AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಸಾಮೂಹಿತ ಅತ್ಯಾಚಾರ, ಶೂಟೌಟ್ ಪ್ರಕರಣ; ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು

8 ಜನರ ವಿರುದ್ಧ 1,410 ಪುಟಗಳ ಚಾರ್ಜ್​ಶೀಟ್ 2ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಶೂಟೌಟ್ ಮತ್ತು ದರೋಡೆ ಪ್ರಕರಣ ಸಂಬಂಧ 7 ಜನರನ್ನು ಬಂಧಿಸಲಾಗಿದೆ, ಒಬ್ಬ ತಲೆ ಮರೆಸಿಕೊಂಡಿದ್ದಾನೆ.

ಮೈಸೂರಿನಲ್ಲಿ ಸಾಮೂಹಿತ ಅತ್ಯಾಚಾರ, ಶೂಟೌಟ್ ಪ್ರಕರಣ; ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Nov 28, 2021 | 8:57 AM

Share

ಮೈಸೂರು: ಜಿಲ್ಲೆಯಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ಶೂಟೌಟ್, ದರೋಡೆ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್​ಶೀಟ್​ನ ಪೊಲೀಸರು ಸಲ್ಲಿಸಿದ್ದಾರೆ. ಎರಡು ಪ್ರಕರಣದ ಚಾರ್ಜ್​ಶೀಟ್​ನ ಪೊಲೀಸರು ಸಲ್ಲಿಸಿದ್ದಾರೆ. ಇದೇ ವರ್ಷ ಆಗಸ್ಟ್ 23 ರಂದು ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಶೂಟೌಟ್ ಮತ್ತು ದರೋಡೆ ನಡೆದಿತ್ತು. ಈ ವೇಳೆ ದಡದಹಳ್ಳಿ ಚಂದ್ರು ಮೃತಪಟ್ಟಿದ್ದರು. 8 ಜನರ ವಿರುದ್ಧ 1,410 ಪುಟಗಳ ಚಾರ್ಜ್​ಶೀಟ್ 2ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಶೂಟೌಟ್ ಮತ್ತು ದರೋಡೆ ಪ್ರಕರಣ ಸಂಬಂಧ 7 ಜನರನ್ನು ಬಂಧಿಸಲಾಗಿದೆ, ಒಬ್ಬ ತಲೆ ಮರೆಸಿಕೊಂಡಿದ್ದಾನೆ.

ಇನ್ನು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್​ಶೀಟ್ ಕೂಡ ಸಲ್ಲಿಕೆ ಮಾಡಲಾಗಿದೆ. ಪೊಲೀಸರು 6 ಮಂದಿ ವಿರುದ್ಧ ಮೂರನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ 1,499 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ಬಂಧಿತ 7 ಜನರಲ್ಲಿ ಒಬ್ಬನ ಪಾತ್ರ ಇಲ್ಲ. ಹೀಗಾಗಿ ಆತನನ್ನು ಕೈ ಬಿಟ್ಟು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

ಗುರುತು ಪತ್ತೆ ಹಚ್ಚುವ ಕಾರ್ಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯಿಂದ ಆರೋಪಿಗಳ ಗುರುತು ಪತ್ತೆ ಹಚ್ಚುವ ಕಾರ್ಯ ಸೆ.23ಕ್ಕೆ ನಡೆದಿದೆ. ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಗುರುತು ಪತ್ತೆ ಕಾರ್ಯ ನಡೆಸಲಾಗಿತ್ತು. ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿಗಳನ್ನು ಪತ್ತೆ ಮಾಡುವ ಕಾರ್ಯ ನಡೆದಿದೆ. ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತ ಯುವತಿ ಹೇಳಿಕೆ ದಾಖಲು ಮಾಡಲಾಗಿದೆ. ಬಳಿಕ, ಸೆ.23ಕ್ಕೆ ಜೈಲಿನಲ್ಲಿ ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯ ಮಾಡಲಾಗಿದೆ.

ಇದನ್ನೂ ಓದಿ

ಸುಳ್ಳು ಹೇಳುತ್ತೀರಾ? ಜೋಕೆ! ಅತ್ಯಂತ ಪರಿಣಾಮಕಾರಿ ಸುಳ್ಳು-ಪತ್ತೆ ತಂತ್ರಜ್ಞಾನ ಅಭಿವೃದ್ಧಿ; ಇದು ಕಾರ್ಯ ನಿರ್ವಹಿಸೋದು ಹೇಗೆ?

ಸ್ವಾತಂತ್ರ್ಯ ಬಂದಿದ್ದು ಕೇವಲ ಮಹಾತ್ಮ ಗಾಂಧಿಯಿಂದ ಎಂಬುದು ತಪ್ಪು; ಕಾಂಗ್ರೆಸ್​ ವಿರುದ್ಧ ಮಧ್ಯಪ್ರದೇಶ ಸಿಎಂ ಅಸಮಾಧಾನ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ