AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಭಾರಿ ಮಳೆ; ಸೂರಿಲ್ಲದೆ ನಿವಾಸಿಗಳ ಪರದಾಟ, ಅಪಾರ ಪ್ರಮಾಣದ ಹಾನಿ

ಹುಣಸೂರು ಪಟ್ಟಣ, ತಾಲೂಕಿನಾದ್ಯಂತ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿವೆ. ಅಂಗಡಿ ಮುಂಗಟ್ಟು, ಮನೆಗಳು, ವಾಹನಗಳು ಸೇರಿದಂತೆ ಅಪಾರ ಪ್ರಮಾಣದ ಹಾನಿಯಾಗಿದೆ.

ಮೈಸೂರಿನಲ್ಲಿ ಭಾರಿ ಮಳೆ; ಸೂರಿಲ್ಲದೆ ನಿವಾಸಿಗಳ ಪರದಾಟ, ಅಪಾರ ಪ್ರಮಾಣದ ಹಾನಿ
ಮೈಸೂರಿನಲ್ಲಿ ಭಾರಿ ಮಳೆ
TV9 Web
| Edited By: |

Updated on:May 08, 2022 | 10:56 AM

Share

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಭಾರಿ ಅವಾಂತರ ಸಂಭವಿಸಿದೆ. ಹುಣಸೂರು ತಾಲೂಕಿನ ಕಾಳಬೋಚನಹಳ್ಳಿ, ಹನಗೋಡು ಸುತ್ತಮುತ್ತಲ ಗ್ರಾಮಗಳಲ್ಲಿ ಗಾಳಿ, ಮಳೆಗೆ ಹಲವು ಮನೆಗಳ ಮೇಲ್ಚಾವಣಿಗಳು ಹಾರಿಹೋಗಿವೆ. ಅನೇಕ ಮನೆಗಳಿಗೆ ಹಾನಿಯಾಗಿದೆ. ಸೂರಿಲ್ಲದೆ ನಿವಾಸಿಗಳು ಪರದಾಡುತ್ತಿದ್ದು ಆದಷ್ಟು ಬೇಗ ನೆಲೆ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಮಹಿಳಾ ಕಾಲೇಜು ಬಳಿ ಬೃಹತ್ ಆಲದ ಮರ ಧರೆಗುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹುಣಸೂರು ಪಟ್ಟಣ, ತಾಲೂಕಿನಾದ್ಯಂತ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿವೆ. ಅಂಗಡಿ ಮುಂಗಟ್ಟು, ಮನೆಗಳು, ವಾಹನಗಳು ಸೇರಿದಂತೆ ಅಪಾರ ಪ್ರಮಾಣದ ಹಾನಿಯಾಗಿದೆ. ಹುಣಸೂರು ಟೌನ್, ಗ್ರಾಮಾಂತರ ಪ್ರದೇಶದಲ್ಲಿ ಭಾರಿ ಹಾನಿ ಸಂಭವಿಸಿದೆ.

ದಾವಣಗೆರೆ ಜಿಲ್ಲೆಯಲ್ಲಿ ಗಾಳಿ ಮಳೆಗೆ ಅಪಾರ ಹಾನಿ ದಾವಣಗೆರೆ:ಕಳೆದ ರಾತ್ರಿ ಮಾಯಕೊಂಡ ಸುತ್ತ ಮುತ್ತ ಭಾರಿ ಬಿರುಗಾಳಿ ಸಹಿತ ಮಳೆಯಿಂದ ನೂರಾರು ಅಡಿಕೆ ಗಿಡಗಳು ನೆಲಕ್ಕುರುಳಿದ್ದು ರೈತರಿಗೆ ಲಕ್ಷಾಂತರ ರೂ ಹಾನಿ ಸಂಭವಿಸಿದೆ. ಮಾಯಕೊಂಡ, ಹುಚ್ಚವ್ವನಹಳ್ಳಿ, ಹೆಚ್.ರಾಂಪುರ, ಹೆದ್ನೆ ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ನೂರಾರು ಅಧಿಕ ಅಡಿಕೆ, ತೆಂಗು, ಮಾವಿನ ಮರಗಳು ನೆಲಕ್ಕುರುಳಿ ಅಪಾರ ಹಾನಿಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಕೂಡ ಮಾಗಡಿ, ದಿಂಡದಹಹಳ್ಳಿ ಅಣ್ಣಾಪುರ ಗ್ರಾಮಗಳಲ್ಲು ಗಾಳಿಗೆ ಮರಗಳು ರಸ್ತೆಗೆ ಬಿದ್ದ ಪರಿಣಾಮ ಹೊಸ ದುರ್ಗ ದಾವಣಗೆರೆ ‌ಮಧ್ಯೆ ಸಂಚರಿಸುವ ವಾಹನಗಳಿಗೆ ಅಡ್ಡಿ ಉಂಟಾಗಿತ್ತು. ‌ಪ್ರಯಾಣಿಕರೆ ಮರಗಳನ್ನು ರಸ್ತೆಯಿಂದ‌ ತೆರವುಗೊಳಿಸಿದ್ದರು.

Dvg Rain effect

ದಾವಣಗೆರೆ ಜಿಲ್ಲೆಯಲ್ಲಿ ಗಾಳಿ ಮಳೆಗೆ ಅಪಾರ ಹಾನಿ

ಮಳೆಗಾಳಿಗೆ ಹಾರಿಹೋದ ಕ್ಷೌರಿಕನ ಅಂಗಡಿ ದಾವಣಗೆರೆ ತಾಲೂಕಿನ ಹೆಬ್ಬಾಳ್ ಗ್ರಾಮದಲ್ಲಿ ತಡರಾತ್ರಿ ಸುರಿದ ಗಾಳಿ ಮಳೆಗೆ ಕ್ಷೌರಿಕನ ಅಂಗಡಿ ಸಂಪೂರ್ಣ ವಾಗಿ ಹಾರಿಹೋಗಿದೆ. ಭಾರಿ ಗಾಳಿಯಿಂದ ಈ ಪ್ರದೇಶದಲ್ಲಿನ ಹಲವಾರು ಅಂಗಡಿಗಳಿಗೂ ಹಾನಿ ಆಗಿದೆ.

ಮೇ9ರ ವರೆಗೂ ರಾಜ್ಯದಲ್ಲಿ ಮಳೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ 2 ದಿನ ಕರ್ನಾಟಕದಲ್ಲಿ ವರುಣನ ಆರ್ಭಟ ಇರಲಿದೆ. ಬೆಂಗಳೂರು (Bengaluru Rain) ಮಾತ್ರವಲ್ಲದೆ ಮಲೆನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಮೇ 9ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೊಂದು ದಿನ (ಮೇ 9ರವರೆಗೆ) ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಕೂಡ ಇದೆ.

ಬೆಂಗಳೂರು ಮಾತ್ರವಲ್ಲದೆ ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆಯೂ ಜೋರಾಗಿ ಮಳೆ ಸುರಿದಿದ್ದು, ಇಂದು ಸಂಜೆಯ ನಂತರವೂ ಮಳೆ ಅಬ್ಬರಿಸುವ ನಿರೀಕ್ಷೆಯಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳಿಗ್ಗೆ, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ಬಳಿಕ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 am, Sun, 8 May 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ