AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ 92 ದೇಗುಲಗಳು ಇವೆ; ಅವುಗಳನ್ನು ಮುಟ್ಟಲು ಬಿಡಲ್ಲ- ನಂಜನಗೂಡು ದೇಗುಲ ತೆರವು ಬಳಿಕ ಪ್ರತಾಪ್ ಸಿಂಹ ವಾಗ್ದಾಳಿ

Pratap Simha: ಮೈಸೂರಿನಲ್ಲಿ ಇನ್ನು 92 ದೇವಾಲಯಗಳು ವಿವಿಧ ಮೂಲೆಗಳಲ್ಲಿವೆ. ಅವುಗಳನ್ನು ಯಾವುದೇ ಕಾರಣಕ್ಕೂ ಮುಟ್ಟಲು ಬಿಡಲ್ಲ. ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ.

ಇನ್ನೂ 92 ದೇಗುಲಗಳು ಇವೆ; ಅವುಗಳನ್ನು ಮುಟ್ಟಲು ಬಿಡಲ್ಲ- ನಂಜನಗೂಡು ದೇಗುಲ ತೆರವು ಬಳಿಕ ಪ್ರತಾಪ್ ಸಿಂಹ ವಾಗ್ದಾಳಿ
ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 12, 2021 | 8:10 PM

Share

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಹರದನಹಳ್ಳಿ ಹುಚ್ಚುಗಣಿ ಗ್ರಾಮದಲ್ಲಿ ದೇಗುಲ ನೆಲಸಮ ವಿಚಾರಕ್ಕೆ ಸಂಬಂಧಿಸಿ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ್ದಾರೆ. ಗ್ರಾಮಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಜನರ ಜತೆ ಚರ್ಚೆ ನಡೆಸಿದ್ದಾರೆ. ಶಕ್ತಿ ಮಹಾದೇವಿ ದೇಗುಲಕ್ಕೆ 800 ವರ್ಷಗಳ ಇತಿಹಾಸ ಇದೆ. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳ ಎಡವಟ್ಟಿನಿಂದ ಹಿಂದೂ ಧಾರ್ಮಿಕ ಸ್ಥಳ, ಭಾವೈಕ್ಯತೆಗೆ ಧಕ್ಕೆ ಬಂದಿದೆ. ಮಹಾದೇವಿ ದೇಗುಲದ ಬಳಿ ಸಾಕಷ್ಟು ವೀರಗಲ್ಲುಗಳಿವೆ. ಇತಿಹಾಸ ಪೂರ್ವದ ದೇವಸ್ಥಾನ ಅನ್ನಲು ಇವೇ ಸಾಕ್ಷಿ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಅಧಿಕಾರಿಗಳು ವೀರಗಲ್ಲುಗಳನ್ನು ಕೂಡ ಗಮನಿಸಿಲ್ಲ. ಮೈಸೂರಿನಲ್ಲಿ ಇನ್ನು 92 ದೇವಾಲಯಗಳು ವಿವಿಧ ಮೂಲೆಗಳಲ್ಲಿವೆ. ಅವುಗಳನ್ನು ಯಾವುದೇ ಕಾರಣಕ್ಕೂ ಮುಟ್ಟಲು ಬಿಡಲ್ಲ. ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. ಗ್ರಾಮಸ್ಥರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ಪ್ರತಾಪ್ ಸಿಂಹಗೆ ಬಳೆ ಕೊಟ್ಟು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಬಳೆ ವಿಚಾರದಲ್ಲಿ ಶಾಸಕ ತನ್ವೀರ್‌ ಸೇಠ್ ಬಗ್ಗೆ ಲೇವಡಿ ಮಾಡಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸಂಸದ‌ ಪ್ರತಾಪ್‌ ಸಿಂಹಗೆ ಬಳೆ ಕೊಟ್ಟು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಸಂಸದರ ಕಚೇರಿಗೆ 20 ಡಜನ್ ಬಳೆ ಕೊಟ್ಟು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ತೋರಿದ್ದಾರೆ.

ರಾಜ್ಯ ಕಾರ್ಯದರ್ಶಿ ದೀಪಕ್ ಶಿವಣ್ಣ ನೇತೃತ್ವದಲ್ಲಿ ಧರಣಿ ನಡೆಸಲಾಗಿದೆ. ಕಾಂಗ್ರೆಸ್ ನಾಯಕರ ಬಗ್ಗೆ ಎಚ್ಚರಿಕೆಯಿಂದ ಮಾತಾಡಬೇಕು. ಕೊರೊನಾ ಸಂಕಷ್ಟದ ಸಮಯದಲ್ಲಿ ಕೋಮುವಾದ ಬೇಕಾ? ಪ್ರಚೋದನೆ ಕೊಡುವುದನ್ನ ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ್ಣಿಗೆ ಗೌರವ ಕೊಡುವುದನ್ನು ನಿಮ್ಮಿಂದ ಕಲಿಯಬೇಕಿಲ್ಲ ಎಂದು ಪ್ರತಾಪ್​ ಸಿಂಹ ವಿರುದ್ಧ ‘ಕೈ’ ಕಾರ್ಯಕರ್ತರು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ನಂಜನಗೂಡು ದೇಗುಲ ತೆರವು ವಿಚಾರ: ದೇವಾಲಯ ಮರುನಿರ್ಮಾಣಕ್ಕೆ ಗ್ರಾಮಸ್ಥರ ತಯಾರಿ

ಇದನ್ನೂ ಓದಿ: ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರ: ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ?- ಸಂಸದ ಪ್ರತಾಪ್ ಸಿಂಹ ಗರಂ

Published On - 8:07 pm, Sun, 12 September 21

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ