪಾವತಿಸಬೇಕಾಗುತ್ತದೆ. ಬಸ್‌ಗಳು 460 ರೂ. ಮತ್ತು ಭಾರೀ ಮೋಟಾರು ವಾಹನಗಳು 750-900 ರೂ.ಗಳ ನಡುವೆ ಪಾವತಿಸಬೇಕಾಗಬಹುದು ಎಂದು NHAI ಅಧಿಕಾರಿಗಳು ತಿಳಿಸಿದ್ದರು. ಮೇಲಧಿಕಾರಿಗಳಿಂದ ಅನುಮೋದನೆ ಪಡೆದು ಉದ್ಘಾಟನೆಗೂ ಮುನ್ನ ಟೋಲ್ ದರದ ಬಗ್ಗೆ ಅಧಿಕೃತ ಸೂಚನೆ ಹೊರಡಿಸಲಾಗುವುದು ಎಂದು NHAI ಅಧಿಕಾರಿಗಳು ತಿಳಿಸಿದ್ದರು.

ಇದನ್ನೂ ಓದಿ: Bengaluru-Mysuru Expressway ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇ ಉದ್ಘಾಟನೆ: ಗಡ್ಕರಿ ಘೋಷಣೆ

ಬೆಂಗಳೂರು-ಮೈಸೂರು ನಡುವಿನ ಹೈವೇಯಲ್ಲಿ ಚನ್ನಪಟ್ಟಣದ ಬಳಿ 30 ಎಕರೆಯಲ್ಲಿ ಐಲ್ಯಾಂಡ್ ರೂಪದಲ್ಲಿ ರೆಸ್ಟ್ ಏರಿಯಾ ನಿರ್ಮಾಣ ಮಾಡಲಾಗುತ್ತಿದೆ. ಎಲ್ಲ ಬಗೆಯ ಹೋಟೆಳ್​ಗಳು ಇರಲಿವೆ. ನಾಡಿನ ಬ್ರ್ಯಾಂಡ್ ಪದಾರ್ಥಗಳ ಮಾರಾಟವು ಇರುತ್ತದೆ. 6 ತಿಂಗಳಲ್ಲಿ ಈ ರೆಸ್ಟ್ ಏರಿಯಾ ನಿರ್ಮಾಣವಾಗಲಿದೆ. ಬೆಂಗಳೂರಿನ ನೈಸ್ ಪ್ರವೇಶದ್ವಾರದಿಂದ ಮೈಸೂರಿನ ರಿಂಗ್ ರೋಡ್ ಜಂಕ್ಷನ್‌ವರೆಗೆ 117 ಕಿಮೀ ಉದ್ದದ 10 ಪಥಗಳ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಭಿವೃದ್ಧಿಪಡಿಸಿದೆ. ಈ ಹೆದ್ದಾರಿಯಿಂದಾಗಿ ಎರಡು ನಗರಗಳ ನಡುವಿನ ಪ್ರಯಾಣದ ಸಮಯ ಸರಾಸರಿ ಮೂರು ಗಂಟೆಗಳಿಂದ ಕೇವಲ 90 ನಿಮಿಷಗಳಿಗೆ ಕಡಿತಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:55 pm, Wed, 1 March 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?