Mysore News: ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರು: ವಿಶೇಷ ವಿಮಾನದ ಮೂಲಕ ಅಹಮದಾಬಾದ್​ಗೆ ಪುತ್ರ ಪ್ರಹ್ಲಾದ್ ಮೋದಿ

| Updated By: ವಿವೇಕ ಬಿರಾದಾರ

Updated on: Dec 28, 2022 | 6:11 PM

ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಪುತ್ರ ಪ್ರಹ್ಲಾದ್ ಮೋದಿ ವಿಶೇಷ ವಿಮಾನದ ಮೂಲಕ ಅಹಮದಾಬಾದ್​ಗೆ ತೆರಳಲಿದ್ದಾರೆ.

Mysore News: ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರು: ವಿಶೇಷ ವಿಮಾನದ ಮೂಲಕ ಅಹಮದಾಬಾದ್​ಗೆ ಪುತ್ರ ಪ್ರಹ್ಲಾದ್ ಮೋದಿ
ಪ್ರಹ್ಲಾದ್​ ಮೋದಿ, ಹೀರಾಬೆನ್​ ಮೋದಿ
Follow us on

ಮೈಸೂರು: ನಿನ್ನೆ (ಡಿ.27) ರಸ್ತೆ ಅಪಘಾತದಲ್ಲಿ (Car Accident) ಗಾಯಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸಹೋದರ ಪ್ರಹ್ಲಾದ್ ಮೋದಿ (Prahlad Modi) ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು (ಡಿ.28) ತಾಯಿ ಹೀರಾಬೆನ್ ಮೋದಿ (Heeraben Modi) ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಪುತ್ರ ಪ್ರಹ್ಲಾದ್ ಕುಟುಂಬ 8 ಸೀಟರ್​ನ ವಿಶೇಷ ವಿಮಾನದ ಮೂಲಕ ಅಹಮದಾಬಾದ್‌ಗೆ ತೆರಳಲಿದ್ದಾರೆ.

ಇನ್ನೂ 8 ಸೀಟರ್ ವಿಮಾನ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ವೈದ್ಯರ ಸಲಹೆ ಪಡೆದ ನಂತರ ರಾತ್ರಿ 8 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ಪ್ರಯಾಣಿಸುತ್ತಾರೆ. ವಿಮಾನ ಮೈಸೂರು-ಗೋವಾ ಮಾರ್ಗವಾಗಿ‌ ಅಹಮದಾಬಾದ್‌ಗೆ ತಲುಪಲಿದೆ. ಈ ಮಧ್ಯೆ ಪ್ರಹ್ಲಾದ್ ಮೋದಿ, ಪುತ್ರಿ, ಅಳಿಯ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಹೀರಾಬೆನ್​ ಆರೋಗ್ಯ ಚೇತರಿಕೆಗಾಗಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮೋದಿ ತಾಯಿ ಹೀರಾಬೆನ್ ಆರೋಗ್ಯ ಏರುಪೇರು

ಪ್ರಧಾನಿ ನರೇಂದ್ರ ಮೋದಿ ಅವರ ಶತಾಯುಷಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿಯನ್ನು ಭೇಟಿಯಾಗಿ ಮೋದಿ ಭೇಟಿಯಾಗಿ ವಾಪಸ್​ ಆಗಿದ್ದಾರೆ. ಹೀರಾಬೆನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಯುಎನ್​ ಮೆಹ್ತಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಪ್ರಹ್ಲಾದ್ ಮೋದಿ ಕಾರು ಅಪಘಾತ

ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತ ಗೊಂಡಿರುವ ಘಟನೆ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿದೆ. ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿದೆ.

ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನೊಳಗಿನ ಏರ್ ಬ್ಯಾಗ್ ಓಪನ್ ಆಗಿವೆ. ಇದರಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಹ್ಲಾದ್ ಮೋದಿ ಅವರ ದವಡೆಗೆ ಗಾಯಗಳಾಗಿದ್ದು, ಅವರ ಸೊಸೆ ತಲೆಗೆ ಗಾಯವಾಗಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಇನ್ನು ಆಸ್ಪತ್ರೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಸುತ್ತೂರು ಶ್ರೀಗಳು ಭೇಟಿ ನೀಡಿ ಪ್ರಹ್ಲಾದ್ ಮೋದಿ ಕುಟುಂಬ ಸದಸ್ಯರ ಆರೋಗ್ಯ ವಿಚಾರಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:10 pm, Wed, 28 December 22