AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಧ್ವಜದಲ್ಲಿ ರಾಹುಲ್ ಗಾಂಧಿ ಚಿತ್ರ: ಕನ್ನಡ ಪರ ಸಂಘಟನೆಗಳಿಂದ ಆಕ್ಷೇಪ

ಬಾವುಟದ ಮೇಲೆ ರಾಹುಲ್ ಗಾಂಧಿ ಚಿತ್ರ ಬಳಕೆ ಮಾಡಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಕನ್ನಡ ಧ್ವಜದಲ್ಲಿ ರಾಹುಲ್ ಗಾಂಧಿ ಚಿತ್ರ: ಕನ್ನಡ ಪರ ಸಂಘಟನೆಗಳಿಂದ ಆಕ್ಷೇಪ
ಮೈಸೂರು ಜಿಲ್ಲೆಯಲ್ಲಿ ಸುರಿಯುವ ಮಳೆಯಲ್ಲೇ ರಾಹುಲ್​ ಗಾಂಧಿ ಭಾಷಣ ಮಾಡಿದರು.Image Credit source: @INCKarnataka
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 03, 2022 | 2:25 PM

Share

ಮೈಸೂರು: ಕರ್ನಾಟಕದಲ್ಲಿ ‘ಭಾರತ್ ಜೋಡೊ ಯಾತ್ರೆ’ಯ ಮೂಲಕ ಸದ್ದು ಮಾಡಿರುವ ರಾಹುಲ್ ಗಾಂಧಿ ಇದೀಗ ವಿವಾದದಲ್ಲಿ ಸಿಲುಕಿದ್ದಾರೆ. ರಾಹುಲ್ ಗಾಂಧಿ ಅವರ ಭಾವಚಿತ್ರವಿದ್ದ ಕನ್ನಡ ಧ್ವಜವು ಭಾನುವಾರ (ಅ 2) ಅಲ್ಲಲ್ಲಿ ಕಂಡು ಬಂದಿದ್ದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯ ಬಗ್ಗೆ ಕರ್ನಾಟಕ ನವ ನಿರ್ಮಾಣ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದ್ದು, ‘ಕನ್ನಡ ಧ್ವಜಗಳನ್ನು ರಾಜಕಾರಣಕ್ಕೆ ಬಳಸುವುದು ಸರಿಯಲ್ಲ. ವಯನಾಡು ಕ್ಷೇತ್ರದ ಸಂಸದರಾಗಿರುವ ರಾಹುಲ್ ಗಾಂಧಿ ಅವರು ಕರ್ನಾಟಕದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಏನು? ಈ ಬಗ್ಗೆ ರಾಹುಲ್ ಗಾಂಧಿ ಅವರು ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ ಎಂದು ‘ರಿಪಬ್ಲಿಕ್ ವರ್ಲ್ಡ್​’ ಜಾಲತಾಣ ವರದಿ ಮಾಡಿದೆ.

ಬಾವುಟದ ಮೇಲೆ ರಾಹುಲ್ ಗಾಂಧಿ ಚಿತ್ರ ಬಳಕೆ ಮಾಡಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ‘ಈ ಬಗ್ಗೆ ನಾನು ಕ್ಷಮೆ ಕೇಳುವುದಿಲ್ಲ. ಬಾವುಟದ ಮೇಲೆ ಚಿತ್ರ ಬಳಸುವ ನಿರ್ಧಾರ ತೆಗೆದುಕೊಂಡಿದ್ದು ನಾನು’ ಎಂದು ಪ್ರತಿಕ್ರಿಯಿಸಿದ್ದಾರೆ. ‘ನಿಜವಾದ ಕನ್ನಡಪರ ಸಂಘಟನೆಗಳು ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಬಿಜೆಪಿ ಬೆಂಬಲಿಗರ ಆಕ್ರೋಶದ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ’ ಎಂದಿದ್ದಾರೆ.

ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಬಿಜೆಪಿ ನಾಯಕ ವಿವೇಕ್ ರೆಡ್ಡಿ ಖಂಡಿಸಿದ್ದಾರೆ. ‘ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಯಾರೂ ವಿರೋಧಿಸುತ್ತಿಲ್ಲ. ಆದರೆ ಒಬ್ಬ ವ್ಯಕ್ತಿಯ ಚಿತ್ರವನ್ನು ಇಡೀ ರಾಜ್ಯದ ಜನರು ಗೌರವಿಸುವ ಧ್ವಜದ ಮೇಲೆ ಮುದ್ರಿಸಿದ್ದು ಸರಿ ಕಾಣುತ್ತಿಲ್ಲ’ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆಗಾಗಿ ಮೈಸೂರು ಜಿಲ್ಲೆಯ ವಿವಿಧೆಡೆ ಹಾಕಿದ್ದ ಹಿಂದಿ ಅಕ್ಷರಗಳಿರುವ ಫ್ಲೆಕ್ಸ್​ ಬ್ಯಾನರ್​ಗಳಿಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಪ್ಪು ಬಣ್ಣ ಬಳಿದಿದ್ದರು. ಮೈಸೂರು-ಗುಂಡ್ಲುಪೇಟೆ ರಸ್ತೆ ಹಾಗೂ ನಂಜನಗೂಡು ಬಳಿ ಹಿಂದಿ ಅಕ್ಷರಗಳಿಗೆ ಮಸಿ ಬಳಿದು ಕನ್ನಡ ಬಳಸಿ ಎಂಬ ಸಂದೇಶ ಬರೆಯಲಾಗಿತ್ತು.

ಕರ್ನಾಟಕದಲ್ಲಿ ಕಾಂಗ್ರೆಸ್​ನ 4ನೇ ದಿನದ ಪಾದಯಾತ್ರೆಯ ಪ್ರಯುಕ್ತ ರಾಹುಲ್ ಗಾಂಧಿ ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು. ನಂತರ ದೇಗುಲದ ಎದುರು ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಲ್ಲಿ ಈಡುಗಾಯಿ ಹೊಡೆದರು. ಮೈಸೂರು ನಗರದ ವಿವಿಧೆಡೆ ಮಸೀದಿ, ಚರ್ಚ್​ಗಳಿಗೂ ರಾಹುಲ್ ಭೇಟಿ ನೀಡಿದರು. ಆಜಂ ಮಸೀದಿ, ಸೇಂಟ್ ಫಿಲೋಮಿನಾ ಚರ್ಚ್​​ಗೆ ಭೇಟಿ ನೀಡಿದ್ದ ರಾಹುಲ್ ಅವರೊಂದಿಗೆ ಶಾಸಕ ತನ್ವೀರ್ ಸೇಠ್​​ ಇದ್ದರು.

Published On - 2:24 pm, Mon, 3 October 22

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ