AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಾಪನೆಗೆ ಸಿದ್ಧವಾಗಿದ್ದ ಪುನೀತ್ ರಾಜ್‍ಕುಮಾರ್ ಪುತ್ಥಳಿ ವಶಕ್ಕೆ ಪಡೆದ ಪೊಲೀಸರು, ಠಾಣೆ ಮುಂದೆ ಅಭಿಮಾನಿಗಳ ಆಕ್ರೋಶ

ಮೈಸೂರಿನ ಲಿಂಗಾಬುದಿ ಪಾಳ್ಯ ಬಡಾವಣೆಯ ಅಪ್ಪು ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಪುತ್ಥಳಿ ಮಾಡಿಸಿದ್ರು. ಅದನ್ನ ಮೈಸೂರಿನ ಹೊರವಲಯದ ರಿಂಗ್ ರಸ್ತೆಯ ಮಧ್ಯೆ ಇರುವ ಡಿವೈಡರ್‌ನಲ್ಲಿ ಅಳವಡಿಸಲು ಮುಂದಾಗಿದ್ರು. ಅದಕ್ಕಾಗಿ ಎಲ್ಲಾ ಸಿದ್ದತೆಗಳು ನಡೆದಿತ್ತು. ಇನ್ನೇನು ಪುತ್ಥಳಿ ತಂದು ಪ್ರತಿಷ್ಠಾಪಿಸಬೇಕು ಕುವೆಂಪು ನಗರ ಪೊಲೀಸರು ಅದಕ್ಕೆ ಬ್ರೇಕ್ ಹಾಕಿದ್ದಾರೆ.

ಪ್ರತಿಷ್ಠಾಪನೆಗೆ ಸಿದ್ಧವಾಗಿದ್ದ ಪುನೀತ್ ರಾಜ್‍ಕುಮಾರ್ ಪುತ್ಥಳಿ ವಶಕ್ಕೆ ಪಡೆದ ಪೊಲೀಸರು, ಠಾಣೆ ಮುಂದೆ ಅಭಿಮಾನಿಗಳ ಆಕ್ರೋಶ
ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on: Dec 04, 2021 | 8:29 AM

Share

ಮೈಸೂರು: ಅಪ್ಪು ಅಗಲಿ ತಿಂಗಳಾದರೂ ಪವರ್ ಸ್ಟಾರ್ ನೆನಪು‌ ಮಾತ್ರ ಮಾಸುತ್ತಿಲ್ಲ. ಅಪ್ಪು ಆರಾಧನೆ ನೆನಪಿನ‌ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಅಲ್ಲೂ ಅಷ್ಟೇ, ಅಪ್ಪು ಹೆಸ್ರಲ್ಲಿ ಪುತ್ಥಳಿ ನಿರ್ಮಿಸಿದ್ರು. ಎಲ್ಲವೂ ರೆಡಿಯಾಗಿತ್ತು. ಆದ್ರೆ, ಪೊಲೀಸ್ರ ಎಂಟ್ರಿ ಬಳಿಕ ಎಲ್ಲವೂ ಬದಲಾಗಿ ಹೋಗಿದೆ.

ಮೈಸೂರಿನ ಲಿಂಗಾಬುದಿ ಪಾಳ್ಯ ಬಡಾವಣೆಯ ಅಪ್ಪು ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಪುತ್ಥಳಿ ಮಾಡಿಸಿದ್ರು. ಅದನ್ನ ಮೈಸೂರಿನ ಹೊರವಲಯದ ರಿಂಗ್ ರಸ್ತೆಯ ಮಧ್ಯೆ ಇರುವ ಡಿವೈಡರ್‌ನಲ್ಲಿ ಅಳವಡಿಸಲು ಮುಂದಾಗಿದ್ರು. ಅದಕ್ಕಾಗಿ ಎಲ್ಲಾ ಸಿದ್ದತೆಗಳು ನಡೆದಿತ್ತು. ಇನ್ನೇನು ಪುತ್ಥಳಿ ತಂದು ಪ್ರತಿಷ್ಠಾಪಿಸಬೇಕು ಕುವೆಂಪು ನಗರ ಪೊಲೀಸರು ಅದಕ್ಕೆ ಬ್ರೇಕ್ ಹಾಕಿದ್ದಾರೆ.

ಅಭಿಮಾನಿಗಳು ಅಪ್ಪು ಪುತ್ಥಳಿಯನ್ನು ಸಾರ್ವಜನಿಕ ಜಾಗದಲ್ಲಿ ಪ್ರತಿಷ್ಠಾಪಿಸಲು ಮುಂದಾಗಿದ್ರು. ಆದ್ರೆ, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪುತ್ಥಳಿ ಸ್ಥಾಪಿಸಬಾರದು ಅನ್ನೋ ಆದೇಶವಿದೆ. ಇದೇ ಕಾರಣಕ್ಕೆ ಪೊಲೀಸರು ಇದಕ್ಕೆ ಬ್ರೇಕ್ ಹಾಕಿದ್ದಾರೆ. ವಿಚಾರ ತಿಳಿದ ತಕ್ಷಣ ಪುತ್ಥಳಿ ತಯಾರಿಸಿದ್ದ ಜಾಗಕ್ಕೆ ತೆರಳಿ ಪುತ್ಥಳಿಯನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ತಂದಿದ್ದಾರೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಕುವೆಂಪು ನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಅಭಿಮಾನಿಗಳು ಪೊಲೀಸರ ವಿರುದ್ದ ಆಕ್ರೋಶ ಹೊರಹಾಕಿದ್ರು. ನಮಗೆ ಹೇಳಿದ್ರೆ ನಾವೇ ಪುತ್ಥಳಿಯನ್ನು ಪ್ರತಿಷ್ಠಾಪಿಸುತ್ತಿರಲಿಲ್ಲ. ಆದರೆ ಏಕಾ ಏಕಿ ಶಿಲ್ಪಿಯಿಂದಲೇ ಪುತ್ಥಳಿ ತಂದಿದ್ದು ಸರಿಯಲ್ಲ ಅಂತಾ ಅಸಮಾಧಾನ ವ್ಯಕ್ತಪಡಿಸಿದರು. ಒಟ್ಟಾರೆ ಮೈಸೂರಿನಲ್ಲಿ ಪುನೀತ್ ಪುತ್ಥಳಿ ಸ್ಥಾಪನೆ ವಿಚಾರ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ವರದಿ: ರಾಮ್, ಟಿವಿ9 ಮೈಸೂರು

ಇದನ್ನೂ ಓದಿ: ಶಿವಮೊಗ್ಗ: ಕಣ್ಮನ ಸೆಳೆಯುವ ಪುನೀತ್ ಪುತ್ಥಳಿಯನ್ನು ಸ್ಥಾಪಿಸಿದ ಅಭಿಮಾನಿಗಳು; ಚಿತ್ರಗಳನ್ನು ನೋಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್