AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ವಿರೋಧ; ಕನ್ನಡ ವೇದಿಕೆಯಿಂದ ಪ್ರತಿಭಟನೆ

ರೋಪ್ ವೇ ನಿರ್ಮಾಣದಿಂದ ಸಾವಿರಾರು ಮರ ಕಾಡು ನಾಶ ಆಗುತ್ತದೆ. ಚಾಮುಂಡಿ ಬೆಟ್ಟ ಹಾಳು ಮಾಡುವುದು ಬೇಡ. ಯಾವುದೇ ಕಾರಣಕ್ಕೂ ಸರ್ಕಾರ ಈ ಯೋಜನೆ ಜಾರಿ ಮಾಡಬಾರದು ಎಂದು ಪ್ರತಿಭಟನಾನಿರತರು ಒತ್ತಾಯ ಮಾಡಿದ್ದಾರೆ.

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ವಿರೋಧ; ಕನ್ನಡ ವೇದಿಕೆಯಿಂದ ಪ್ರತಿಭಟನೆ
ಕನ್ನಡ ವೇದಿಕೆಯಿಂದ ಪ್ರತಿಭಟನೆ
TV9 Web
| Edited By: |

Updated on:Mar 08, 2022 | 12:36 PM

Share

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ವಿಚಾರಕ್ಕೆ ವಿರೋಧ ವ್ಯಕ್ತವಾಗಿದೆ. ರೋಪ್ ವೇ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಮೈಸೂರು ಕನ್ನಡ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಚಾಮುಂಡಿ ಬೆಟ್ಟಕ್ಕೆ ಸಾಕಷ್ಟು ಮಾರ್ಗಗಳು ಇವೆ. ಸರ್ಕಾರ ಹಣ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರುತ್ತಿದೆ ಎಂದು ಆರೋಪ ಮಾಡಲಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿ ನೆಪದಲ್ಲಿ ಅರಣ್ಯ ಸಂಪತ್ತು ಹಾಳು ಮಾಡಲು ಸರ್ಕಾರ ಹೊರಟಿದೆ ಎಂದು ಆಕ್ರೋಶ ಕೇಳಿಬಂದಿದೆ.

ರೋಪ್ ವೇ ನಿರ್ಮಾಣದಿಂದ ಸಾವಿರಾರು ಮರ ಕಾಡು ನಾಶ ಆಗುತ್ತದೆ. ಚಾಮುಂಡಿ ಬೆಟ್ಟ ಹಾಳು ಮಾಡುವುದು ಬೇಡ. ಯಾವುದೇ ಕಾರಣಕ್ಕೂ ಸರ್ಕಾರ ಈ ಯೋಜನೆ ಜಾರಿ ಮಾಡಬಾರದು ಎಂದು ಪ್ರತಿಭಟನಾನಿರತರು ಒತ್ತಾಯ ಮಾಡಿದ್ದಾರೆ.

ವಿಷದ ಬೀಜ ತಿಂದು ಒದ್ದಾಡುತ್ತಿದ್ದ ಜಿಂಕೆಯನ್ನು ರಕ್ಷಿಸಿದ ದನಗಾಹಿಗಳು

ಮತ್ತೊಂದೆಡೆ ವಿಷದ ಬೀಜ ತಿಂದು ಒದ್ದಾಡುತ್ತಿದ್ದ ಜಿಂಕೆಯನ್ನು ದನಗಾಹಿಗಳು ರಕ್ಷಿಸಿದ ಘಟನೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಟ್ಟೆ ಮಾದೇಶ್ವರ ಸ್ವಾಮಿ ದೇವಾಲಯದ ಸಮೀಪ ಇರುವ ಜಮೀನಿನಲ್ಲಿ ಒದ್ದಾಡುತ್ತಿದ್ದ ಜಿಂಕೆಯನ್ನು ರಕ್ಷಣೆ ಮಾಡಲಾಗಿದೆ. ಜಿಂಕೆ ಹುಲ್ಲು ತಿನ್ನುವ ವೇಳೆ ವಿಷದ ಬೀಜ ಸೇವನೆ ಮಾಡಿತ್ತು ಎಂದು ಹೇಳಲಾಗಿದೆ. ಇದನ್ನು ಗಮನಿಸಿದ ದನಗಾಹಿಗಳಾದ ರೇವಣ್ಣ ಮತ್ತು ಕರಿಯಪ್ಪರಿಂದ ಜಿಂಕೆಗೆ ನೀರು ಕುಡಿಸಿ ರಕ್ಷಣೆ ಮಾಡಲಾಗಿದೆ. ನೀರನ್ನು ಕುಡಿಸಿದ ಅರ್ಧ ಗಂಟೆಗಳ ಬಳಿಕ ಜಿಂಕೆಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಇದನ್ನೂ ಓದಿ: Karnataka Budget Highlights: ಜೋಗ ಜಲಪಾತ, ಯಾಣ, ನಂದಿ ಬೆಟ್ಟಕ್ಕೆ ರೋಪ್ ವೇ; ಬಜೆಟ್​ನಲ್ಲಿ ಪ್ರವಾಸೋದ್ಯಕ್ಕೆ ಸಿಕ್ಕ ಕೊಡುಗೆ ಇಲ್ಲಿದೆ

ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಮುಂಬೈನ ಗ್ಯಾಂಗ್​ಸ್ಟರ್ ಬಂಧನ, ಮೈಸೂರು ದೇವು ಹತ್ಯೆ ಪ್ರಕರಣದ 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Published On - 12:34 pm, Tue, 8 March 22

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?