AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಿನಿ ಜಲಾಶಯದಿಂದ ಹೊರ ಹರಿವಿನ ಪ್ರಮಾಣ ಹೆಚ್ಚಳ; ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಪುಣ್ಯ ಸ್ನಾನ, ಮುಡಿ ಸೇವೆಗೆ ತಾತ್ಕಾಲಿಕ ನಿರ್ಬಂಧ

ಭಾರಿ ಮಳೆಗೆ ಹದಿನಾರು ಕಾಲು ಮಂಟಪ ಭಾಗಶಃ ಮುಳುಗಿದ್ದು, ನಂಜನಗೂಡು ಜನರಿಗೆ ಪ್ರವಾಹದ ಆತಂಕ ಶುರುವಾಗಿದೆ. ಕಳೆದ ಬಾರಿ ತೋಪಿನ ಬೀದಿ, ಒಕ್ಕಲಗೇರಿ, ಹಳ್ಳದಕೇರಿ, ಗೌರಿಘಟ್ಟ ಬೀದಿ ಬಡಾವಣೆಗಳಿಗೆ ನೀರು ನುಗ್ಗಿತ್ತು.

ಕಬಿನಿ ಜಲಾಶಯದಿಂದ ಹೊರ ಹರಿವಿನ ಪ್ರಮಾಣ ಹೆಚ್ಚಳ; ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಪುಣ್ಯ ಸ್ನಾನ, ಮುಡಿ ಸೇವೆಗೆ ತಾತ್ಕಾಲಿಕ ನಿರ್ಬಂಧ
ಶ್ರೀಕಂಠೇಶ್ವರ ಸನ್ನಿಧಿಯ ಸ್ನಾನಘಟ್ಟ
TV9 Web
| Edited By: |

Updated on: Jul 24, 2021 | 12:59 PM

Share

ಮೈಸೂರು: ಕಬಿನಿ ಜಲಾಶಯದಲ್ಲಿ ಹೊರ ಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆ ಶ್ರೀಕಂಠೇಶ್ವರನ ದೇಗುಲದಲ್ಲಿ ಪುಣ್ಯ ಸ್ನಾನ ಮತ್ತು ಮುಡಿ ಸೇವೆ ಬಂದ್ ಮಾಡಲಾಗಿದೆ. ದೇವಸ್ಥಾನದ ಸ್ನಾನಘಟ್ಟದ ಮೆಟ್ಟಿಲುಗಳು ಮುಳುಗಡೆಯಾಗಿದ್ದು, ಪುಣ್ಯ ಸ್ನಾನ ನಿಷೇಧಿಸಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ದೇವರ ದರ್ಶನ, ಪೂಜೆ ಪುನಸ್ಕಾರಕ್ಕೆ ಎಂದಿನಂತೆ ಅವಕಾಶ ನೀಡಲಾಗಿದೆ. ಕಪಿಲಾ ನದಿ ದಡದ ನಿವಾಸಿಗಳು ಎಚ್ಚರದಿಂದಿರಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಭಾರಿ ಮಳೆಗೆ ಹದಿನಾರು ಕಾಲು ಮಂಟಪ ಭಾಗಶಃ ಮುಳುಗಿದ್ದು, ನಂಜನಗೂಡು ಜನರಿಗೆ ಪ್ರವಾಹದ ಆತಂಕ ಶುರುವಾಗಿದೆ. ಕಳೆದ ಬಾರಿ ತೋಪಿನ ಬೀದಿ, ಒಕ್ಕಲಗೇರಿ, ಹಳ್ಳದಕೇರಿ, ಗೌರಿಘಟ್ಟ ಬೀದಿ ಬಡಾವಣೆಗಳಿಗೆ ನೀರು ನುಗ್ಗಿತ್ತು. ಹಾಗಾಗಿ ಕಪಿಲಾ ನದಿಯ ಅಂಚಿನಲ್ಲಿರುವ ಬಡಾವಣೆಗಳ ಜನರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ತಿಳಿಸಿದೆ.

ಕಬಿನಿ ಜಲಾಶಯ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಜಲಾಶಯದ ಇಂದಿನ ಒಳಹರಿವು 26,100 ಕ್ಯೂಸೆಕ್ಗೆ ಹೆಚ್ಚಳವಾಗಿದೆ. ಜಲಾಶಯದ ಹೊರಹರಿವು 30,000 ಕ್ಯೂಸೆಕ್ ಇದೆ. ಜಲಾಶಯ 84 ಅಡಿ ಗರಿಷ್ಠ ಸಾಮರ್ಥ್ಯದಿಂದ ಕೂಡಿದ್ದು, ಇಂದಿನ ನೀರಿನ ಮಟ್ಟ 80.40 ಅಡಿ ಇದೆ. ಮತ್ತಷ್ಟು ಹೊರ ಹರಿವು ಹೆಚ್ಚಾದರೆ ಜಮೀನುಗಳಿಗೆ ನೀರು ನುಗ್ಗುವ ಸಾಧ್ಯತೆ ಹೆಚ್ಚಿದೆ.

ಇನ್ನು ಕೆಆರ್ ನಗರ ತಾಲೂಕಿನ ಧನುಷ್ಕೋಟಿ ಜಲಪಾತ ತುಂಬಿ ಹರಿಯುತ್ತಿದೆ. ರಾಜ್ಯದ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಚುಂಚನಕಟ್ಟೆ ಜಲಪಾತ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೊರೊನಾ ಲಾಕ್ಡೌನ್ ಹಿನ್ನೆಲೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿತ್ತು. ವರ್ಷಕ್ಕೊಮ್ಮೆ ನಡೆಯುತ್ತಿದ್ದ ಜಲಪಾತೋತ್ಸವವು ರದ್ದಾಗಿತ್ತು. ಅದರೆ ಕೊರೊನಾ ತೆರವುಗೊಳಿಸಿದ ಕಾರಣ ಜಲಪಾತದತ್ತ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಧನುಷ್ಕೋಟಿ ಜಲಪಾತ

ಚುಂಚನಕಟ್ಟೆ ಜಲಪಾತ

ಇದನ್ನೂ ಓದಿ

ದಾವಣಗೆರೆ: ಡ್ಯಾಂನಿಂದ ಹರಿದು ಬರುತ್ತಿರುವ ನೀರಿನಲ್ಲಿ ಮೀನು ಹಿಡಿಯುವ ಹುಚ್ಚು ಸಾಹಸಕ್ಕೆ ಇಳಿದು ಕೊಚ್ಚಿ ಹೋಗುತ್ತಿದ್ದ ಯುವಕ; ಅಪಾಯದಿಂದ ಪಾರು

ಬೆಂಗಳೂರಿನಿಂದ ಜೋಗ ಜಲಪಾತ ವೀಕ್ಷಿಸಲು ಬರುವವರಿಗೆ ವಿಶೇಷ ಬಸ್​ ವ್ಯವಸ್ಥೆ ಕಲ್ಪಿಸಿದ ಕೆಎಸ್​ಆರ್​ಟಿಸಿ

(Punya snana and Head Tonsure restricted at srikanteshwara temple nanjangud due to rains)

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!