AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raghu Achar: ನನ್ನ ಮರ್ಯಾದೆ ಪ್ರಶ್ನೆ ಇದು, ಯಾರಾದರೂ ಕಾಂಗ್ರೆಸ್‌ಗೆ ಮತ ನೀಡಿದರೆ ಓಡಿಸಿಬಿಡುತ್ತೇನೆ

ಯಾರಾದರೂ ಕಾಂಗ್ರೆಸ್‌ಗೆ ವೋಟ್ ಹಾಕಿದ್ರೆ ಓಡಿಸ್ಬುಡ್ತೀನಿ, ಇದು ನನ್ನ ಮರ್ಯಾದೆ ಪ್ರಶ್ನೆ ಇದೆ ಎಂದು ಮಾಜಿ ಎಂಎಲ್​ಸಿ ರಘು ಆಚಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Raghu Achar: ನನ್ನ ಮರ್ಯಾದೆ ಪ್ರಶ್ನೆ ಇದು, ಯಾರಾದರೂ ಕಾಂಗ್ರೆಸ್‌ಗೆ ಮತ ನೀಡಿದರೆ ಓಡಿಸಿಬಿಡುತ್ತೇನೆ
Raghu Achar
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Apr 11, 2023 | 4:52 PM

Share

ಹುಣಸೂರು: ನನ್ನ ಮರ್ಯಾದೆ ಪ್ರಶ್ನೆ ಇದು, ಯಾರಾದರೂ ಕಾಂಗ್ರೆಸ್‌ಗೆ ಮತ ನೀಡಿದರೆ ಓಡಿಸಿಬಿಡುತ್ತೇನೆ ಎಂದು ಮಾಜಿ ಎಂಎಲ್​ಸಿ ರಘು ಆಚಾರ್ (Raghu Achar) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇವರಾಜ ಅರಸು ಕರ್ಮ ಭೂಮಿಯಲ್ಲಿ ನಿಂತು ಸಮುದಾಯಕ್ಕೆ ಕೆಲಸ ಮಾಡುತ್ತೇನೆ ಎಂದು ರಘು ಆಚಾರ್ ಹುಣಸೂರಿಗೆ ಹೇಳಿಕೆ ನೀಡಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಜತೆ ಹುಣಸೂರಿಗೆ ಭೇಟಿ ನೀಡಿದ್ದ ರಘು ಆಚಾರ್, ಡಿ.ದೇವರಾಜ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಅರಸು ಹುಟ್ಟೂರು ಕಳ್ಳಹಳ್ಳಿಗೂ ಭೇಟಿ ನೀಡಿ ಡಿ.ದೇವರಾಜ ಅರಸು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಡಿ.ದೇವರಾಜ ಅರಸು ಧೀಮಂತ ನಾಯಕರು, ಅವರು ಹಿಂದುಳಿದ ವರ್ಗಗಳ ನಿಜವಾದ ನಾಯಕ, ಹಾಗಾಗಿ ನಾನು ರಾಜಕೀಯ ಶುರು ಮಾಡುವಾಗ ಡಿ.ದೇವರಾಜ ಅರಸುಗೆ ಪೂಜೆ ಸಲ್ಲಿಸಿದ್ದೇನೆ, ಜೆಡಿಎಸ್​​ಗೆ ಸೇರ್ಪಡೆ ಬಳಿಕವೂ ಅವರ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ: ತಪ್ಪಿದ ಕಾಂಗ್ರೆಸ್ ಟಿಕೆಟ್, ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಹಿಂದುಳಿದ ವರ್ಗಗಳ ನಾಯಕ ಎನಿಸಿಕೊಂಡಿರುವ ಯಾರು ಹಿಂದುಳಿದ ಸಮುದಾಯಗಳಿಗೆ ಏನು ಮಾಡಿಲ್ಲ, ಅಹಿಂದ ಏನೂ ನಡೆಯಲ್ಲ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹುಣಸೂರಿನಲ್ಲಿ ರಘು ಆಚಾರ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಕಾಂಗ್ರೆಸ್​ ತೊರೆದು ಜೆಡಿಎಸ್ ಸೇರ್ಪಡೆಯಾಗಿರುವ ರಘು ಆಚಾರ್ ಅರಸು ಅವರಿಂದ ಮಾತ್ರ ಹಿಂದುಳಿದ ವರ್ಗದ ಎಲ್ಲಾ ಸಮುದಾಯಗಳಿಗೆ ನ್ಯಾಯ ಸಿಕ್ಕಿದೆ. ಅದಕ್ಕಾಗಿ ಹಿಂದಿನಿಂದಲೂ ನಾನು ಇಲ್ಲಿಗೆ ಬಂದು ಹೋಗುತ್ತೇನೆ ಎಂದು ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​​ನಲ್ಲಿ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡಿರುವ ಮಾಜಿ ಎಂಎಲ್​ಸಿ ರಘು ಆಚಾರ್, ಜೆಡಿಎಸ್ ಸೇರ್ಪಡೆಗೊಂಡು ಕಾಂಗ್ರೆಸ್ ವಿರುದ್ಧ ತೊಡೆತಟ್ಟಲು ಸಜ್ಜಾಗುತ್ತಿದ್ದಾರೆ.

Published On - 4:52 pm, Tue, 11 April 23

ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ