AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದೆ ಮೈಸೂರು ಕಟ್ಟಿಸಿದ್ದು ನಾನೇ ಅಂತಾರೆ ಪ್ರತಾಪ್ ಸಿಂಹ! ಎಮ್​ಎಲ್​ಸಿ ವಿಶ್ವನಾಥ್ ಮತ್ತೆ ವಾಗ್ದಾಳಿ

ಪ್ರತಾಪ್ ಸಿಂಹ ತಮ್ಮ ಸ್ಥಾನಕ್ಕೆ ತಕ್ಕಂತೆ ಗೌರವದಿಂದ ಮಾತನಾಡಲಿ. ಅವರ ನಿನ್ನೆಯ ಪತ್ರವೂ ಸಂಸದರ ಸ್ಥಾನಕ್ಕೆ ಗೌರವ ತರುವುದಿಲ್ಲ. ದಶಪಥ ರಸ್ತೆ ಯೋಜನೆ ಹಿಂದಿನ ಸರ್ಕಾರದ್ದೆಂಬುದಕ್ಕೆ ದಾಖಲೆ ಇದೆ. ಹೀಗಾಗಿ ಯೋಜನೆ ತಮ್ಮದೆಂದು ಹೇಳಿಕೊಳ್ಳುವುದು ಸರಿಯಲ್ಲ ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ರು.

ಮುಂದೆ ಮೈಸೂರು ಕಟ್ಟಿಸಿದ್ದು ನಾನೇ ಅಂತಾರೆ ಪ್ರತಾಪ್ ಸಿಂಹ! ಎಮ್​ಎಲ್​ಸಿ ವಿಶ್ವನಾಥ್ ಮತ್ತೆ ವಾಗ್ದಾಳಿ
ಸಂಸದ ಪ್ರತಾಪ್ ಸಿಂಹ, ಹೆಚ್.ವಿಶ್ವನಾಥ್
Follow us
TV9 Web
| Updated By: ಆಯೇಷಾ ಬಾನು

Updated on:Sep 06, 2021 | 11:34 AM

ಮೈಸೂರು: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕ್ರೆಡಿಟ್ ವಿಚಾರಕ್ಕೆ ಸಂಬಂಧಿಸಿ ಪ್ರತಾಪ್ ಸಿಂಹ(Pratap Simha) ವಿರುದ್ಧ MLC H.ವಿಶ್ವನಾಥ್(H Vishwanath) ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಮುಂದೆ ಮೈಸೂರು ಕಟ್ಟಿಸಿದ್ದು ನಾನೇ ಅಂತಾರೆ ಪ್ರತಾಪ್ ಸಿಂಹ ಎಂದು ಗುಡುಗಿದ್ದಾರೆ.

ಪ್ರತಾಪ್ ಸಿಂಹ ತಮ್ಮ ಸ್ಥಾನಕ್ಕೆ ತಕ್ಕಂತೆ ಗೌರವದಿಂದ ಮಾತನಾಡಲಿ. ಅವರ ನಿನ್ನೆಯ ಪತ್ರವೂ ಸಂಸದರ ಸ್ಥಾನಕ್ಕೆ ಗೌರವ ತರುವುದಿಲ್ಲ. ದಶಪಥ ರಸ್ತೆ ಯೋಜನೆ ಹಿಂದಿನ ಸರ್ಕಾರದ್ದೆಂಬುದಕ್ಕೆ ದಾಖಲೆ ಇದೆ. ಹೀಗಾಗಿ ಯೋಜನೆ ತಮ್ಮದೆಂದು ಹೇಳಿಕೊಳ್ಳುವುದು ಸರಿಯಲ್ಲ ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ರು.

ಇನ್ನು ಸಂಪುಟದಲ್ಲಿ ಉಳಿದಿರುವ ನಾಲ್ಕು ಸಚಿವ ಸ್ಥಾನ ವಿಚಾರಕ್ಕೆ ಸಂಬಂಧಿಸಿ ಯಾವುದೇ ಕಾರಣಕ್ಕೂ ಅದನ್ನು ಸಿಎಂ ಇಟ್ಟುಕೊಳ್ಳಬಾರದು. ಖಾತೆಗಳನ್ನು ಆದಷ್ಟು ಬೇಗ ಹಂಚಿಕೆ ಮಾಡಬೇಕು. ಬಹುಶಃ ಕಲಾಪ ಮುಗಿದ ನಂತರ ಹಂಚಿಕೆ ಮಾಡಲಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಎಸ್‌ವೈ ನೇತೃತ್ವದ ಸರ್ಕಾರ ಕನೆಕ್ಟಿಂಗ್ ಫ್ಯಾಮಿಲಿ ಆಗಿತ್ತು. ಈಗಿನ ಬೊಮ್ಮಾಯಿ ಸರ್ಕಾರ ಕನೆಕ್ಟಿಂಗ್ ಪೀಪಲ್ ಆಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ನೆರಳಲ್ಲ. ಸಿಎಂ ಬೊಮ್ಮಾಯಿ ರಾಜ್ಯಕ್ಕೆ ಹೊಸ ಭರವಸೆ ಮೂಡಿಸಿದ್ದಾರೆ ಎಂದು ಹೆಚ್.ವಿಶ್ವನಾಥ್ ಸಿಎಂ ಬೊಮ್ಮಾಯಿಯವರನ್ನು ಹೊಗಳಿದ್ದಾರೆ. ಹಾಗೂ ಜನರ ಸುತ್ತ ಅಭಿವೃದ್ದಿ ಬೇಕು. ಅಭಿವೃದ್ದಿ ಸುತ್ತ ಜನ ಸುತ್ತಬಾರದು ಅನ್ನೋದನ್ನು ತೋರಿಸಿದ್ದಾರೆ. ಮುಂದಿನ ನಾಯಕತ್ವ ಬೊಮ್ಮಾಯಿ ನೇತೃತ್ವ ಎಂದು ಅಮಿತ್ ಶಾ ಹೇಳಿಕೆಗೆ ವಿಶ್ವನಾಥ್ ಬೆಂಬಲ ನೀಡಿದ್ದಾರೆ.

ಯಾರು ಸಿಎಂ ಪಕ್ಷದ ಅಧ್ಯಕ್ಷರಾಗಿರುತ್ತಾರೋ ಅವರದ್ದೆ ನಾಯಕತ್ವ ಇರುತ್ತದೆ. ಸಾಮೂಹಿಕ ನಾಯಕತ್ವ ಇದ್ದರೂ ಒಬ್ಬ ಮೇಟಿ ಬೇಕು. ಅದು ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ ಆಗಿದ್ದಾರೆ ಎಂದರು.

ಇದನ್ನೂ ಓದಿ: ವಿಶ್ವನಾಥ್ ಟೀಕೆ ಮಾಡದ ವ್ಯಕ್ತಿಗಳೇ ಇಲ್ಲ; ಟ್ರಂಪ್, ಬೈಡೆನ್ ಅವರನ್ನೂ ಬಿಟ್ಟಿಲ್ಲ, ಗ್ಯಾಪ್​ನಲ್ಲಿ ನನ್ನ ಟೀಕೆ ಮಾಡಿದ್ದಾರೆ: ಸಂಸದ ಪ್ರತಾಪ್ ಸಿಂಹ

ಮಾಜಿ ಸಚಿವ ಡಾ.ಮಹದೇವಪ್ಪಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು

Published On - 11:30 am, Mon, 6 September 21

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ