AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆಗೆ ಸಾ.ರಾ.ಮಹೇಶ್, ರಾಜೀವ್ ಷಡ್ಯಂತ್ರವಿದೆ; ರೋಹಿಣಿ ಸಿಂಧೂರಿಯವರದ್ದು ಎನ್ನಲಾದ ಆಡಿಯೋದಲ್ಲಿ ಆರೋಪ

ನಾನು ಭೂ ಅಕ್ರಮದ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದೆ. ಇದಕ್ಕಾಗಿ ನಾನು ಅಗತ್ಯ ದಾಖಲೆಗಳನ್ನು ಸಂಗ್ರಹಿಸುತ್ತಿದ್ದೆ. ಹೀಗಾಗಿಯೇ ನನ್ನ ವರ್ಗಾವಣೆಗೆ ಷಡ್ಯಂತ್ರ ನಡೆದಿದೆ ಎಂದು ರೋಹಿಣಿ ಸಿಂಧೂರಿಯದ್ದು ಎನ್ನಲಾದ ಆಡಿಯೋದಲ್ಲಿ ಶಾಸಕ ಸಾ.ರಾ.ಮಹೇಶ್ ಮತ್ತು ರಾಜೀವ್ ವಿರುದ್ಧ ಆರೋಪ ಕೇಳಿಬಂದಿದೆ.

ವರ್ಗಾವಣೆಗೆ ಸಾ.ರಾ.ಮಹೇಶ್, ರಾಜೀವ್ ಷಡ್ಯಂತ್ರವಿದೆ; ರೋಹಿಣಿ ಸಿಂಧೂರಿಯವರದ್ದು ಎನ್ನಲಾದ ಆಡಿಯೋದಲ್ಲಿ ಆರೋಪ
ಶಾಸಕ ಸಾ.ರಾ ಮಹೇಶ್ ಮತ್ತು ರೋಹಿಣಿ ಸಿಂಧೂರಿ
TV9 Web
| Updated By: sandhya thejappa|

Updated on: Jun 10, 2021 | 11:41 AM

Share

ಮೈಸೂರು: ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಯವರದ್ದು ಎನ್ನಲಾದ ಮತ್ತೊಂದು ಆಡಿಯೋ ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಸಾ.ರಾ.ಮಹೇಶ್ ಮತ್ತು ರಾಜೀವ್ ವಿರುದ್ಧ ಆರೋಪ ಕೇಳಿಬಂದಿದೆ. ಇಬ್ಬರು ಮೈಸೂರಿನಲ್ಲಿ ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ. ತನ್ನ ವರ್ಗಾವಣೆಗೆ ಈ ಇಬ್ಬರ ಷಡ್ಯಂತ್ರವಿದೆ ಎಂಬ ಆರೋಪ ಆಡಿಯೋದಲ್ಲಿದೆ. ರಾಜೀವ್ ಮುಡಾ ಅಧ್ಯಕ್ಷರಾದ ಬಳಿಕ ಎಲ್ಲ ತೀರ್ಮಾನಗಳ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು, ಶಾಸಕ ಸಾ.ರಾ.ಮಹೇಶ್ ದಾಖಲೆ ಕೇಳಿದ್ದಕ್ಕೆ ಕೊಟ್ಟಿದ್ದೇನೆ. ಬೇರೆಯವರು ಕೇಳಿದರೆ ಅವರ ದಾಖಲೆಯನ್ನು ಕೊಡುತ್ತೇನೆ ಎಂಬ ಮಾತುಗಳು ಆಡಿಯೋದಲ್ಲಿವೆ.

ನಾನು ಭೂ ಅಕ್ರಮದ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದೆ. ಇದಕ್ಕಾಗಿ ನಾನು ಅಗತ್ಯ ದಾಖಲೆಗಳನ್ನು ಸಂಗ್ರಹಿಸುತ್ತಿದ್ದೆ. ಹೀಗಾಗಿಯೇ ನನ್ನ ವರ್ಗಾವಣೆಗೆ ಷಡ್ಯಂತ್ರ ನಡೆದಿದೆ ಎಂದು ರೋಹಿಣಿ ಸಿಂಧೂರಿಯದ್ದು ಎನ್ನಲಾದ ಆಡಿಯೋದಲ್ಲಿ ಶಾಸಕ ಸಾ.ರಾ.ಮಹೇಶ್ ಮತ್ತು ರಾಜೀವ್ ವಿರುದ್ಧ ಆರೋಪ ಕೇಳಿಬಂದಿದೆ.

ಸಾ.ರಾ.ಮಹೇಶ್ ಏಕಾಂಗಿ ಧರಣಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹುಣಸೂರು ರಸ್ತೆಯ ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ. ರಾಜಕಾಲುವೆ ಮೇಲೆ ಸಾ.ರಾ.ಕಲ್ಯಾಣ ಮಂಟಪ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಆರೋಪವನ್ನು ಸಾಬೀತುಪಡಿಸುವಂತೆ ಸಾ.ರಾ.ಮಹೇಶ್ ಪ್ರತಿಭಟನೆ ನಡೆಸಿದರು.

ಐಎಎಸ್ ಅಧಿಕಾರಿಗಳನ್ನು ಓಡಿಸುತ್ತಿದ್ದಾರೆ; ಹೆಚ್.ವಿಶ್ವನಾಥ್ ಕೊರೊನಾ ಓಡಿಸಿ ಎಂದು ಪ್ರಧಾನಿ ಮತ್ತು ರಾಜ್ಯದ ಮುಖ್ಯಮಂತ್ರಿ ಕರೆ ನೀಡಿದ್ದರು. ಆದರೆ ಇವರೆಲ್ಲಾ ಸೇರಿ ಐಎಎಸ್ ಅಧಿಕಾರಿಗಳನ್ನು ಓಡಿಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ರೋಹಿಣಿ ಸಿಂಧೂರಿ, ಶಿಲ್ಪಾನಾಗ್ ಒಳ್ಳೆಯ ಅಧಿಕಾರಿಗಳು. ಇಬ್ಬರು ಐಎಎಸ್ ಅಧಿಕಾರಿಗಳನ್ನು ಹೊರಹಾಕಿದ್ದು ರಾಜಕಾರಣಿಗಳ ಸ್ವಾರ್ಥ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ವರ್ಗಾವಣೆಗೂ ಮುನ್ನ ಭೂ ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಿದ ರೋಹಿಣಿ ಸಿಂಧೂರಿ; ಆದೇಶ ಪ್ರತಿ ವೈರಲ್

ಕೊರೊನಾ ಲಸಿಕೆ ಪಡೆಯಲು ಹೋದಾಗ ಸೂಜಿಗೆ ಹೆದರಿ ನೆಲಕ್ಕುರುಳಿದ ವ್ಯಕ್ತಿ: ವಿಡಿಯೋ ವೈರಲ್

(Sa Ra Mahesh and Rajeev has involved in Rohini Sindhuri transfer process alleged in leaked audio clip)

ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು