AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್​​ 21ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗೋದು ಬಹುತೇಕ ಫಿಕ್ಸ್

2017ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದ್ದ ಮೈಸೂರು, ಮತ್ತೆ ಗಿನ್ನೆಸ್​​​ ದಾಖಲೆ ಸೇರಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆದಿದ್ದು, ಈ ಬಾರಿ 2 ಲಕ್ಷ ಯೋಗಪಟುಗಳನ್ನು ಸೇರಿಸುವ ಆಶಯವಿದೆ. 

ಜೂನ್​​ 21ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗೋದು ಬಹುತೇಕ ಫಿಕ್ಸ್
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: May 15, 2022 | 11:55 AM

Share

ಮೈಸೂರು: ಜೂನ್​​ 21ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗೋದು ಬಹುತೇಕ ಫಿಕ್ಸ್ ಆಗಿದೆ. ಮೈಸೂರು ಸಂಸದ ಪ್ರತಾಪಸಿಂಹ ಈ ಬಗ್ಗೆ ಪ್ರಧಾನಿಯವರಿಗೆ ಮನವಿ ಮಾಡಿದ್ದು, ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡಲಾಗುತ್ತಿದೆ. ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಯೋಗ ದಿನಾಚರಣೆ ಕುರಿತು ಪೋಸ್ಟರ್​ ಬಿಡುಗಡೆ ಮಾಡಲಾಯಿತು. 2017ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದ್ದ ಮೈಸೂರು, ಮತ್ತೆ ಗಿನ್ನೆಸ್​​​ ದಾಖಲೆ ಸೇರಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆದಿದ್ದು, ಈ ಬಾರಿ 2 ಲಕ್ಷ ಯೋಗಪಟುಗಳನ್ನು ಸೇರಿಸುವ ಆಶಯವಿದೆ.

ವಿಶ್ವವಿಖ್ಯಾತ ಹಂಪಿಯಲ್ಲಿ ಯೋಗೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಿಶ್ವವಿಖ್ಯಾತ ಹಂಪಿಯ ಶ್ರೀ ವಿಜಯ ವಿಠ್ಠಲ ದೇವಾಲಯದಲ್ಲಿ ಯೋಗೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಲ್ಲಿನ ತೇರಿನ‌ ಮುಂದೆ ವಚನನಾಂದ ಶ್ರೀಗಳಿಂದ ಯೋಗಾಭ್ಯಾಸ ಮಾಡಲಾಯಿತು. ಯೋಗದ ಕುರಿತು ಜನಜಾಗೃತಿ ಮೂಡಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿದ್ದು, ಇಂದಿನಿಂದ ಯೋಗ ದಿನದವರೆಗೂ ವಾರಕ್ಕೊಂದು ಕಾರ್ಯಕ್ರಮ ನಡೆಯಲಿವೆ. ವಿನಯ್ ಗುರೂಜಿ, ಭವರ್ ಲಾಲ್, ಸಚಿವ ಆನಂದ್ ಸಿಂಗ್ ಭಾಗಿಯಾಗಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು