AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮೈಸೂರಿನಲ್ಲಿ 3 ದಿನ ಜಿ20 ಶೃಂಗಸಭೆ: ಪ್ರವಾಸಿಗರು ಮೈಸೂರು ಟ್ರಿಪ್​ ಬದಲಾವಣೆ ಮಾಡಿಕೊಂಡ್ರೆ ಒಳಿತು

ಇಂದಿನಿಂದ (ಜುಲೈ 31) ಮೈಸೂರಿನಲ್ಲಿ ಮೂರು ದಿನಗಳ ಕಾಲ ಅಂದರೆ ಜುಲೈ 31ರಿಂದ ಆಗಸ್ಟ್ 02ರ ವರೆಗೆ ಜಿ20 ಶೃಂಗಸಭೆ ಸಭೆ ನಡೆಯಲಿದೆ. ಹೀಗಾಗಿ ಪ್ರವಾಸಿಗರು ಈ ಮೂರು ದಿನ ಮೈಸೂರು ಟ್ರಿಪ್​ ಹೋಗುವ ಪ್ಲ್ಯಾನ್ ಇದ್ದರೆ ಬದಲಾವಣೆ ಮಾಡಿಕೊಳ್ಳುವುದು ಒಳ್ಳೆಯದು.

ಇಂದಿನಿಂದ ಮೈಸೂರಿನಲ್ಲಿ 3 ದಿನ ಜಿ20 ಶೃಂಗಸಭೆ: ಪ್ರವಾಸಿಗರು ಮೈಸೂರು ಟ್ರಿಪ್​ ಬದಲಾವಣೆ ಮಾಡಿಕೊಂಡ್ರೆ ಒಳಿತು
ಮೈಸೂರು ಅರಮನೆ
ರಾಮ್​, ಮೈಸೂರು
| Edited By: |

Updated on:Jul 31, 2023 | 10:46 AM

Share

ಮೈಸೂರು, (ಜುಲೈ 31): ಇಂದಿನಿಂದ (ಜುಲೈ 31) ಮೈಸೂರಿನಲ್ಲಿ (Mysuru) ಮೂರು ದಿನಗಳ ಕಾಲ ಅಂದರೆ ಜುಲೈ 31ರಿಂದ ಆಗಸ್ಟ್ 02ರ ವರೆಗೆ ಜಿ20 ಶೃಂಗಸಭೆ  (G20 Summit) ನಡೆಯಲಿದೆ. ಈ ಸಭೆಯಲ್ಲಿ 43 ರಾಷ್ಟ್ರಗಳ ಜಿ20 ಸದಸ್ಯರು ಭಾಗಿಯಾಗಲಿದ್ದಾರೆ. ಇದೇ ಸಂದರ್ಭದಲ್ಲಿ ವಿದೇಶಿ ಗಣ್ಯರು ಮೈಸೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆ(Mysuru Palace)  ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ. ಪೊಲೀಸರು ಹಾಗೂ ರಾಜ್ಯ ಸರ್ಕಾರ ಅಗತ್ಯ ಮುಂಜಾಗೃತ ಕ್ರಮವನ್ನು ಕೈಗೊಳ್ಳುವ ದೃಷ್ಟಿಯಿಂದ ಎಲ್ಲ ಮಾದರಿಯ ಪ್ರವಾಸಿಗರ ಪ್ರವೇಶಕ್ಕೆ‌ ನಿರ್ಬಂಧ ವಿಧಿಸಿ, ಮೈಸೂರು ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: G20 Summit: ಜಿ 20 ಶೃಂಗಸಭೆಯ ಸದಸ್ಯರು ಮೈಸೂರು ಅರಮನೆಗೆ ಭೇಟಿ, ಆಗಸ್ಟ್ 1, 2 ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಆದ್ರೆ, ಜಿಲ್ಲೆ ಬೇರೆ-ಬೇರೆ ಪ್ರವಾಸಿ ತಾಣಗಳಿಗೆ ವಿದೇಶಿ ಗಣ್ಯರು ಭೇಟಿ ನೀಡಲಿದ್ದಾರೆ. ಆ ವೇಳೆ ಪ್ರವಾಸಿಗರಿಗೆ ನಿರ್ಬಂಧ ಇರಲಿದೆ. ಹೀಗಾಗಿ ಇಂದಿನಿಂದ ಆಗಸ್ಟ್ 02ರವರೆಗೆ ಮೈಸೂರಿ ಪ್ರವಾಸಿ ತಾಣಗಳಿಗೆ ಹೋಗಬೇಕೆನ್ನುವವರು ಪ್ಲ್ಯಾನ್ ಚೇಂಜ್ ಮಾಡಿಕೊಳ್ಳುವುದು ಒಳಿತು.

ಜಿ20 ಶೃಂಗಸಭೆ ಸಭೆಗೆ ಆಗಮಿಸಲಿರುವ 43 ರಾಷ್ಟ್ರಗಳ ಗಣ್ಯರಿಗೆ ಮೈಸೂರಿನ ರ‍್ಯಾಡಿಸನ್ ಬ್ಲೂ ಗ್ರ್ಯಾಂಡ್ ಮರ್ಕ್ಯೂರಿ ಹೋಟೆಲ್‌ನಲ್ಲಿ‌ 70 ಕೊಠಡಿಗಳನ್ನು ಮೀಸಲಿಡಲಾಗಿದ್ದು, ಮೈಸೂರು ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಇನ್ನು ರ‍್ಯಾಡಿಸನ್ ಬ್ಲೂ ಹೋಟೆಲ್ ಹಾಗೂ ಮೈಸೂರು ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಸೆ 144ರ ಅಡಿಯಲ್ಲಿ ತಾತ್ಕಾಲಿಕ ನೋ ಫ್ಲೈಯಿಂಗ್ ಝೋನ್ ಘೋಷಣೆ ಮಾಡಲಾಗಿದೆ.

ಇನ್ನಷ್ಟು ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:21 am, Mon, 31 July 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು