AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಪಿಜಿ ಅನುಮತಿ ಕೊಟ್ಟರೆ ಬೆಂಗಳೂರು-ಮೈಸೂರು ಹೈವೇಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಪ್ರತಾಪ್ ಸಿಂಹ

ಮಾರ್ಚ್​ 12ರಂದು ಬೆಂಗಳೂರು-ಮೈಸೂರು ಹೈವೇಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದು, ಎಸ್​ಪಿಜಿ ಅನುಮತಿ ಕೊಟ್ಟರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಗಂಗಾಧರ​ ಬ. ಸಾಬೋಜಿ
| Edited By: |

Updated on:Mar 01, 2023 | 3:56 PM

Share

ಮೈಸೂರು: ಮಾರ್ಚ್​ 12ರಂದು ಬೆಂಗಳೂರು-ಮೈಸೂರು ಹೈವೇಯನ್ನು (Bengaluru-Mysuru Highway) ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಎಸ್​ಪಿಜಿ ಅನುಮತಿ ಕೊಟ್ಟರೆ ಹೈವೇಯಲ್ಲಿ ರೋಡ್ ಶೋ ಮಾಡ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಒಟ್ಟು 2 ಕಿಲೋ ಮೀಟರ್​ ರೋಡ್ ಶೋ ನಡೆಸಲು ಉದ್ದೇಶಿಸಿದ್ದೇವೆ. ಬಳಿಕ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಬೃಹತ್​ ಸಮಾವೇಶ ನಡೆಯುತ್ತದೆ ಎಂದರು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಸುಮಾರು 3,500 ಕೋಟಿ ವೆಚ್ಚದಲ್ಲಿ 115 ಕಿ.ಮೀ. ಹೈವೇ ನಿರ್ಮಾಣ ಮಾಡಲಾಗಿದೆ. ಎಕ್ಸ್‌ಪ್ರೆಸ್‌ವೇಗೆ ಕಾವೇರಿ ಎಕ್ಸ್‌ಪ್ರೆಸ್‌ವೇ ಎಂದು ಹೆಸರಿಸುವಂತೆ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿಚಾರ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, ಟೋಲ್ ಸಂಗ್ರಹವನ್ನು ಮಾರ್ಚ್ 14ರವರೆಗೆ ಮುಂದೂಡಿದ್ದೇವೆ. ಬೆಂಗಳೂರು-ನಿಡಘಟ್ಟವರೆಗೂ ಟೋಲ್ ಸಂಗ್ರಹ ಮಾಡಲಾಗುತ್ತದೆ. ಸರ್ವಿಸ್ ರಸ್ತೆ ಪೂರ್ಣಗೊಳ್ಳಲು ಜಮೀನು ಕುರಿತ ಕೇಸ್​​ ಬಾಕಿ ಇದೆ‌. ಕೋರ್ಟ್​​ನಲ್ಲಿ ತೀರ್ಮಾನವಾದ ಮೇಲೆ ಸರ್ವಿಸ್ ರಸ್ತೆ ಸಹ ಆರಂಭಿಸುವುದಾಗಿ ಪ್ರತಾಪ್​ ಸಿಂಹ ಹೇಳಿದರು.

ಇದನ್ನೂ ಓದಿ: Toll Rates: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ತಾತ್ಕಾಲಿಕ ಟೋಲ್ ದರಗಳನ್ನು ಇಲ್ಲಿ ಪರಿಶೀಲಿಸಿ

ಬೆಂಗಳೂರಿನಿಂದ ನಿಡಘಟ್ಟವರೆಗಿನ 56-ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಬಳಸುವ ವಾಹನಗಳ ಟೋಲ್ ದರಗಳ ಮಾಹಿತಿಯನ್ನು NHAI ಅಧಿಕಾರಿಗಳು ತಿಳಿಸಿದ್ದಾರೆ. ಕಾರುಗಳು ಮತ್ತು ಇತರ ಲಘು ಮೋಟಾರು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಪಾವತಿಸಬೇಕಾಗುತ್ತದೆ. ಬಸ್‌ಗಳು 460 ರೂ. ಮತ್ತು ಭಾರೀ ಮೋಟಾರು ವಾಹನಗಳು 750-900 ರೂ.ಗಳ ನಡುವೆ ಪಾವತಿಸಬೇಕಾಗಬಹುದು ಎಂದು NHAI ಅಧಿಕಾರಿಗಳು ತಿಳಿಸಿದ್ದರು. ಮೇಲಧಿಕಾರಿಗಳಿಂದ ಅನುಮೋದನೆ ಪಡೆದು ಉದ್ಘಾಟನೆಗೂ ಮುನ್ನ ಟೋಲ್ ದರದ ಬಗ್ಗೆ ಅಧಿಕೃತ ಸೂಚನೆ ಹೊರಡಿಸಲಾಗುವುದು ಎಂದು NHAI ಅಧಿಕಾರಿಗಳು ತಿಳಿಸಿದ್ದರು.

ಇದನ್ನೂ ಓದಿ: Bengaluru-Mysuru Expressway ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇ ಉದ್ಘಾಟನೆ: ಗಡ್ಕರಿ ಘೋಷಣೆ

ಬೆಂಗಳೂರು-ಮೈಸೂರು ನಡುವಿನ ಹೈವೇಯಲ್ಲಿ ಚನ್ನಪಟ್ಟಣದ ಬಳಿ 30 ಎಕರೆಯಲ್ಲಿ ಐಲ್ಯಾಂಡ್ ರೂಪದಲ್ಲಿ ರೆಸ್ಟ್ ಏರಿಯಾ ನಿರ್ಮಾಣ ಮಾಡಲಾಗುತ್ತಿದೆ. ಎಲ್ಲ ಬಗೆಯ ಹೋಟೆಳ್​ಗಳು ಇರಲಿವೆ. ನಾಡಿನ ಬ್ರ್ಯಾಂಡ್ ಪದಾರ್ಥಗಳ ಮಾರಾಟವು ಇರುತ್ತದೆ. 6 ತಿಂಗಳಲ್ಲಿ ಈ ರೆಸ್ಟ್ ಏರಿಯಾ ನಿರ್ಮಾಣವಾಗಲಿದೆ. ಬೆಂಗಳೂರಿನ ನೈಸ್ ಪ್ರವೇಶದ್ವಾರದಿಂದ ಮೈಸೂರಿನ ರಿಂಗ್ ರೋಡ್ ಜಂಕ್ಷನ್‌ವರೆಗೆ 117 ಕಿಮೀ ಉದ್ದದ 10 ಪಥಗಳ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಭಿವೃದ್ಧಿಪಡಿಸಿದೆ. ಈ ಹೆದ್ದಾರಿಯಿಂದಾಗಿ ಎರಡು ನಗರಗಳ ನಡುವಿನ ಪ್ರಯಾಣದ ಸಮಯ ಸರಾಸರಿ ಮೂರು ಗಂಟೆಗಳಿಂದ ಕೇವಲ 90 ನಿಮಿಷಗಳಿಗೆ ಕಡಿತಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:55 pm, Wed, 1 March 23

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ