AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಣಿ ಸಿಂಧೂರಿ ಆರೋಪಕ್ಕೆ ಮರುಜೀವ; ಸಾ.ರಾ ಮಹೇಶ್ ಒಡೆತನದ ಜಾಗಗಳ ಮರು ಸರ್ವೇ ಮಾಡಲು ಆದೇಶ

ಈಗಾಗಲೇ ಒಮ್ಮೆ ಸಾ.ರಾ.ಮಹೇಶ್ ಒಡೆತನದ ಜಾಗದ ಸರ್ವೇ ನಡೆಸಿ ಒತ್ತುವರಿ ಆಗಿಲ್ಲ ಎಂದು ಪ್ರಾದೇಶಿಕ ಆಯುಕ್ತರು ವರದಿ ಕೊಟ್ಟಿದ್ದರಾದರೂ ಈಗ ಮರು ಸರ್ವೇ ನಡೆಯಲಿದೆ. ದಟ್ಟಗಳ್ಳಿ, ಆರ್.ಟಿ.ನಗರ, ಯಡಹಳ್ಳಿ, ಲಿಂಗಾಂಬುದಿಪಾಳ್ಯ ಸೇರಿದಂತೆ ಆರೋಪ ಕೇಳಿಬಂದಿರುವ ಕಡೆಗಳಲ್ಲೆಲ್ಲಾ ಸರ್ವೇ ನಡೆಸಲು ಭೂದಾಖಲೆಗಳ ಆಯುಕ್ತ ಸೂಚನೆ ನೀಡಿದ್ದಾರೆ.

ರೋಹಿಣಿ ಸಿಂಧೂರಿ ಆರೋಪಕ್ಕೆ ಮರುಜೀವ; ಸಾ.ರಾ ಮಹೇಶ್ ಒಡೆತನದ ಜಾಗಗಳ ಮರು ಸರ್ವೇ ಮಾಡಲು ಆದೇಶ
ಶಾಸಕ ಸಾ.ರಾ ಮಹೇಶ್ ಮತ್ತು ರೋಹಿಣಿ ಸಿಂಧೂರಿ
TV9 Web
| Updated By: Skanda|

Updated on:Sep 04, 2021 | 11:14 AM

Share

ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ನಡುವಿನ ಜಟಾಪಟಿಗೆ ಮತ್ತೊಂದು ಆಯಾಮ ಪಡೆದಿದೆ. ರೋಹಿಣಿ ಸಿಂಧೂರಿ ಮಾಡಿದ್ದ ಆರೋಪಗಳಿಗೆ ಮರುಜೀವ ಸಿಕ್ಕಿದ್ದು, ಮತ್ತೊಮ್ಮೆ ಸಾ.ರಾ.ಮಹೇಶ್ ಒಡೆತನದ ಜಾಗದ ಸರ್ವೇ ನಡೆಸಲು ಭೂದಾಖಲೆಗಳ ಆಯುಕ್ತ ಸೂಚನೆ ನೀಡಿದ್ದಾರೆ. ಈ ಬಾರಿ ಮೈಸೂರು ಅಧಿಕಾರಿಗಳನ್ನು ಹೊರಗಿಟ್ಟು ಸರ್ವೇ ಕಾರ್ಯ ಮಾಡಲಾಗುತ್ತಿದ್ದು, ಮಂಡ್ಯ ಭೂದಾಖಲೆಗಳ ಉಪ ನಿರ್ದೇಶಕರಾದ ಉಮೇಶ್, ತುಮಕೂರಿನ ಸುಜಯ್, ದಾವಣಗೆರೆಯ ಟಿ.ಕೆ.ಲೋಹಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

ಈಗಾಗಲೇ ಒಮ್ಮೆ ಸಾ.ರಾ.ಮಹೇಶ್ ಒಡೆತನದ ಜಾಗದ ಸರ್ವೇ ನಡೆಸಿ ಒತ್ತುವರಿ ಆಗಿಲ್ಲ ಎಂದು ಪ್ರಾದೇಶಿಕ ಆಯುಕ್ತರು ವರದಿ ಕೊಟ್ಟಿದ್ದರಾದರೂ ಈಗ ಮರು ಸರ್ವೇ ನಡೆಯಲಿದೆ. ದಟ್ಟಗಳ್ಳಿ, ಆರ್.ಟಿ.ನಗರ, ಯಡಹಳ್ಳಿ, ಲಿಂಗಾಂಬುದಿಪಾಳ್ಯ ಸೇರಿದಂತೆ ಆರೋಪ ಕೇಳಿಬಂದಿರುವ ಕಡೆಗಳಲ್ಲೆಲ್ಲಾ ಸರ್ವೇ ನಡೆಸಲು ಭೂದಾಖಲೆಗಳ ಆಯುಕ್ತ ಸೂಚನೆ ನೀಡಿದ್ದಾರೆ. ಜತೆಗೆ, 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಆದೇಶ ಮಾಡಿದ್ದಾರೆ. ಹೀಗಾಗಿ, ದಟ್ಟಗಳ್ಳಿಯ ಸಾ.ರಾ.ಚೌಲ್ಟ್ರಿಯ ಜಾಗವನ್ನೂ ಮರು ಅಳತೆ ಮಾಡಲಿದ್ದು, ಸಾ.ರಾ.ಮಹೇಶ್ ವಿರುದ್ಧ ರೋಹಿಣಿ ಸಿಂಧೂರಿ ಮಾಡಿದ್ದ ಆರೋಪಗಳಿಗೆ ಮರುಜೀವ ಸಿಕ್ಕಂತಾಗಿದೆ.

ಬಹುಮುಖ್ಯವಾಗಿ ಈ ಬಾರಿ ಮೈಸೂರು ಅಧಿಕಾರಿಗಳನ್ನು ಹೊರಗಿಟ್ಟು ಸರ್ವೇ ಕಾರ್ಯ ನಡೆಸುತ್ತಿರುವುದು ಗಮನಾರ್ಹವಾಗಿದೆ. ಮಂಡ್ಯ ಭೂದಾಖಲೆಗಳ ಉಪ ನಿರ್ದೇಶಕರಾದ ಉಮೇಶ್, ತುಮಕೂರಿನ ಸುಜಯ್, ದಾವಣಗೆರೆಯ ಟಿ.ಕೆ.ಲೋಹಿತ್ ಅವರನ್ನು ಇದಕ್ಕೆಂದು ನೇಮಕ ಮಾಡಲಾಗಿದ್ದು, 10 ದಿನಗಳ ಒಳಗೆ ವರದಿ ನೀಡಲಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ವಿಚಾರ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತರಿಂದ ತನಿಖೆಗೆ ಆದೇಶವಾದ ಬಗ್ಗೆ ಮುನೀಶ್ ಮೌದ್ಗಿಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಮೈಸೂರು ಹಾಗೂ ಶ್ರೀರಂಗಪಟ್ಟಣ ಭಾಗದಲ್ಲಿ ಸರ್ಕಾರಿ ಜಮೀನು ಒತ್ತುವರಿ ಆಗಿರುವ ಬಗ್ಗೆ ದೂರು ನೀಡಿದ್ದಾರೆ. ದೂರುದಾರರ ಮಾಹಿತಿ ಮೇರೆಗೆ ತನಿಖೆಗೆ ಆದೇಶ ಮಾಡಲಾಗಿದೆ. ಒತ್ತುವರಿ ಬಗೆ ಸ್ಪಷ್ಟತೆ ತಿಳಿಯಲು ಅಧಿಕಾರಿಗಳ ನೇಮಕ ಮಾಡಲಾಗಿದೆ. ಈ ರೀತಿ ಬೇರೆ ಬೇರೆ ದೂರುಗಳು ಬಂದಾಗ, ಅಧಿಕಾರಿಗಳನ್ನ ನೇಮಕ ಮಾಡಿ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿಕ್​ಬ್ಯಾಕ್ ಅರೋಪ; ಅಮಾನತಿಗೆ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಆಗ್ರಹ

ರೋಹಿಣಿ ಸಿಂಧೂರಿ ಸಿಂಗಂ ಅಲ್ಲ, ಮೈಸೂರು ಜನರನ್ನ ಮಂಗ ಮಾಡಲು ಹೊರಟಿದ್ದ ಪ್ರಚಾರ ಪ್ರಿಯೆ: ಸಾ.ರಾ. ಮಹೇಶ್

(Sa Ra Mahesh vs Rohini Sindhuri Fight Sa Ra Mahesh owned properties Re survey order passed)

Published On - 10:43 am, Sat, 4 September 21

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?