AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಮಾತ್ರವಲ್ಲ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ರಾಜಾತಿಥ್ಯ?

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ವಿಡಿಯೋ ವೈರಲ್​ ಬೆನ್ನಲ್ಲೇ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ಮದ್ಯ, ಮಾಂಸ, ಮೊಬೈಲ್ ಫೋನ್‌ಗಳಂತಹ ದುಬಾರಿ ಸೌಲಭ್ಯಗಳು ಲಭ್ಯವಾಗುತ್ತಿರುವ ಬಗ್ಗೆ ವರದಿಯಾಗಿದೆ. ಜೈಲುಗಳು ಸುಧಾರಣಾ ಕೇಂದ್ರಗಳ ಬದಲಿಗೆ ಮೋಜಿನ ತಾಣಗಳಾಗಿ ಮಾರ್ಪಟ್ಟಿದ್ದು, ರಾಜ್ಯದ ಕಾರಾಗೃಹ ವ್ಯವಸ್ಥೆಯಲ್ಲಿನ ಲೋಪಗಳನ್ನು ಇದು ಎತ್ತಿ ತೋರಿಸುತ್ತಿದೆ.

ಪರಪ್ಪನ ಅಗ್ರಹಾರ ಮಾತ್ರವಲ್ಲ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ರಾಜಾತಿಥ್ಯ?
ಮೈಸೂರು ಕೇಂದ್ರ ಕಾರಾಗೃಹ
ಪ್ರಸನ್ನ ಹೆಗಡೆ
|

Updated on:Nov 11, 2025 | 12:20 PM

Share

ಮೈಸೂರು, ನವೆಂಬರ್​ 11: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್​ ಆಗಿದ್ದು, ಉಗ್ರ ಮತ್ತು ಅತ್ಯಾಚಾರಿಗಳೂ ಮೊಬೈಲ್​ ಬಳಸುತ್ತಿದ್ದ ಕ್ಲಿಪ್​ಗಳು ಹೊರ ಬಂದಿದ್ದವು. ಆ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಸರ್ಕಾರ ಘಟನೆ ಸಂಬಂಧ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಿ, ಅಧೀಕ್ಷಕ ಮ್ಯಾಗೇರಿ ಮತ್ತು ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಅವರನ್ನು ಸಸ್ಪೆಂಡ್ ಮಾಡಿತ್ತು. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿಯೂ ಕೈದಿಗಳಿಗೆ ಸಕಲ ಸೌಕರ್ಯ ಸಿಗುತ್ತಿರುವ ಬಗ್ಗೆ ವರದಿಯಾಗಿದೆ.

ಮೈಸೂರು ಕೇಂದ್ರ ಕಾರಾಗ್ರಹದಲ್ಲಿ ಕೆಲ ಕೈದಿಗಳಿಗೆ ಬೇಕಾದ  ಸೌಲಭ್ಯ ಒದಗಿಸಲಾಗುತ್ತಿದ್ದು, ಮದ್ಯ, ಮಾಂಸಾಹಾರ, ಸಿಗರೇಟುಗಳು ಮತ್ತು ಬೀಡಿ, ಮೊಬೈಲ್ ಫೋನ್​ಗಳು ನಿರ್ದಿಷ್ಟ ಬೆಲೆಗೆ ಲಭ್ಯವಾಗುತ್ತಿವೆ. ಆ ಮೂಲಕ ಕೈದಿಗಳ ಮನಃಪರಿವರ್ತನಾ ಕೇಂದ್ರಗಳಾಗಬೇಕಿದ್ದ ಜೈಲು, ಮೋಜಿನ ಸ್ಥಳವಾಗಿ ಮಾರ್ಪಟ್ಟಿದೆ. ಕಾರಾಗೃಹದ ಒಳಭಾಗದಲ್ಲಿ ಪ್ರತಿ ವಸ್ತುವಿಗೂ ನಿಗದಿತ ಬೆಲೆ ಇದ್ದು, ಮಾರುಕಟ್ಟೆಯಲ್ಲಿ ದರ ಬದಲಾದರೂ ಇಲ್ಲಿ ಯಾವುದೇ ಏರಿಳಿತ ಆಗಲ್ಲ. ಒಂದು ವಸ್ತುವಿನ ಕನಿಷ್ಟ ಬೆಲೆಯೇ 150 ರೂ. ಇದೆ. ಇಷ್ಟು ಹಣ ಕೊಟ್ಟು ಖರೀದಿಸುವ ಸಾಮರ್ಥ್ಯ ಇರುವವರಿಗಾಗಿ ಪ್ರತಿ ವಾರ ಮದ್ಯ ಮತ್ತು ಮಾಂಸವನ್ನು ಆರ್ಡರ್​ ಮಾಡಲಾಗುತ್ತೆ ಎಂಬ ಬಗ್ಗೆ ಜೈಲ್ ವಿಸಿಟಿಂಗ್ ಬೋರ್ಡಿನ ಸದಸ್ಯ ಪವನ ಸಿದ್ದರಾಮು ತಿಳಿಸಿರೋದಾಗಿ ದಿ ನ್ಯೂ ಇಂಡಿಯನ್​ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ಇದನ್ನೂ ಓದಿ:  ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ, ಮತ್ತೊಂದು ವಿಡಿಯೋ ವೈರಲ್​​

ಕೈದಿಗಳಿಗೆ ಐಷಾರಾಮಿ ಜೀವನಕ್ಕೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಕ್ಯಾಂಟೀನ್​ ಆಪರೇಟರ್​​ಗಳು ಮತ್ತು ಕೆಲ ಕರ್ನಾಟಕ ಸ್ಟೇಟ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಸಿಬ್ಬಂದಿ ಪಾತ್ರ ವಹಿಸಿದ್ದಾರೆ. ಇವು ಜೈಲು ಅಧೀಕ್ಷಕರ ಮೂಗಿನ ಕೆಳಗೆಯೇ ನಡೆಯುತ್ತಿರುವ ಘಟನೆಗಳಾಗಿವೆ. ಮೈಸೂರು ಪೊಲೀಸರು ಸರ್ಪ್ರೈಸ್​ ವಿಸಿಟ್​ಗಳನ್ನು ನಡೆಸಿದರೂ ಅಲ್ಲಿ ಏನು ಸಿಗದಿರುವುದು ವಿಪರ್ಯಾಸ. ಸರಿಯಾಗಿ ದಾಳಿ ನಡೆಸಿದರೆ ಪ್ರತಿಬಾರಿಯೂ ನೂರಾರು ಸಿಮ್ ಕಾರ್ಡ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಬಹುದು. ಮೈಸೂರು ಕೇಂದ್ರ ಕಾರಾಗೃಹದ ಪ್ರಸ್ತುತ ಮುಖ್ಯ ಸೂಪರ್‌ಟೆಂಡೆಂಟ್ ಹಿಂದೆ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೆಲಸ ಮಾಡಿದ್ದರು. ಈಗ ಅಲ್ಲಿಂದ ದೇಶಾದ್ಯಂತ ಸುದ್ದಿಯಾಗುವ ರೀತಿಯ ವಿಡಿಯೋಗಳು ಹೊರ ಬಂದಿವೆ. ಆ ಮೂಲಕ ನಾವು ಕಾರಾಗೃಹಗಳಲ್ಲಿ ಪ್ಯಾರಲೆಲ್ ಮಾಫಿಯಾ ನೆಟ್‌ವರ್ಕ್ ನಿರ್ಮಿಸುತ್ತಿದ್ದೇವೆ ಎಂದು ಪವನ ಸಿದ್ದರಾಮು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:17 pm, Tue, 11 November 25

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ