AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ vs ರಾಜಮನೆತನ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಗೆ ರಾಜಮಾತೆ ವಿರೋಧ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ಸರ್ಕಾರ ಮತ್ತು ರಾಜಮನೆತನದ ನಡುವೆ ಗುದ್ದಾಟ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದು, ಇದಕ್ಕೆ ಯದುವಂಶದ ಪ್ರಮೋದಾದೇವಿ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ಕಾರ vs ರಾಜಮನೆತನ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಗೆ ರಾಜಮಾತೆ ವಿರೋಧ
ಪ್ರಮೋದಾದೇವಿ ಒಡೆಯರ್, ಸಿದ್ದರಾಮಯ್ಯ
ರಾಮ್​, ಮೈಸೂರು
| Edited By: |

Updated on:Sep 03, 2024 | 3:30 PM

Share

ಮೈಸೂರು, ಸೆಪ್ಟೆಂಬರ್​ 03: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತವರು ಜಿಲ್ಲೆ ಮೈಸೂರಿಗೆ ತೆರಳಿದ್ದಾರೆ. ಇಂದು (ಸೆ.03) ತಾಯಿ ಚಾಮುಂಡೇಶ್ವರಿ (Chamundeshwari) ದರ್ಶನ ಪಡೆಯಲಿದ್ದಾರೆ. ದೇವಿ ದರ್ಶನದ ನಂತರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ (Chamundeshwari Development Authority) ಸಭೆ ನಡೆಸಲಿದ್ದಾರೆ. ಆದರೆ ಈ ಸಭೆಗೆ ರಾಜಮನೆತನದಿಂದ ವಿರೋಧ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಪ್ರಾಧಿಕಾರ ಸಭೆಗೆ ಹಾಜರಾಗುವಂತೆ ಯದುವಂಶದ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಅವರಿಗೆ ಪತ್ರ ಬರೆಯಲಾಗಿದೆ. ಹಾಗೇ, ಮೈಸೂರು ಭಾಗದ ಶಾಸಕರು ಸಂಸದರು ಅಧಿಕಾರಿಗಳು ಕೂಡ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಸಭೆಗೆ ಹಾಜರಾಗುವಂತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರು ಪ್ರಮೋದಾದೇವಿ ಒಡೆಯರ್ ಅವರಿಗೆ ಸೂಚನಾ ಪತ್ರ ಕಳುಹಿಸಿದ್ದಾರೆ. ಆದರೆ, ಪ್ರಮೋದಾದೇವಿ ಒಡೆಯರ್ ಅವರು ಪ್ರಾಧಿಕಾರದ ಸಭೆಗೆ ಆಕ್ಷೇಪ ವ್ಯಕ್ಯಪಡಿಸಿದ್ದಾರೆ ಎಂದು ಟಿವಿ9ಗೆ ಮೂಲಗಳಿಂದ ಮಾಹಿತಿ ದೊರೆತಿದೆ.

ಇದನ್ನೂ ಓದಿ: ಸಿಎಂ ಭಾಷಣದ ವೇಳೆ ಅಜಾನ್: ಮಾತು ಅರ್ಧಕ್ಕೆ ನಿಲ್ಲಿಸಿ ಸೈಲೆಂಟ್ ಆಗಿ ನಿಂತ ಸಿದ್ದರಾಮಯ್ಯ, ವಿಡಿಯೋ ಇಲ್ಲಿದೆ

“ಸೆಪ್ಟೆಂಬರ್​​ 3 ರಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗಿಯಾಗಲು ಸೂಚನಾ ಪತ್ರ ನೀಡಿದ್ದೀರಿ. ಪ್ರಾಧಿಕಾರದ ವಿಚಾರ ಹೈಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿದೆ. ಈಗಾಗಲೆ ನ್ಯಾಯಾಲಯ ಪ್ರಾಧಿಕಾರದ ವಿಚಾರಕ್ಕೆ ತಡೆ ನೀಡಿ, ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ಹೀಗಿದ್ದರೂ ತಾವು ಸಭೆ ನಡೆಸುತ್ತಿರುವುದು ಕಾನೂನುಬಾಹಿರ. ಒಂದು ವೇಳೆ ಸಭೆ ನಡೆಸಿದರೆ ಅದು ನ್ಯಾಯಾಲಯದ ತಡೆಯಾಜ್ಞೆಯ ಉಲ್ಲಂಘನೆಯಾಗುತ್ತದೆ” ಎಂದು ಪ್ರಾಧಿಕಾರದ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.

ಏನಿದು ವಿವಾದ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಆಕ್ಷೇಪ ವ್ಯಕ್ತಪಡಿಸಿ ಪ್ರಮೋದಾದೇವಿ ಒಡೆಯರ್​ ಅವರು ಜುಲೈ 26 ರಂದು ತಡೆಯಾಜ್ಞೆ ತಂದಿದ್ದರು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಜೂನ್​ 28 ರಂದು ಆದೇಶ ಹೊರಡಿಸಿತ್ತು. ಜುಲೈ 1 ರಿಂದಲೇ ಕಾಯ್ದೆ ಜಾರಿಗೆ ಬಂದಿದೆ. ಹೀಗಾಗಿ ತಡೆಯಾಜ್ಞೆ ಮಧ್ಯಂತರ ಆದೇಶ ತೆರವು ಮಾಡಬೇಕು ಎಂದು ಮನವಿ ಮಾಡಿದರು.

ಪ್ರಮೋದಾದೇವಿ ಒಡೆಯರ್​ ಪರ ವಕೀಲರು ಮತ್ತೆ ಮಧ್ಯಂತರ ಆದೇಶವನ್ನು ನೀಡಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಒಡೆಯರ್​ ಪರ ವಕೀಲರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್​ 5ಕ್ಕೆ ಮುಂದೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Tue, 3 September 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ