AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ತವರು ಮೈಸೂರಲ್ಲೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಆರ್​ವಿ ದೇಶಪಾಂಡೆ

ಕಾಂಗ್ರೆಸ್​ನಲ್ಲಿ‌ ಎಲ್ಲವೂ ಸರಿ ಇಲ್ಲ ಎನ್ನುವುದು ಪದೇ ಪದೇ ಸಾಭೀತಾಗುತ್ತಿದೆ. ಒಂದೆಡೆ ಸಿಎಂ ಬದಲಾವಣೆ ವಿಚಾರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ಕಾಂಗ್ರೆಸ್ ಹಿರಿಯ ಮುಖಂಡ ಆರ್.ವಿ ದೇಶಪಾಂಡೆ ಸಿಎಂ ತವರು ಮೈಸೂರಲ್ಲೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲದೆ ಸಿಎಂ ರಾಜೀನಾಮೆ ಕೊಡಬೇಕು ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಮುಖ್ಯಮಂತ್ರಿ ತವರು ಮೈಸೂರಲ್ಲೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಆರ್​ವಿ ದೇಶಪಾಂಡೆ
ಮುಖ್ಯಮಂತ್ರಿ ತವರು ಮೈಸೂರಲ್ಲೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಆರ್​ವಿ ದೇಶಪಾಂಡೆ
ದಿಲೀಪ್​, ಚೌಡಹಳ್ಳಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 01, 2024 | 7:15 PM

Share

ಮೈಸೂರು, ಸೆ.01: ಮೈಸೂರಿನ ಮುಡಾದಲ್ಲಿ ಸಿಎಂ(CM) ಪತ್ನಿ ಬದಲಿ ನಿವೇಶನ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂಗೆ ಕಾನೂನು ಸಂಕಷ್ಟ ಎದುರಾಗಿದೆ. ಇದರಿಂದ ಸಿಎಂ ಕುರ್ಚಿಗೂ ಕಂಟಕ ಬಂದಿದ್ದು, ಕಾಂಗ್ರೆಸ್​ನಲ್ಲಿ ಸಿಎಂ ಬದಲಾವಣೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೆ ಸಿಎಂ ಕುರ್ಚಿಗೆ ಈಗಾಗಲೇ ಹಲವರು ಟವೆಲ್ ಹಾಸಿದ್ದು, ಅದರಂತೆ ಸಿಎಂ ತವರು ಮೈಸೂರಲ್ಲೆ ನಿಂತು ಕಾಂಗ್ರೆಸ್ ಹಿರಿಯ ಮುಖಂಡ ಆರ್.ವಿ.ದೇಶಪಾಂಡೆ(RV Deshpande) ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲದೆ ಸಿಎಂ ರಾಜೀನಾಮೆ ಕೊಡಬೇಕು ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಆರ್.ವಿ ದೇಶಪಾಂಡೆ ಅವರಿಗೆ ಸಚಿವ ಸ್ಥಾನ‌ ಕೈ ತಪ್ಪಿದಾಗಿನಿಂದಲೂ ಇಬ್ಬರ ನಡುವೆ ಮುಸುಕಿನ ಗುದ್ದಾಟ‌ ನಡೆಯುತ್ತಲೆ‌ ಇದೆ. ಒಂದಿಲ್ಲೊಂದು ಕಾರಣಕ್ಕೆ ಪರೋಕ್ಷವಾಗಿ ಸಿಎಂ ಗೆ ಟಾಂಗ್ ಕೊಡುವ ಕೆಲಸವನ್ನ ಆರ್.ವಿ.ದೇಶಪಾಂಡೆ ಮಾಡುತ್ತಿದ್ದಾರೆ. ಇದೀಗ ಸಿಎಂ ತವರು ಮೈಸೂರಿನಲ್ಲೆ ನಿಂತು ತಾವು ಸಿಎಂ ಆಕಾಂಕ್ಷೆ ಎನ್ನುವ ಸಂದೇಶವನ್ನ ಸಾರಿದ್ದಾರೆ. ಅದರಲ್ಲೂ ಮತ್ತೆ ಸಚಿವ ಸ್ಥಾನ ಸಿಗುವ ವಿಚಾರವಾಗಿ ಮಾತನಾಡಿದ ದೇಶಪಾಂಡೆ, ‘ಸಚಿವ ಆಗಿ ಆಗಿ ದಣಿದಿದ್ದೇನೆ, ಇನ್ನು ಸಿಎಂ ಆಗಬೇಕಷ್ಟೆ ಎಂದು ಹೇಳುವ ಮೂಲಕ ತಾವು ಸಿಎಂ‌ ಆಕಾಂಕ್ಷಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಮೈಸೂರು ಪ್ರವಾಸದ ಸಮಯ ಬದಲಾವಣೆ: ಕಾರಣ ಮುಡಾ ಕೇಸ್..!

ಪರೋಕ್ಷವಾಗಿ ಸಿಎಂ ರಾಜೀನಾಮೆಗೆ ಆಗ್ರಹ

‘ನನಗೂ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಜೀವನದಲ್ಲಿ ಗುರಿ ಇರಬೇಕು. ನಾನು ಸಿದ್ದರಾಮಯ್ಯರಿಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರೂ ಸಿಎಂ ಅನುಮತಿ ಕೊಡಬೇಕು ಎಂದು ಹೇಳುವ ಮೂಲಕ ಸಿದ್ದರಾಮಯ್ಯರಿಗೆ ಮಾರ್ಮಿಕವಾಗಿ ಹೇಳಿದ್ದಾರೆ. ಇನ್ನು ಇದಷ್ಟೆ ಅಲ್ಲ, ಸಿಎಂ ರಾಜೀನಾಮೆ ಕೊಡಬೇಕು ಎಂದು ಪರೋಕ್ಷವಾಗಿ ಹೇಳಿದರು.

ಪ್ರತಿ ಮಾತಿನಲ್ಲೂ ಸಿಎಂ ತಪ್ಪು ಮಾಡಿಲ್ಲ ಎಂದು ಹೇಳುತ್ತಲೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ‘ಈ ಹಿಂದೆ ರಾಮಕೃಷ್ಣ ಹೆಗಡೆಯವರು ಪೋನ್ ಕದ್ದಾಲಿಕೆ ವಿಚಾರವಾಗಿ ರಾಜೀನಾಮೆ ಕೊಟ್ಟರು, ಆದರೀಗಾ ಪ್ರತಿದಿನ ಪೋನ್ ಕದ್ದಾಲಿಕೆ‌ ಆಗುತ್ತಿದೆ. ಈ ಹಿಂದೆ ಮೌಲ್ಯಾಧಾರಿತ ರಾಜಕಾರಣ ಮಾಡುತ್ತಿದ್ದರು, ಅದರಂತೆ ನಡೆದುಕೊಳ್ಳುತ್ತಿದ್ದರು. ಈಗ ಅಂತಹ ಮೌಲ್ಯ ಆಧಾರಿತ ರಾಜಕೀಯ ಇಲ್ಲ ಎಂದು ಹೇಳುವ ಮೂಲಕ ಸಿಎಂ ರಾಜೀನಾಮೆಗೆ ಪರೋಕ್ಷವಾಗಿ ಕುಟುಕಿದರು. ಒಟ್ಟಾರೆ, ಸಿಎಂ‌ರನ್ನ ಸಮರ್ಥನೆ ಮಾಡಿಕೊಳ್ಳುತ್ತಲೆ ಅವರ ವಿರುದ್ಧವೇ ತಮ್ಮ ಅಸಮಾಧಾನವನ್ನ ಆರ್.ವಿ.ದೇಶಪಾಂಡೆ ಹೊರಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?