AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ವ್ಯವಸ್ಥೆ ನಿರ್ಮೂಲನೆಗೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೊಟ್ಟ ಐಡಿಯಾ ಏನು ನೋಡಿ!

ಮೈಸೂರಿನಲ್ಲಿ ನಡೆದ ಜೆಎಸ್‌ಎಸ್ ಸುವರ್ಣ ಮಹೋತ್ಸವ ಉಪನ್ಯಾಸದಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ದೇಶದ ಪ್ರಗತಿಗೆ ಸಾಮಾಜಿಕ ಸಾಮರಸ್ಯವೇ ಅಡಿಪಾಯ ಎಂದರು. ಜನಸಂಖ್ಯಾ ಅಸಮತೋಲನದ ಬಗ್ಗೆ ಎಚ್ಚರಿಕೆ ನೀಡಿದ ಅವರು, ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಕರೆ ನೀಡಿದರು. ಅಲ್ಲದೆ, ಏಕರೂಪ ನಾಗರೀಕ ಸಂಹಿತೆ ಶೀಘ್ರದಲ್ಲೇ ಜಾರಿಯಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಜಾತಿ ವ್ಯವಸ್ಥೆ ನಿರ್ಮೂಲನೆಗೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೊಟ್ಟ ಐಡಿಯಾ ಏನು ನೋಡಿ!
ಮೋಹನ್ ಭಾಗವತ್Image Credit source: TV9 Network
ಗಣಪತಿ ಶರ್ಮಾ
|

Updated on: May 09, 2026 | 8:58 AM

Share

ಮೈಸೂರು, ಮೇ 9: ಭಾರತದ ಸರ್ವತೋಮುಖ ಪ್ರಗತಿಗೆ ಸಾಮಾಜಿಕ ಸಾಮರಸ್ಯ ಮತ್ತು ಭಾವನಾತ್ಮಕ ಏಕೀಕರಣ ಅತ್ಯಗತ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ. ನಗರದ ಜೆಎಸ್‌ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವ ಉಪನ್ಯಾಸ ಮಾಲಿಕೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ಸಾಮರಸ್ಯವೇ ಪ್ರೇರಕ ಶಕ್ತಿ’ ಎಂಬ ವಿಷಯದ ಕುರಿತು ಅವರು ಗುರುವಾರ ವಿಶೇಷ ಉಪನ್ಯಾಸ ನೀಡಿದರು. ಸಮಾಜವು ಜಾತಿ ಮತ್ತು ಧರ್ಮದ ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.

ಮುಖ್ಯಾಂಶಗಳು

  • ಜನಸಂಖ್ಯಾ ನಿಯಂತ್ರಣಕ್ಕಿಂತ ಜನಸಂಖ್ಯಾ ಅಸಮತೋಲನದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ.
  • ಜಾತಿ ಆಧಾರಿತ ರಾಜಕೀಯವನ್ನು ಕೊನೆಗಾಣಿಸಲು ಸಮಾಜವೇ ಮೊದಲು ಜಾತಿಯನ್ನು ಮರೆಯಬೇಕು.
  • ಏಕರೂಪ ನಾಗರಿಕ ಸಂಹಿತೆ (UCC) ದೇಶಾದ್ಯಂತ ಹಂತಹಂತವಾಗಿ ಜಾರಿಗೆ ಬರಲಿದೆ ಎಂಬ ವಿಶ್ವಾಸ.

ಅಭಿವೃದ್ಧಿ ಎಂದರೆ ಕೇವಲ ಭೌತಿಕ ಸಮೃದ್ಧಿಯಲ್ಲ, ಅದು ಸಮಾಜದ ಕೊನೆಯ ವ್ಯಕ್ತಿಯನ್ನೂ ತಲುಪಬೇಕು ಎಂದು ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸ್ಮರಿಸಿದ ಅವರು, ಸಾಮಾಜಿಕ ಸಮಾನತೆ ಮತ್ತು ಭ್ರಾತೃತ್ವವಿಲ್ಲದೆ ರಾಜಕೀಯ ಮತ್ತು ಆರ್ಥಿಕ ಸಮಾನತೆ ಉಳಿಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಜಾತಿ ವಿಭಜನೆಯನ್ನು ಹೋಗಲಾಡಿಸಲು ಜನರ ನಡುವೆ ಪರಸ್ಪರ ಒಡನಾಟ ಹೆಚ್ಚಾಗಬೇಕು. ಪರಸ್ಪರರ ಮನೆಗಳಿಗೆ ಭೇಟಿ ನೀಡಬೇಕು ಮತ್ತು ಅಂತರಜಾತಿ ವಿವಾಹಗಳನ್ನು ಪ್ರೋತ್ಸಾಹಿಸಬೇಕು. ಸಮಾಜ ಜಾತಿ ಮರೆತರೆ ರಾಜಕೀಯ ಕ್ಷೇತ್ರದಿಂದಲೂ ಅದರ ನಿರ್ಮೂಲನೆ ಸಾಧ್ಯ ಎಂದು ಅವರು ಹೇಳಿದರು.

ಜನಸಂಖ್ಯಾ ನೀತಿ ಮತ್ತು ಏಕರೂಪ ನಾಗರೀಕ ಸಂಹಿತೆ

ಜನಸಂಖ್ಯಾ ನೀತಿಯ ಕುರಿತು ಮಾತನಾಡಿದ ಅವರು, ಸರ್ಕಾರವು ಮುಂದಿನ ನೂರು ವರ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ದೀರ್ಘಾವಧಿಯ ನೀತಿಗಳನ್ನು ರೂಪಿಸಬೇಕು. ಜನಸಂಖ್ಯಾ ಅಸಮತೋಲನವು ದೊಡ್ಡ ಸವಾಲಾಗಿದ್ದು, ಯಾವುದೇ ತಾರತಮ್ಯವಿಲ್ಲದೆ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಇನ್ನು ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ನಿರ್ಧಾರಗಳು ಸಾಮೂಹಿಕವಾಗಿ ರೂಪುಗೊಳ್ಳಬೇಕಾದ್ದರಿಂದ ತಾಳ್ಮೆ ಅಗತ್ಯ. ಯುಸಿಸಿ ಶೀಘ್ರದಲ್ಲೇ ದೇಶಾದ್ಯಂತ ಜಾರಿಯಾಗುವ ಆಶಾವಾದ ಇದೆ ಎಂದರು.

ಧರ್ಮ ಮತ್ತು ದೇಶದ ಅಸ್ಮಿತೆ

ಭಾರತದ ಅಸ್ಮಿತೆಯು ಇಲ್ಲಿನ ಸಂಸ್ಕೃತಿ ಮತ್ತು ನಾಗರಿಕತೆಯಿಂದ ರೂಪುಗೊಂಡಿದೆ. ನಮಗೆ ಈ ಭೂಮಿ ಕೇವಲ ನೆಲವಲ್ಲ, ಅದು ‘ಮಾತೃಭೂಮಿ’. ಎಲ್ಲಾ ಧರ್ಮಗಳೂ ಒಂದೇ ಸತ್ಯವನ್ನು ಹುಡುಕುತ್ತವೆ, ಆದರೆ ದಾರಿಗಳು ಮಾತ್ರ ಬೇರೆ ಬೇರೆ. ಮಾನವಕುಲದ ಉಳಿವಿಗೆ ಧರ್ಮಗಳ ನಡುವಿನ ಸಾಮರಸ್ಯವು ಅನಿವಾರ್ಯವಾಗಿದೆ. ಸಮಾಜವು ಜಾತಿಯನ್ನು ಮರೆತರೆ, ರಾಜಕೀಯವೂ ಜಾತಿಯನ್ನು ಮರೆಯುತ್ತದೆ ಎಂದು ಮೋಹನ್ ಭಾಗವತ್ ಈ ಸಂದರ್ಭದಲ್ಲಿ ಮಾರ್ಮಿಕವಾಗಿ ನುಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್