Mysuru Dasara: ಗತಕಾಲದ ಕಥೆ ಹೇಳುತ್ತಿವೆ ಮೈಸೂರು ಗೊಂಬೆಗಳು, ರಂಗೇರಿದ ಗೊಂಬೆ ಪ್ರದರ್ಶನ

ನಾಡಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಮೈಸೂರಿನ ನಜರ್ ಬಾದ್ ನ ರಾಮನ್ ಸನ್ಸ್ ಕಲಾ ಪ್ರತಿಷ್ಠಾನ ಬೊಂಬೆ ಪ್ರದರ್ಶನ ಆಯೋಜಿಸಿದೆ. 17 ವರ್ಷಗಳಿಂದ ಆಯೋಜಿಸುತ್ತಿರುವ ಪ್ರದರ್ಶನದಲ್ಲಿ, ಗೊಂಬೆಗಳ ಲೋಕವೇ ಅನಾವರಣಗೊಂಡಿದೆ.

Mysuru Dasara: ಗತಕಾಲದ ಕಥೆ ಹೇಳುತ್ತಿವೆ ಮೈಸೂರು ಗೊಂಬೆಗಳು, ರಂಗೇರಿದ ಗೊಂಬೆ ಪ್ರದರ್ಶನ
ಗತಕಾಲದ ಕಥೆ ಹೇಳುತ್ತಿವೆ ಮೈಸೂರು ಗೊಂಬೆಗಳು, ರಂಗೇರಿದ ಗೊಂಬೆ ಪ್ರದರ್ಶನ
Follow us
| Updated By: ಆಯೇಷಾ ಬಾನು

Updated on: Oct 05, 2021 | 9:11 AM

ಮೈಸೂರು: ಮೈಸೂರು ದಸರಾ ಎಷ್ಟೊಂದು ಸುಂದರಾ ಎಂಬಂತೆ ಮೈಸೂರಿನಲ್ಲಿ ದಸರಾ ಸಂಭ್ರಮ ಶುರುವಾಗಿದೆ. ಅಲ್ಲಿ ಎತ್ತ ನೋಡಿರತ್ತ ಬೊಂಬೆಗಳದ್ದೇ ಸಾಮ್ರಾಜ್ಯ ನಿರ್ಮಾಣವಾಗಿದೆ. ಅಂಗೈಯಲ್ಲಿ ಹಿಡಿಯಬಹುದಾದ ಪುಟಾಣಿ ಬೊಂಬೆಯಿಂದ ಹಿಡಿದು ಆಳೆತ್ತರದ ಬೊಂಬೆಗಳು ಅಲ್ಲಿವೆ. ಅಪರೂಪದ ಆ ಬೊಂಬೆಗಳನ್ನ ನೋಡಲು ಜನ ದೌಡಾಯಿಸ್ತಿದ್ದಾರೆ.

ನಾಡಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಮೈಸೂರಿನ ನಜರ್ ಬಾದ್ ನ ರಾಮನ್ ಸನ್ಸ್ ಕಲಾ ಪ್ರತಿಷ್ಠಾನ ಬೊಂಬೆ ಪ್ರದರ್ಶನ ಆಯೋಜಿಸಿದೆ. 17 ವರ್ಷಗಳಿಂದ ಆಯೋಜಿಸುತ್ತಿರುವ ಪ್ರದರ್ಶನದಲ್ಲಿ, ಗೊಂಬೆಗಳ ಲೋಕವೇ ಅನಾವರಣಗೊಂಡಿದೆ. ಜಂಬೂಸವಾರಿ, ಆನೆಗಳು, ಕುದುರೆ, ಕಾಲಾಳು ಸೇರಿದಂತೆ, ಅಂಬಾವಿಲಾಸ ಅರಮನೆ, ಜಿಲ್ಲಾಧಿಕಾರಿ ಕಚೇರಿ ಎಲ್ಲವೂ ಗೊಂಬೆಗಳಲ್ಲಿ ಮೂಡಿದೆ.

ಸುಮಾರು 12 ರಾಜ್ಯಗಳಿಂದ ತಂದಿರುವ ಬೊಂಬೆಗಳು‌ ಇಲ್ಲಿವೆ. ಈ ಸಲ 75 ನೇ ಸ್ವಾತಂತ್ರೋತ್ಸವ, ದಸರಾ ಸೇರಿದಂತೆ ನಾಲ್ಕು ಬಗೆಯ ಕಥೆ ಹೇಳುವ ಬೊಂಬೆ ಕೂರಿಸಲಾಗಿದೆ. ಪಿಂಗಾಣಿ, ಮಣ್ಣು, ಗಾಜು, ಮರದಲ್ಲಿ ಮಾಡಿದ 5 ಸಾವಿರಕ್ಕೂ ಹೆಚ್ಚು ಬೊಂಬೆಗಳಿದ್ದು, ಪ್ರವಾಸಿಗರನ್ನ ಸೆಳೆಯುತ್ತಿವೆ.

ಐತಿಹಾಸಿಕ ದಸರಾದಲ್ಲಿ ಬೊಂಬೆ ಕೂರಿಸೋದು ಕೂಡ ಒಂದು ಆಚರಣೆ. ಸಾಂಸ್ಕೃತಿಕ ನಗರಿಯಲ್ಲಿ ನೀವು ಕೂಡ ಬೊಂಬೆಗಳನ್ನ ನೋಡ್ಬೇಕು ಅಂದ್ರೆ, ಬೊಂಬೆ ಮನೆಗೆ ಭೇಟಿ ನೀಡಿ, ಬೊಂಬೆಗಳನ್ನ ಕಣ್ತುಂಬಿಕೊಳ್ಳಿ.

Mysuru Dolls

ಈ ಸಲ 75 ನೇ ಸ್ವಾತಂತ್ರೋತ್ಸವ, ದಸರಾ ಸೇರಿದಂತೆ ನಾಲ್ಕು ಬಗೆಯ ಕಥೆ ಹೇಳುವ ಬೊಂಬೆ ಕೂರಿಸಲಾಗಿದೆ.

Mysuru Dolls

ನಜರ್ ಬಾದ್ ನ ರಾಮನ್ ಸನ್ಸ್ ಕಲಾ ಪ್ರತಿಷ್ಠಾನ ಬೊಂಬೆ ಪ್ರದರ್ಶನ

ಇದನ್ನೂ ಓದಿ: ‘ಕೊರೊನಾ ಹಿನ್ನೆಲೆ ಸರಳವಾಗಿ ದಸರಾ ಆಚರಿಸೋಣ’ ಮೈಸೂರು ದಸರಾ ಆಹ್ವಾನ ಪತ್ರಿಕೆಯಲ್ಲಿ ಸಿಎಂ ಸಂದೇಶ

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ