AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raghu Achar: ನನ್ನ ಮರ್ಯಾದೆ ಪ್ರಶ್ನೆ ಇದು, ಯಾರಾದರೂ ಕಾಂಗ್ರೆಸ್‌ಗೆ ಮತ ನೀಡಿದರೆ ಓಡಿಸಿಬಿಡುತ್ತೇನೆ

ಯಾರಾದರೂ ಕಾಂಗ್ರೆಸ್‌ಗೆ ವೋಟ್ ಹಾಕಿದ್ರೆ ಓಡಿಸ್ಬುಡ್ತೀನಿ, ಇದು ನನ್ನ ಮರ್ಯಾದೆ ಪ್ರಶ್ನೆ ಇದೆ ಎಂದು ಮಾಜಿ ಎಂಎಲ್​ಸಿ ರಘು ಆಚಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Raghu Achar: ನನ್ನ ಮರ್ಯಾದೆ ಪ್ರಶ್ನೆ ಇದು, ಯಾರಾದರೂ ಕಾಂಗ್ರೆಸ್‌ಗೆ ಮತ ನೀಡಿದರೆ ಓಡಿಸಿಬಿಡುತ್ತೇನೆ
Raghu Achar
TV9 Web
| Edited By: |

Updated on:Apr 11, 2023 | 4:52 PM

Share

ಹುಣಸೂರು: ನನ್ನ ಮರ್ಯಾದೆ ಪ್ರಶ್ನೆ ಇದು, ಯಾರಾದರೂ ಕಾಂಗ್ರೆಸ್‌ಗೆ ಮತ ನೀಡಿದರೆ ಓಡಿಸಿಬಿಡುತ್ತೇನೆ ಎಂದು ಮಾಜಿ ಎಂಎಲ್​ಸಿ ರಘು ಆಚಾರ್ (Raghu Achar) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇವರಾಜ ಅರಸು ಕರ್ಮ ಭೂಮಿಯಲ್ಲಿ ನಿಂತು ಸಮುದಾಯಕ್ಕೆ ಕೆಲಸ ಮಾಡುತ್ತೇನೆ ಎಂದು ರಘು ಆಚಾರ್ ಹುಣಸೂರಿಗೆ ಹೇಳಿಕೆ ನೀಡಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಜತೆ ಹುಣಸೂರಿಗೆ ಭೇಟಿ ನೀಡಿದ್ದ ರಘು ಆಚಾರ್, ಡಿ.ದೇವರಾಜ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಅರಸು ಹುಟ್ಟೂರು ಕಳ್ಳಹಳ್ಳಿಗೂ ಭೇಟಿ ನೀಡಿ ಡಿ.ದೇವರಾಜ ಅರಸು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಡಿ.ದೇವರಾಜ ಅರಸು ಧೀಮಂತ ನಾಯಕರು, ಅವರು ಹಿಂದುಳಿದ ವರ್ಗಗಳ ನಿಜವಾದ ನಾಯಕ, ಹಾಗಾಗಿ ನಾನು ರಾಜಕೀಯ ಶುರು ಮಾಡುವಾಗ ಡಿ.ದೇವರಾಜ ಅರಸುಗೆ ಪೂಜೆ ಸಲ್ಲಿಸಿದ್ದೇನೆ, ಜೆಡಿಎಸ್​​ಗೆ ಸೇರ್ಪಡೆ ಬಳಿಕವೂ ಅವರ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ: ತಪ್ಪಿದ ಕಾಂಗ್ರೆಸ್ ಟಿಕೆಟ್, ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಹಿಂದುಳಿದ ವರ್ಗಗಳ ನಾಯಕ ಎನಿಸಿಕೊಂಡಿರುವ ಯಾರು ಹಿಂದುಳಿದ ಸಮುದಾಯಗಳಿಗೆ ಏನು ಮಾಡಿಲ್ಲ, ಅಹಿಂದ ಏನೂ ನಡೆಯಲ್ಲ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹುಣಸೂರಿನಲ್ಲಿ ರಘು ಆಚಾರ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಕಾಂಗ್ರೆಸ್​ ತೊರೆದು ಜೆಡಿಎಸ್ ಸೇರ್ಪಡೆಯಾಗಿರುವ ರಘು ಆಚಾರ್ ಅರಸು ಅವರಿಂದ ಮಾತ್ರ ಹಿಂದುಳಿದ ವರ್ಗದ ಎಲ್ಲಾ ಸಮುದಾಯಗಳಿಗೆ ನ್ಯಾಯ ಸಿಕ್ಕಿದೆ. ಅದಕ್ಕಾಗಿ ಹಿಂದಿನಿಂದಲೂ ನಾನು ಇಲ್ಲಿಗೆ ಬಂದು ಹೋಗುತ್ತೇನೆ ಎಂದು ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​​ನಲ್ಲಿ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡಿರುವ ಮಾಜಿ ಎಂಎಲ್​ಸಿ ರಘು ಆಚಾರ್, ಜೆಡಿಎಸ್ ಸೇರ್ಪಡೆಗೊಂಡು ಕಾಂಗ್ರೆಸ್ ವಿರುದ್ಧ ತೊಡೆತಟ್ಟಲು ಸಜ್ಜಾಗುತ್ತಿದ್ದಾರೆ.

Published On - 4:52 pm, Tue, 11 April 23

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ