AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಸಾಮೂಹಿತ ಅತ್ಯಾಚಾರ, ಶೂಟೌಟ್ ಪ್ರಕರಣ; ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು

8 ಜನರ ವಿರುದ್ಧ 1,410 ಪುಟಗಳ ಚಾರ್ಜ್​ಶೀಟ್ 2ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಶೂಟೌಟ್ ಮತ್ತು ದರೋಡೆ ಪ್ರಕರಣ ಸಂಬಂಧ 7 ಜನರನ್ನು ಬಂಧಿಸಲಾಗಿದೆ, ಒಬ್ಬ ತಲೆ ಮರೆಸಿಕೊಂಡಿದ್ದಾನೆ.

ಮೈಸೂರಿನಲ್ಲಿ ಸಾಮೂಹಿತ ಅತ್ಯಾಚಾರ, ಶೂಟೌಟ್ ಪ್ರಕರಣ; ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 28, 2021 | 8:57 AM

Share

ಮೈಸೂರು: ಜಿಲ್ಲೆಯಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ಶೂಟೌಟ್, ದರೋಡೆ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್​ಶೀಟ್​ನ ಪೊಲೀಸರು ಸಲ್ಲಿಸಿದ್ದಾರೆ. ಎರಡು ಪ್ರಕರಣದ ಚಾರ್ಜ್​ಶೀಟ್​ನ ಪೊಲೀಸರು ಸಲ್ಲಿಸಿದ್ದಾರೆ. ಇದೇ ವರ್ಷ ಆಗಸ್ಟ್ 23 ರಂದು ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಶೂಟೌಟ್ ಮತ್ತು ದರೋಡೆ ನಡೆದಿತ್ತು. ಈ ವೇಳೆ ದಡದಹಳ್ಳಿ ಚಂದ್ರು ಮೃತಪಟ್ಟಿದ್ದರು. 8 ಜನರ ವಿರುದ್ಧ 1,410 ಪುಟಗಳ ಚಾರ್ಜ್​ಶೀಟ್ 2ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಶೂಟೌಟ್ ಮತ್ತು ದರೋಡೆ ಪ್ರಕರಣ ಸಂಬಂಧ 7 ಜನರನ್ನು ಬಂಧಿಸಲಾಗಿದೆ, ಒಬ್ಬ ತಲೆ ಮರೆಸಿಕೊಂಡಿದ್ದಾನೆ.

ಇನ್ನು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್​ಶೀಟ್ ಕೂಡ ಸಲ್ಲಿಕೆ ಮಾಡಲಾಗಿದೆ. ಪೊಲೀಸರು 6 ಮಂದಿ ವಿರುದ್ಧ ಮೂರನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ 1,499 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ಬಂಧಿತ 7 ಜನರಲ್ಲಿ ಒಬ್ಬನ ಪಾತ್ರ ಇಲ್ಲ. ಹೀಗಾಗಿ ಆತನನ್ನು ಕೈ ಬಿಟ್ಟು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

ಗುರುತು ಪತ್ತೆ ಹಚ್ಚುವ ಕಾರ್ಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯಿಂದ ಆರೋಪಿಗಳ ಗುರುತು ಪತ್ತೆ ಹಚ್ಚುವ ಕಾರ್ಯ ಸೆ.23ಕ್ಕೆ ನಡೆದಿದೆ. ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಗುರುತು ಪತ್ತೆ ಕಾರ್ಯ ನಡೆಸಲಾಗಿತ್ತು. ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿಗಳನ್ನು ಪತ್ತೆ ಮಾಡುವ ಕಾರ್ಯ ನಡೆದಿದೆ. ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತ ಯುವತಿ ಹೇಳಿಕೆ ದಾಖಲು ಮಾಡಲಾಗಿದೆ. ಬಳಿಕ, ಸೆ.23ಕ್ಕೆ ಜೈಲಿನಲ್ಲಿ ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯ ಮಾಡಲಾಗಿದೆ.

ಇದನ್ನೂ ಓದಿ

ಸುಳ್ಳು ಹೇಳುತ್ತೀರಾ? ಜೋಕೆ! ಅತ್ಯಂತ ಪರಿಣಾಮಕಾರಿ ಸುಳ್ಳು-ಪತ್ತೆ ತಂತ್ರಜ್ಞಾನ ಅಭಿವೃದ್ಧಿ; ಇದು ಕಾರ್ಯ ನಿರ್ವಹಿಸೋದು ಹೇಗೆ?

ಸ್ವಾತಂತ್ರ್ಯ ಬಂದಿದ್ದು ಕೇವಲ ಮಹಾತ್ಮ ಗಾಂಧಿಯಿಂದ ಎಂಬುದು ತಪ್ಪು; ಕಾಂಗ್ರೆಸ್​ ವಿರುದ್ಧ ಮಧ್ಯಪ್ರದೇಶ ಸಿಎಂ ಅಸಮಾಧಾನ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್