Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಿಯಮ ಉಲ್ಲಂಘಿಸಿ ಸಂಚಾರ; ನೆಟ್ಟಿಗರು ಗರಂ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಆದರೂ ಕೂಡ ಅನೇಕರು ನಿಯಮ ಉಲ್ಲಂಘಿಸಿ ಹೆದ್ದಾರಿ ಮೇಲೆ ಸಂಚರಿಸುತ್ತಿದ್ದು, ಪ್ರಯಾಣಿಕರು ದೃಶ್ಯ ಸೆರೆ ಹಿಡಿದು ಟ್ವಿಟ್​ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಿಯಮ ಉಲ್ಲಂಘಿಸಿ ಸಂಚಾರ; ನೆಟ್ಟಿಗರು ಗರಂ
ಎಕ್ಸಪ್ರೆಸ್​ ವೇ ನಿಯಮ ಮೀರಿ ಸಂಚಾರ
Follow us
ವಿವೇಕ ಬಿರಾದಾರ
|

Updated on: Aug 01, 2023 | 3:04 PM

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru-Mysore Expressway) ಸಂಭವಿಸುತ್ತಿರುವ ಅಪಘಾತಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ (Karnataka Government) ಅನೇಕ ಕ್ರಮಗಳನ್ನು ಕೈಗೊಂಡಿದೆ. ಇತ್ತೀಚಿಗೆ AI ಕ್ಯಾಮೆರಾ (AI Camera) ಅಳವಡಿಸುವ ಮೂಲಕ ಮಿತಿಗಿಂತ ಅತಿಯಾಗಿ ವೇಗದಲ್ಲಿ ವಾಹನ ಚಲಾಯಿಸಿದರೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಇಂದಿನಿಂದ ಬೈಕ್​, ಆಟೋ, ತ್ರಿಚಕ್ರ ವಾಹನ, ಟ್ಯಾಕ್ಟರ್​ ಮತ್ತು ಮೋಟಾರ್​ ರಹಿತ ವಾಹನಗಳನ್ನು ನಿಷೇಧಿಸಲಾಗಿದೆ. ಆದರೂ ಕೂಡ ನಿಯಮಗಳನ್ನು ಉಲ್ಲಂಘಿಸಿ ಜನರು ಎಕ್ಸಪ್ರೆಸ್​ವೇ ನಲ್ಲಿ ಸಂಚರಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿವೆ.

ಬೆಂಗಳೂರು ವೋಸ್ ಎಂಬ ಟ್ವಿಟರ್​ ಬಳಕೆದಾರರು ವಿಡಿಯೋವೊಂದನ್ನು ಟ್ವಿಟ್​ ಮಾಡಿದ್ದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೂಬಿನಕೆರೆ ಬಳಿ “ವಯಸ್ಸಾದ ವ್ಯಕ್ತಿಯೊಬ್ಬರು ದನಗಳೊಂದಿಗೆ ಎಕ್ಸ್‌ಪ್ರೆಸ್‌ವೇ ದಾಟುತ್ತಿರುವುದನ್ನು” ಕಾಣಬಹುದಾಗಿದೆ. ಒಂದು ವೇಳೆ ವೇಗವಾಗಿ ವಾಹನ ಬಂದು ಗುದ್ದಿದರೆ ಯಾರು ಹೊಣೆ? ನಿಯಮ ಬಾಹಿರವಾಗಿ ಏಕೆ ಹೆದ್ದಾರಿ ಮೇಲೆ ಸಂಚರಿಸುತ್ತಾರೆ ಎಂದು ಅನೇಕರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:  ಇಂದಿನಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬೈಕ್‌, ರಿಕ್ಷಾ ಸಂಚಾರ ಬಂದ್, ನಿಯಮ ಮೀರಿದ್ರೆ ದಂಡ

ಮತೊಬ್ಬ ಟ್ವಿಟರ್​ ಬಳಕೆದಾರರಾದ ನರ್ಶಿಮಾ ಉಪಾಧ್ಯಾಯ ಅವರು ಕೂಡ ಇದೇ ರೀತಿಯಾಗಿ ವಿಡಿಯೋ ಟ್ವಿಟ್​ ಮಾಡಿದ್ದು “ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಎಕ್ಸ್‌ಪ್ರೆಸ್‌ವೇಯಲ್ಲಿ ಯು-ಟರ್ನ್ ತೆಗೆದುಕೊಳ್ಳುವ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಅವರು “ಕೆಎಸ್​ಆರ್​ಟಿಸಿ ಚಾಲಕ ಜು.31ರಂದು ಬೆಳಗ್ಗೆ 8 ಗಂಟೆಗೆ ಬಿಡದಿ ಬಳಿ ರಿವರ್ಸ್ ತೆಗೆದುಕೊಂಡು ರಾಂಗ್ ಸೈಡ್‌ನಲ್ಲಿ ಹೋಗಿದ್ದಾರೆ. ಈ ರೀತಿ ನಿಯಮ ಉಲ್ಲಂಘಿಸಿದರೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುವ ಅನೇಕ ಅಪಘಾತಗಳಿಗೆ ಯಾರು ಹೊಣೆ? ಎನ್​ಹೆಚ್​ಎಐ ಅಥವಾ ತಿಳುವಳಿಕೆ ಇಲ್ಲಿದ ಚಾಲಕನೆ?” ಎಂದು ಕೆಎಸ್​ಆರ್​ಟಿಸಿ, ಎನ್​ಹೆಚ್​ಎಐ ಮತ್ತು ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರಿಗೆ ಟ್ಯಾಗ್​ ಮಾಡಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ KSRTC “ನಿಮ್ಮ ಟ್ವಿಟರ್ ದೂರನ್ನು ಪರಿಶೀಲಿಸಲು ಸಂಬಂಧಿಸಿದ ವಿಭಾಗಕ್ಕೆ ರವಾನಿಸಲಾಗಿದೆ.” ಅಲ್ಲದೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ರಾಮನಗರ ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು