AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಿಂದೆಯೇ ರಾಜೀವ್ ಗಾಂಧಿ ದೂರದರ್ಶನದ ಮೂಲಕ ರಾಮಾಯಣ, ಮಹಾಭಾರತ ತೋರಿಸಿದ್ದಾರೆ; ಬಿಜೆಪಿಗೆ ಡಿಕೆಶಿ ಟಾಂಗ್

ಪ್ರತಿ ಭಾನುವಾರ ದೇಶವೇ ಟಿವಿ ಮುಂದೆ ರಾಮಾಯಣ ಧಾರವಾಹಿಗಾಗಿ ಕಾದು ಕುಳಿತಿರುತ್ತಿತ್ತು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ವೇಳೆ ಧಾರವಾಹಿ ಪ್ರಸಾರವಾಗಿತ್ತು. ಬಿಜೆಪಿಗರ ಜೈ ಶ್ರೀರಾಮ್ ಘೋಷಣೆಗೆ ರಾಮಾಯಣದ ಮೂಲಕ ಡಿಕೆ ಶಿವಕುಮಾರ್ ಉತ್ತರ ನೀಡಿದ್ದಾರೆ.

ಈ ಹಿಂದೆಯೇ ರಾಜೀವ್ ಗಾಂಧಿ ದೂರದರ್ಶನದ ಮೂಲಕ ರಾಮಾಯಣ, ಮಹಾಭಾರತ ತೋರಿಸಿದ್ದಾರೆ; ಬಿಜೆಪಿಗೆ ಡಿಕೆಶಿ ಟಾಂಗ್
ಡಿಕೆ ಶಿವಕುಮಾರ
Follow us
TV9 Web
| Updated By: ಆಯೇಷಾ ಬಾನು

Updated on:Mar 20, 2022 | 7:56 PM

ಮೈಸೂರು: ಬಿಜೆಪಿ(BJP) ಹಿಂದುತ್ವ ತಂತ್ರಕ್ಕೆ ಕಾಂಗ್ರೆಸ್ನಿಂದಲೂ(Congress) ಕೌಂಟರ್ ನೀಡಲಾಗಿದೆ. ಮತ್ತೆ ರಾಮನಾಮದ ಮೂಲಕವೇ ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಟಾಂಗ್ ಕೊಟ್ಟಿದ್ದಾರೆ. ಅಲ್ಲದೆ ಈ ಹಿಂದೆ ದೂರದರ್ಶನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ ಧಾರವಾಹಿ ನೆನಪಿಸಿಕೊಂಡಿದ್ದಾರೆ.

ಪ್ರತಿ ಭಾನುವಾರ ದೇಶವೇ ಟಿವಿ ಮುಂದೆ ರಾಮಾಯಣ ಧಾರವಾಹಿಗಾಗಿ ಕಾದು ಕುಳಿತಿರುತ್ತಿತ್ತು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ವೇಳೆ ಧಾರವಾಹಿ ಪ್ರಸಾರವಾಗಿತ್ತು. ಬಿಜೆಪಿಗರ ಜೈ ಶ್ರೀರಾಮ್ ಘೋಷಣೆಗೆ ರಾಮಾಯಣದ ಮೂಲಕ ಡಿಕೆ ಶಿವಕುಮಾರ್ ಉತ್ತರ ನೀಡಿದ್ದಾರೆ. ಈ ಹಿಂದೆ ರಾಜರಾಜೇಶ್ವರಿ ನಗರ ಉಪ ಚುನಾವಣೆಯ ವೇಳೆ ಜೈ ಶ್ರೀರಾಮ್ ಎಂದಿದ್ದ ಡಿಕೆಶಿ ಈಗ ಮತ್ತೆ ರಾಮನಾಮದ ಮೂಲಕವೇ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.

ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಈ ಹಿಂದೆಯೇ ರಾಜೀವ್ ಗಾಂಧಿ ರಾಮಾಯಣ, ಮಹಾಭಾರತ ತೋರಿಸಿದ್ದಾರೆ. ದೂರದರ್ಶನದ ಮೂಲಕ ದೇಶದ ಜನರಿಗೆ ತಲುಪಿಸಿದ್ದಾರೆ. ನಾವು ಸಹ ಹಿಂದೂಗಳೇ ಎಂದು ಭಗವದ್ಗೀತೆಯ ಯದಾ ಯದಾ ಹಿ ಧರ್ಮಸ್ಯ ಶ್ಲೋಕದ ಮೂಲಕ ಬಿಜೆಪಿಗೆ ಡಿಕೆಶಿ ತಿರುಗೇಟು ನೀಡಿದ್ದಾರೆ. ಭಗವದ್ಗೀತೆಯನ್ನು ಬರೀ ಶಿಕ್ಷಣದಲ್ಲಿ ಮಾತ್ರವಲ್ಲ ಇಡೀ ದೇಶದ ಜನರಿಗೆ ತಲುಪಿಸಿದ್ದು ಕಾಂಗ್ರೆಸ್ ಎಂದಿದ್ದಾರೆ.

ಇನ್ನು ‘ಮುಂದೊಂದು ದಿನ ಕೇಸರಿ ಧ್ವಜವೇ ರಾಷ್ಟ್ರಧ್ವಜವಾಗಬಹುದು’ ಎಂಬ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕಲ್ಲಡ್ಕ ಪ್ರಭಾಕರ್ ಬಿಜೆಪಿಯಲ್ಲಿ ಯಾರು, ಏನು ಅಂತ ಗೊತ್ತಿಲ್ಲ. ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ.  ಸಚಿವರೊಬ್ಬರ ಹೇಳಿಕೆಗೆ ಹೋರಾಟ ಮಾಡಿದ್ದೆವು. ಈ ಬಗ್ಗೆ ನಡ್ಡಾ ಅವರಿಂದ ಪ್ರತಿಕ್ರಿಯೆ ಸಿಕ್ಕಿದೆ. ಈ ರೀತಿ ಮಾತನಾಡುವವರು ರಾಷ್ಟ್ರ ದ್ರೋಹಿಗಳು. ಜನರು ದಡ್ಡರಲ್ಲ, ಈ ರೀತಿಯ ಭಾವನಾತ್ಮಕ ಮಾತುಗಳಿಗೆ ಮರಳಾಗುವುದಿಲ್ಲ ಎಂದಿದ್ದಾರೆ.

ಜನರ ಸಮಸ್ಯೆ ಮುಂದಿಟ್ಟುಕೊಂಡು ಚುನಾವಣೆಗೆ ಹೋಗ್ತೇವೆ ಬಿಜೆಪಿ ಭಾವನಾತ್ಮಕ ಸಿದ್ದಾಂತದ ಮೇಲೆ ಹೋಗುತ್ತದೆ. ನಾವು ನಿರುದ್ಯೋಗ, ಬೆಲೆ ಏರಿಕೆ ಸೇರಿದಂತೆ ಜನರ ಸಮಸ್ಯೆ ಮುಂದಿಟ್ಟುಕೊಂಡು ಚುನಾವಣೆಗೆ ಹೋಗ್ತೇವೆ. ಇಂದು ಕಬ್ಬಿಣದ ಬೆಲೆ ಟನ್‌ಗೆ 1 ಲಕ್ಷ ರೂಪಾಯಿ ಆಗಿದೆ. ಸಿಮೆಂಟ್ ದರ 450 ರೂ. ಆಗಿದೆ. ಆದ್ರೆ ನಮ್ಮ ಶೋಭಕ್ಕ ನೋಡಿದ್ರೆ ಏನೇನೋ ಹೇಳುತ್ತಾರೆ. ಮೊದಲು ರೈತರಿಗೆ ಬೆಂಬಲ‌ ಬೆಲೆ ಕೊಡಕ್ಕಾ. ರಾಗಿ ಖರೀದಿ ಮಾಡಿಸು ರೈತರನ್ನ ಮೊದಲು ಉಳಿಸಕ್ಕಾ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ಕುರಿತು ಡಿಕೆಶಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಬಾಲಿವುಡ್​ ನಿರ್ದೇಶಕರನ್ನು ಭೇಟಿ ಮಾಡಿ ವಿಶೇಷ ಕೋರಿಕೆ ಇಟ್ಟ ಅಲ್ಲು ಅರ್ಜುನ್

ಉಕ್ರೇನ್​ ನಿರಾಶ್ರಿತರ ಮಕ್ಕಳೊಂದಿಗೆ ಆಟವಾಡಿದ ಸ್ಲೋವಾಕ್ ಪೊಲೀಸ್ ಅಧಿಕಾರಿಗಳು: ವಿಡಿಯೋ ವೈರಲ್​

Published On - 5:37 pm, Sun, 20 March 22

ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ