AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮೈಸೂರಿನಲ್ಲಿ 3 ದಿನ ಜಿ20 ಶೃಂಗಸಭೆ: ಪ್ರವಾಸಿಗರು ಮೈಸೂರು ಟ್ರಿಪ್​ ಬದಲಾವಣೆ ಮಾಡಿಕೊಂಡ್ರೆ ಒಳಿತು

ಇಂದಿನಿಂದ (ಜುಲೈ 31) ಮೈಸೂರಿನಲ್ಲಿ ಮೂರು ದಿನಗಳ ಕಾಲ ಅಂದರೆ ಜುಲೈ 31ರಿಂದ ಆಗಸ್ಟ್ 02ರ ವರೆಗೆ ಜಿ20 ಶೃಂಗಸಭೆ ಸಭೆ ನಡೆಯಲಿದೆ. ಹೀಗಾಗಿ ಪ್ರವಾಸಿಗರು ಈ ಮೂರು ದಿನ ಮೈಸೂರು ಟ್ರಿಪ್​ ಹೋಗುವ ಪ್ಲ್ಯಾನ್ ಇದ್ದರೆ ಬದಲಾವಣೆ ಮಾಡಿಕೊಳ್ಳುವುದು ಒಳ್ಳೆಯದು.

ಇಂದಿನಿಂದ ಮೈಸೂರಿನಲ್ಲಿ 3 ದಿನ ಜಿ20 ಶೃಂಗಸಭೆ: ಪ್ರವಾಸಿಗರು ಮೈಸೂರು ಟ್ರಿಪ್​ ಬದಲಾವಣೆ ಮಾಡಿಕೊಂಡ್ರೆ ಒಳಿತು
ಮೈಸೂರು ಅರಮನೆ
ರಾಮ್​, ಮೈಸೂರು
| Updated By: Digi Tech Desk|

Updated on:Jul 31, 2023 | 10:46 AM

Share

ಮೈಸೂರು, (ಜುಲೈ 31): ಇಂದಿನಿಂದ (ಜುಲೈ 31) ಮೈಸೂರಿನಲ್ಲಿ (Mysuru) ಮೂರು ದಿನಗಳ ಕಾಲ ಅಂದರೆ ಜುಲೈ 31ರಿಂದ ಆಗಸ್ಟ್ 02ರ ವರೆಗೆ ಜಿ20 ಶೃಂಗಸಭೆ  (G20 Summit) ನಡೆಯಲಿದೆ. ಈ ಸಭೆಯಲ್ಲಿ 43 ರಾಷ್ಟ್ರಗಳ ಜಿ20 ಸದಸ್ಯರು ಭಾಗಿಯಾಗಲಿದ್ದಾರೆ. ಇದೇ ಸಂದರ್ಭದಲ್ಲಿ ವಿದೇಶಿ ಗಣ್ಯರು ಮೈಸೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆ(Mysuru Palace)  ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ. ಪೊಲೀಸರು ಹಾಗೂ ರಾಜ್ಯ ಸರ್ಕಾರ ಅಗತ್ಯ ಮುಂಜಾಗೃತ ಕ್ರಮವನ್ನು ಕೈಗೊಳ್ಳುವ ದೃಷ್ಟಿಯಿಂದ ಎಲ್ಲ ಮಾದರಿಯ ಪ್ರವಾಸಿಗರ ಪ್ರವೇಶಕ್ಕೆ‌ ನಿರ್ಬಂಧ ವಿಧಿಸಿ, ಮೈಸೂರು ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: G20 Summit: ಜಿ 20 ಶೃಂಗಸಭೆಯ ಸದಸ್ಯರು ಮೈಸೂರು ಅರಮನೆಗೆ ಭೇಟಿ, ಆಗಸ್ಟ್ 1, 2 ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಆದ್ರೆ, ಜಿಲ್ಲೆ ಬೇರೆ-ಬೇರೆ ಪ್ರವಾಸಿ ತಾಣಗಳಿಗೆ ವಿದೇಶಿ ಗಣ್ಯರು ಭೇಟಿ ನೀಡಲಿದ್ದಾರೆ. ಆ ವೇಳೆ ಪ್ರವಾಸಿಗರಿಗೆ ನಿರ್ಬಂಧ ಇರಲಿದೆ. ಹೀಗಾಗಿ ಇಂದಿನಿಂದ ಆಗಸ್ಟ್ 02ರವರೆಗೆ ಮೈಸೂರಿ ಪ್ರವಾಸಿ ತಾಣಗಳಿಗೆ ಹೋಗಬೇಕೆನ್ನುವವರು ಪ್ಲ್ಯಾನ್ ಚೇಂಜ್ ಮಾಡಿಕೊಳ್ಳುವುದು ಒಳಿತು.

ಜಿ20 ಶೃಂಗಸಭೆ ಸಭೆಗೆ ಆಗಮಿಸಲಿರುವ 43 ರಾಷ್ಟ್ರಗಳ ಗಣ್ಯರಿಗೆ ಮೈಸೂರಿನ ರ‍್ಯಾಡಿಸನ್ ಬ್ಲೂ ಗ್ರ್ಯಾಂಡ್ ಮರ್ಕ್ಯೂರಿ ಹೋಟೆಲ್‌ನಲ್ಲಿ‌ 70 ಕೊಠಡಿಗಳನ್ನು ಮೀಸಲಿಡಲಾಗಿದ್ದು, ಮೈಸೂರು ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಇನ್ನು ರ‍್ಯಾಡಿಸನ್ ಬ್ಲೂ ಹೋಟೆಲ್ ಹಾಗೂ ಮೈಸೂರು ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಸೆ 144ರ ಅಡಿಯಲ್ಲಿ ತಾತ್ಕಾಲಿಕ ನೋ ಫ್ಲೈಯಿಂಗ್ ಝೋನ್ ಘೋಷಣೆ ಮಾಡಲಾಗಿದೆ.

ಇನ್ನಷ್ಟು ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:21 am, Mon, 31 July 23

ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ದಿಲ್ಲಿಯಿಂದ ಬಂತು ಸ್ಫೋಟಕ ಸುದ್ದಿ
ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ದಿಲ್ಲಿಯಿಂದ ಬಂತು ಸ್ಫೋಟಕ ಸುದ್ದಿ