AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ ಜೊತೆ ಸಂವಾದ

ರಾಷ್ಟಪತಿ ದ್ರೌಪದಿ ಮುರ್ಮು ಅವರು ಇಂದು ಮಧ್ಯಾಹ್ನ 12.30ಕ್ಕೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿನಿ ಬಳಿಕ ಹೆಲಿಕಾಪ್ಟರ್​ನಲ್ಲಿ ತಮಿಳುನಾಡಿಗೆ ತೆರಳಲಿದ್ದಾರೆ. ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ, ಮಾವುತರ ಜೊತೆ ಸಂವಾದ ನಡೆಸಲಿದ್ದಾರೆ.

ಮೈಸೂರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ ಜೊತೆ ಸಂವಾದ
ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on: Aug 05, 2023 | 9:57 AM

Share

ಮೈಸೂರು, ಆ.05: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಇಂದು ಮೈಸೂರಿಗೆ (Mysuru) ಆಗಮಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇಂದು ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿನಿ ಬಳಿಕ ಹೆಲಿಕಾಪ್ಟರ್​ನಲ್ಲಿ ತಮಿಳುನಾಡಿಗೆ ತೆರಳಲಿದ್ದಾರೆ. ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ, ಮಾವುತರ ಜೊತೆ ರಾಷ್ಟಪತಿ ದ್ರೌಪದಿ ಮುರ್ಮು ಸಂವಾದ ನಡೆಸಲಿದ್ದಾರೆ. ಬಳಿಕ ಸಂಜೆ 5:45ಕ್ಕೆ ಮೈಸೂರಿಗೆ ಆಗಮಿಸಿ ಚೆನ್ನೈಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮೈಸೂರು ಜಿಲ್ಲಾಡಳಿತ ರಾಷ್ಟ್ರಪತಿ ಮುರ್ಮು ಅವರ ಸ್ವಾಗತ ಕೋರಲು ಸಿದ್ಧತೆ ಮಾಡಿಕೊಂಡಿದೆ.

ಇದನ್ನೂ ಓದಿ: ಮಹಿಳೆಯರ ಸಾಧನೆ ಇದು ಟ್ರೇಲರ್ ಅಷ್ಟೇ, ಪಿಕ್ಚರ್ ಇನ್ನೂ ಬಾಕಿ ಇದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ಇನ್ನು ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರದಲ್ಲಿ ಆಸ್ಕರ್ ವಿಜೇತ, ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿ ವಾಸ ಮಾಡುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೊಮ್ಮನ್ ದಂಪತಿಯನ್ನು ಭೇಟಿ ಮಾಡಲಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತೆಪ್ಪಕಾಡಿಗೆ ಭೇಟಿ ಕೊಟ್ಟಿದ್ದರು.

ಮತ್ತೊಂದೆಡೆ ಮಧುಮಲೈ ಬಳಿಯ ತೆಪ್ಪಕಾಡು ಆನೆ ಶಿಬಿರ ಗುಂಡ್ಲುಪೇಟೆ ಗಡಿಭಾಗದಲ್ಲಿ ಬರುವುದರಿಂದ ಜೊತೆಗೆ ಪ್ರವಾಸ ಮಾರ್ಗ ದಿಢೀರ್ ಬದಲಾಗಿ ರಸ್ತೆ ಮಾರ್ಗದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಚರಿಸಬೇಹುದಾದ ಪ್ರಮೇಯ ಬರಬಹುದೆಂದು ಮುನ್ನೆಚ್ಚರಿಕಾ ಕ್ರಮವಾಗಿ ಗುಂಡ್ಲುಪೇಟೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.‌ ಮೈಸೂರಿನಿಂದ ಬಂಡೀಪುರದ ಗಡಿವರೆಗೆ ರಾಷ್ಟ್ರಪತಿಗಳ ಕಾನ್ವೆ ಶುಕ್ರವಾರ ಸಂಜೆ ಪೂರ್ವ ತಾಲೀಮು ನಡೆಸಿದ್ದು, ಗುಂಡ್ಲುಪೇಟೆ ಹೊರವಲಯದಲ್ಲಿ ಈಗಾಗಲೇ ಹೆಲಿಪ್ಯಾಡ್ ಅನ್ನು ನಿರ್ಮಾಣ ಮಾಡಲಾಗಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!