AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Mysore: 45 ನಿಮಿಷದಲ್ಲಿ 19 ಆಸನ; ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗಾಭ್ಯಾಸ

6.30ರಿಂದ 7.45ರ ವರೆಗೂ ಯೋಗಭ್ಯಾಸ ನಡೆಸಿದ ಮೋದಿ ಅವರು, 45 ನಿಮಿಷಗಳಲ್ಲಿ 15,000 ಮಂದಿಯೊಂದಿಗೆ 19 ಆಸನಗಳನ್ನು ಮಾಡಿದರು.

PM Modi in Mysore: 45 ನಿಮಿಷದಲ್ಲಿ 19 ಆಸನ; ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗಾಭ್ಯಾಸ
ಮೈಸೂರು ಅರಮನೆ ಆವರಣದಲ್ಲಿ ನಡೆದ ವಿಶ್ವ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jun 21, 2022 | 10:00 AM

Share

ಮೈಸೂರು: ವಿಶ್ವ ಯೋಗದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೈಸೂರು ಅರಮನೆ ಮೈದಾನದಲ್ಲಿ (Mysore Palace) ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪೂರ್ವ ನಿಗದಿತ 6.30ರ ಒಳಗೆ ಮೋದಿ ಮೈಸೂರು ಅರಮನೆಗೆ ಬಂದ ಮೋದಿ ಅವರನ್ನು ರಾಜಮಾತೆ ಪ್ರಮೋದ ದೇವಿ ಸ್ವಾಗತಿಸಿದರು. 6.30ರಿಂದ 7.45ರ ವರೆಗೂ ಯೋಗಭ್ಯಾಸ ನಡೆಸಿದ ಮೋದಿ ಅವರು, 45 ನಿಮಿಷಗಳಲ್ಲಿ 15,000 ಮಂದಿಯೊಂದಿಗೆ 19 ಆಸನಗಳನ್ನು ಮಾಡಿದರು.

ಮುಂಜಾನೆ 7ರಿಂದ 7.45ರ ವರೆಗೆ ನಡೆದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಯೋಗ ಪದ್ಧತಿಯಂತೆ ಯೋಗಚಕ್ರದ ವಿವಿಧ ಅಂಗಗಳನ್ನು ಪ್ರದರ್ಶಿಸಲಾಯಿತು. 1 ನಿಮಿಷ ಪ್ರಾರ್ಥನೆ, 4 ನಿಮಿಷ ಚಲನಕ್ರಿಯೆ, 25 ನಿಮಿಷ ವಿವಿಧ ಯೋಗಾಸನಗಳು, ಬಳಿಕ 14 ನಿಮಿಷ ಪ್ರಾಣಾಯಾಮ, ಧ್ಯಾನ, ಸಂಕಲ್ಪದ ಕ್ರಿಯೆಗಳು ನಡೆದವು. ಶಾಂತಿಮಂತ್ರದೊಂದಿಗೆ ಯೋಗ ಪ್ರದರ್ಶನ ಮುಕ್ತಾಯವಾಯಿತು.

ನೆರೆದಿದ್ದ 15 ಸಾವಿರ ಯೋಗಾಭ್ಯಾಸಿಗಳೊಂದಿಗೆ ಪ್ರಧಾನಿ ಸಹ ತಾಡಾಸನ, ವೃಕ್ಷಾಸನ, ಪಾದಹಸ್ತಾಸನ-1, ಪಾದಹಸ್ತಾಸನ-2, ಅರ್ಧಚಕ್ರಾಸನ, ತ್ರಿಕೋನಾಸನ, ಸಮದಂಡಾಸನ, ಭದ್ರಾಸನ, ವಜ್ರಾಸನ, ಅರ್ಧಉಷ್ಟ್ರಾಸನ, ಉಷ್ಟ್ರಾಸನ, ಶಶಂಕಾಸನ, ಉತ್ಥಾನ ಮಂಡೂಕಾಸನ, ವಕ್ರಾಸನ, ಮಕರಾಸನ, ಸರಳ ಭುಜಂಗಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಪವನಮುಕ್ತಾಸನ, ಶವಾಸನ ಮಾಡಿದರು.

ಯೋಗಾಸನ ಅಭ್ಯಾಸಕ್ಕೂ ಮೊದಲು ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಭಾರತವು ಸದಾ ವಿಶ್ವದ ಒಳಿತು ಬಯಸಿದೆ. ಈ ಬಾರಿಯ ವಿಶ್ವ ಯೋಗದಿನದ ಆಶಯವೂ ಇದಕ್ಕೆ ಪೂರಕವಾಗಿದೆ. ಮಾನವತೆಗೆ ಯೋಗ ಎನ್ನುವುದು ಈ ವರ್ಷದ ಆಶಯ. ನಮ್ಮ ಋಷಿಮುನಿಗಳು ‘ಯೋಗದಿಂದ ವಿಶ್ವಕ್ಕೆ ಶಾಂತಿ’ ಎಂದು ಪ್ರತಿಪಾದಿಸಿದ್ದರು. ಯೋಗದಿಂದ ಸಮಾಜಕ್ಕೆ, ದೇಶಕ್ಕೆ, ವಿಶ್ವಕ್ಕೆ ಶಾಂತಿ ದೊರೆಯುತ್ತದೆ. ಇದನ್ನು ಕೆಲವರು ವಿಪರೀತದ ಚಿಂತನೆ ಎಂದುಕೊಳ್ಳಬಹುದು. ಆದರೆ ಭಾರತೀಯರಿಗೆ ಇದು ಹೊಸದಲ್ಲ. ಪಿಂಡದಲ್ಲಿರುವುದು ಬ್ರಹ್ಮಾಂಡದಲ್ಲಿದೆ ಎನ್ನುವುದು ಭಾರತೀಯರ ಚಿಂತನೆ. ನಾವು ಬದಲಾಗಲು ಆರಂಭಿಸಿದರೆ ಜಗತ್ತು ಬದಲಾಗುವುದು ಆರಂಭಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ ರಾಜವಂಸ್ಥರಾದ ಪ್ರಮೋದಾದೇವಿ, ಯದುವೀರ್ ಒಡೆಯರ್, ಕೇಂದ್ರ ಆಯುಷ್ ಇಲಾಖೆ​ ಸಚಿವ ಸರ್ಬಾನಂದ ಸೋನೊವಾಲ, ಸಚಿವರಾದ ಡಾ.ಕೆ.ಸುಧಾಕರ್​, ಎಸ್​.ಟಿ.ಸೋಮಶೇಖರ್, ಸಂಸದ ಪ್ರತಾಪ್​ ಸಿಂಹ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್