AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ದೇಶದ ಮೇಲೆ ಅವಲಂಬನೆ ಸೃಷ್ಟಿಸಿದ್ದು ಕಾಂಗ್ರೆಸ್; ಈಗ ಮುಂದಾಲೋಚನೆಯಿಂದ ತಟಸ್ಥ ನಿಲುವು: ಪ್ರತಾಪ್ ಸಿಂಹ

ರಷ್ಯಾ ಎದುರು ಹಾಕಿಕೊಂಡರೆ ಮತ್ತೆ ನಮ್ಮ ನೆರವಿಗೆ ಬರುತ್ತಾ? ಯುದ್ಧ ಸಂದರ್ಭ ಸೃಷ್ಟಿಯಾದರೆ ರಷ್ಯಾ ನೆರವಿಗೆ ಬರುತ್ತಾ? ಮುಂದಾಲೋಚನೆಯಿಂದ ಪ್ರಧಾನಿಯಿಂದ ತಟಸ್ಥ ನಿಲುವು ತೆಗೆದುಕೊಳ್ಳಲಾಗಿದೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ರಷ್ಯಾ ದೇಶದ ಮೇಲೆ ಅವಲಂಬನೆ ಸೃಷ್ಟಿಸಿದ್ದು ಕಾಂಗ್ರೆಸ್; ಈಗ ಮುಂದಾಲೋಚನೆಯಿಂದ ತಟಸ್ಥ ನಿಲುವು: ಪ್ರತಾಪ್ ಸಿಂಹ
ಪ್ರತಾಪ್ ಸಿಂಹ
TV9 Web
| Edited By: |

Updated on:Mar 03, 2022 | 2:41 PM

Share

ಮೈಸೂರು: ನೆಹರು ಕಾಂಗ್ರೆಸ್​ನಿಂದ ನಮಗೆ ವಿದೇಶಾಂಗ ನೀತಿ ಪಾಠ ಬೇಕಾಗಿಲ್ಲ. ಕಾಂಗ್ರೆಸ್ ಆಡಳಿತದ ವಿದೇಶಾಂಗ ನೀತಿ ಹೇಗೆ ಇತ್ತು? ಕಾಂಗ್ರೆಸ್ ನೀತಿಯಿಂದಾದ ನಷ್ಟದ ಬಗ್ಗೆ ಇತಿಹಾಸದಲ್ಲಿದೆ. ರಷ್ಯಾ ದೇಶದ ವಿರುದ್ಧ ನಾವು ಹೋಗುವುದು ಕಷ್ಟವಿದೆ ಎಂದು ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಹಿನ್ನೆಲೆ ಏರ್​ಲಿಫ್ಟ್​ ಬಗ್ಗೆ ಕೇಂದ್ರದ ವಿರುದ್ಧ ಕಾಂಗ್ರೆಸ್ ಆರೋಪದ ಬಗ್ಗೆ ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ರಷ್ಯಾ ದೇಶ ತನ್ನ ದೇಶದ ಭದ್ರತೆಗಾಗಿ ಯುದ್ಧ ಮಾಡುತ್ತಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ರಷ್ಯಾ ತನ್ನ ಭದ್ರತೆ, ಸುರಕ್ಷತೆಗಾಗಿ ಉಕ್ರೇನ್ ಮೇಲೆ ಯುದ್ಧ ಮಾಡುತ್ತಿದೆ. ಭಾರತ ರಷ್ಯಾ ಮೇಲೆ ಅತಿ ಹೆಚ್ಚು ಅವಲಂಬಿತವಾಗಿದೆ. ರಷ್ಯಾ ದೇಶದ ಮೇಲೆ ಅವಲಂಬನೆ ಸೃಷ್ಟಿಸಿದ್ದು ಕಾಂಗ್ರೆಸ್. ರಷ್ಯಾ ಎದುರು ಹಾಕಿಕೊಂಡರೆ ಮತ್ತೆ ನಮ್ಮ ನೆರವಿಗೆ ಬರುತ್ತಾ? ಯುದ್ಧ ಸಂದರ್ಭ ಸೃಷ್ಟಿಯಾದರೆ ರಷ್ಯಾ ನೆರವಿಗೆ ಬರುತ್ತಾ? ಮುಂದಾಲೋಚನೆಯಿಂದ ಪ್ರಧಾನಿಯಿಂದ ತಟಸ್ಥ ನಿಲುವು ತೆಗೆದುಕೊಳ್ಳಲಾಗಿದೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ನೀಟ್ ಬ್ಯಾನ್​ ಮಾಡಲು ಅಭಿಯಾನ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕೋರ್ಟ್ ಆದೇಶಕ್ಕೆ ಅನುಗುಣವಾಗಿ ನೀಟ್ ತರಲಾಗಿದೆ. ದೇಶದಲ್ಲಿ ಮೆಡಿಕಲ್ ಸೀಟ್​ಗಾಗಿ ಪೈಪೋಟಿ ಹೆಚ್ಚಾಗಿದೆ. 138 ಕೋಟಿ ಜನಸಂಖ್ಯೆಗೆ 1.50 ಲಕ್ಷ ಮೆಡಿಕಲ್ ಸೀಟ್ ಇದೆ. ಪ್ರತಿ ಜಿಲ್ಲೆಯಲ್ಲೂ ಮೆಡಿಕಲ್ ಕಾಲೇಜ್ ಬರಬೇಕು. ಉಕ್ರೇನ್​ನಲ್ಲಿ ಓದಲು ಹೋಗಿರುವವರು ಬುದ್ಧಿವಂತರು ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ನವೀನ್ ಸಾವು ಹಿನ್ನೆಲೆ ಮೀಸಲಾತಿ ವಿರುದ್ಧ ಮಾತಾಡ್ತ್ತಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಷ್ಟೋ ವರ್ಷ ಶೋಷಣೆಗೊಳಗಾಗಿದೆ. SC, STಗೆ ಮೀಸಲಾತಿ ನೀಡಿರುವುದರಲ್ಲಿ ಯಾವುದೇ ತಪ್ಪಿಲ್ಲ. ಮೀಸಲಾತಿ ಇಂದೂ ಇರುತ್ತೆ, ಮುಂದೆಯೂ ಇರುತ್ತೆ. ಶೋಷಣೆಗೊಳಗಾದವರಿಗೆ ಮೀಸಲಾತಿ ಕೊಡುತ್ತಿದ್ದೇವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಲ್ಲಿ ವಿದ್ಯಾರ್ಥಿ ನವೀನ್​ ಸಾವು; ನಿವಾಸದಲ್ಲಿ 3ನೇ ದಿನದ ಕಾರ್ಯ ನೆರವೇರಿಸಿದ ಕುಟುಂಬಸ್ಥರು

ಇದನ್ನೂ ಓದಿ: ಉಕ್ರೇನ್​​ನಲ್ಲಿ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವಿನ ಹಿನ್ನೆಲೆ ನೀಟ್ ವಿರುದ್ಧ ಸಮರ ಸಾರಿದ ಜೆಡಿಎಸ್: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

Published On - 2:39 pm, Thu, 3 March 22

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ