ಜೆಎನ್​ಯು ಘಟನೆ ಖಂಡಿಸಿ ಮೈಸೂರಿನಲ್ಲಿ ಮೊಳಗಿತು ಪ್ರತಿಭಟನೆ ಕೂಗು

ಮೈಸೂರು: ದೆಹಲಿಯ ಜೆಎನ್​ಯು ಕ್ಯಾಂಪಸ್​ನಲ್ಲಿ ದಾಂದಲೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ವಿವಿ ಮಾನಸಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಜೆಎನ್​ಯು ಘಟನೆ ಖಂಡಿಸಿ ನಿನ್ನೆ ರಾತ್ರಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ, ಮೈಸೂರು ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿಗಳ ಒಕ್ಕೂಟ ಮತ್ತು ಎಸ್​ಎಫ್​ಐ, ಬಹುಜನ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ಕ್ಲಾಕ್​ಟವರ್​ನಿಂದ ಕುವೆಂಪು ಪ್ರತಿಮೆವರೆಗೆ ಪಂಜಿನ ಮೆರವಣಿಗೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ’ ನಾಮಫಲಕ, ಪೋಸ್ಟರ್​ಗಳ ಪ್ರದರ್ಶನ ಮಾಡಲಾಗಿದೆ. ಇದೇ ವೇಳೆ ಕೇಂದ್ರ ಸರ್ಕಾರ, ಎಬಿವಿಪಿ ವಿರುದ್ಧ ವಿದ್ಯಾರ್ಥಿಗಳು ಘೋಷಣೆ ಕೂಗುವ […]

ಜೆಎನ್​ಯು ಘಟನೆ ಖಂಡಿಸಿ ಮೈಸೂರಿನಲ್ಲಿ ಮೊಳಗಿತು ಪ್ರತಿಭಟನೆ ಕೂಗು

Updated on: Jan 09, 2020 | 8:11 AM

ಮೈಸೂರು: ದೆಹಲಿಯ ಜೆಎನ್​ಯು ಕ್ಯಾಂಪಸ್​ನಲ್ಲಿ ದಾಂದಲೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ವಿವಿ ಮಾನಸಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಜೆಎನ್​ಯು ಘಟನೆ ಖಂಡಿಸಿ ನಿನ್ನೆ ರಾತ್ರಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ, ಮೈಸೂರು ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿಗಳ ಒಕ್ಕೂಟ ಮತ್ತು ಎಸ್​ಎಫ್​ಐ, ಬಹುಜನ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ಕ್ಲಾಕ್​ಟವರ್​ನಿಂದ ಕುವೆಂಪು ಪ್ರತಿಮೆವರೆಗೆ ಪಂಜಿನ ಮೆರವಣಿಗೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ’ ನಾಮಫಲಕ, ಪೋಸ್ಟರ್​ಗಳ ಪ್ರದರ್ಶನ ಮಾಡಲಾಗಿದೆ. ಇದೇ ವೇಳೆ ಕೇಂದ್ರ ಸರ್ಕಾರ, ಎಬಿವಿಪಿ ವಿರುದ್ಧ ವಿದ್ಯಾರ್ಥಿಗಳು ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.