AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯದುವೀರ್ ಒಡೆಯರ್ ಜನರ ಜೊತೆ ಬೆರೆಯುತ್ತಾರಾ ಇಲ್ಲವಾ ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ: ಎಸ್​ಎ ರಾಮದಾಸ್

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, ಮೈಸೂರು ಅರಮನೆಯ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಕ್ಷೇತ್ರದಲ್ಲಿ ಬಿಜೆಪಿ ಮಣೆ ಹಾಕಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರತಾಪ್ ಸಿಂಹ ನೀಡಿದ ಹೇಳಿಕೆಗೆ ಮಾಜಿ ಶಾಸಕ ಎಸ್​ಎ ರಾಮದಾಸ್ ಟಾಂಗ್ ಕೊಟ್ಟಿದ್ದಾರೆ.

ಯದುವೀರ್ ಒಡೆಯರ್ ಜನರ ಜೊತೆ ಬೆರೆಯುತ್ತಾರಾ ಇಲ್ಲವಾ ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ: ಎಸ್​ಎ ರಾಮದಾಸ್
ಪ್ರತಾಪ್ ಸಿಂಹ ಮತ್ತು ಎಎಸ್ ರಾಮದಾಸ್
ರಾಮ್​, ಮೈಸೂರು
| Edited By: |

Updated on:Mar 12, 2024 | 4:48 PM

Share

ಮೈಸೂರು, ಮಾ.12: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ (Pratap Simha) ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, ಮೈಸೂರು ಅರಮನೆಯ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಕ್ಷೇತ್ರದಲ್ಲಿ ಬಿಜೆಪಿ ಮಣೆ ಹಾಕಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದ ಪ್ರತಾಪ್ ಸಿಂಹ, ರಾಜ-ಪ್ರಜೆ ನಡುವಣ ವ್ಯತ್ಯಾಸ ಬದಿಗಿಟ್ಟು ಬಂದರೆ ಅವರಿಗೆ ಸ್ವಾಗತ. ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ ಎಂದಿದ್ದರು. ಈ ಹೇಳಿಕೆಗೆ ಕೌಂಟರ್ ಕೊಟ್ಟ ಮಾಜಿ ಶಾಸಕ ಎಸ್​ಎ ರಾಮದಾಸ್ (SA Ramdas), ಯದುವೀರ್ ಒಡೆಯರ್ ಅವರು ಜನರ ಜೊತೆ ಬೆರಿತಾರಾ ಇಲ್ಲವಾ ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮದಾಸ್, ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯ್ತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದೆ ಎಂದು ಹೇಳುವ ಮೂಲಕ ಟಿಕೆಟ್ ಕೈ ತಪ್ಪುವ ಬಗ್ಗೆ ಅಸಮಾಧಾನ ಹೊರಹಾಕುತ್ತಿಉರವ ಪ್ರತಾಪ್ ಸಿಂಹ ಅವರಿಗೆ ಟಾಂಗ್ ಕೊಟ್ಟರು.

ಇದನ್ನು ಓದಿ: ಮಹಾರಾಜರನ್ನೇ ರಾಜಕೀಯಕ್ಕೆ ತಂದ ಪಕ್ಷದ ಮುಖಂಡರಿಗೆ ನಮೋ! ಯದುವೀರ್​​ ರಾಜಕೀಯ ಪ್ರವೇಶ ಬಗ್ಗೆ ಪ್ರತಾಪ್​ ಸಿಂಹ ಟಾಂಗ್

ಕೇಂದ್ರದಲ್ಲಿ ಇದುವರೆಗೂ ಅಭ್ಯರ್ಥಿ ಯಾರೆಂಬುದು ಅಂತಿಮವಾಗಿಲ್ಲ. ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಸುದ್ದಿಗೋಷ್ಠಿ ಕರೆದಿದ್ದೇವೆ. ಮೈಸೂರು ಅರಸರ ಕೊಡುಗೆಗಳ ಬಗ್ಗೆ ಅಪಾರ ಗೌರವವಿದೆ. ಯದುವೀರ ಒಡೆಯರ್ ರವರು ಜನರ ಜೊತೆ ಬೆರಿತಾರಾ ಇಲ್ಲವಾ ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದರು.

ರಾಮದಾಸ್ ಅವರು ಪಕ್ಷಕ್ಕಾಗಿ ಕೆಲಸ ಮಾಡಿದ್ದರು ಎಂದು ಪ್ರತಾಪ್ ಸಿಂಹರವರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವತ್ತಿಗೂ ನಮಗೆ ಪ್ರತಾಪಸಿಂಹ ಲೀಡರ್. ಅವರಿಗೆ ಗೌರವ ಕೊಟ್ಟೆ ಕೊಡುತ್ತೇವೆ. ಅವರಿಗೆ ಟಿಕೆಟ್ ಕೊಟ್ಟರು ಕೆಲಸ ಮಾಡುತ್ತೇವೆ. ನಾನು ಇನ್ನೊಬ್ಬರಿಗೆ ಪಾಠ ಮಾಡುವಷ್ಟು ದೊಡ್ಡವನಲ್ಲ. ನಾನು ಸೋತ ಬಳಿಕವು ಪಕ್ಷದ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ ಎಂದರು.

ಪ್ರತಾಪ್ ಸಿಂಹಗೆ ಟಿಕೆಟ್​ ನಿರಾಕರಣೆ ಆಗಿಲ್ಲ

ಕೆ.ಆರ್​ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಮಾತನಾಡಿ, ಇನ್ನೂ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್​ ನಿರಾಕರಣೆ ಆಗಿಲ್ಲ. ಪ್ರತಾಪ್​ ಸಿಂಹ 10 ವರ್ಷ ಸಂಸದರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ಪ್ರತಾಪ್ ಸಿಂಹಗೆ ಟಿಕೆಟ್ ಸಿಗಬಹುದು. ಬೇರೆಯವರಿಗೆ ಟಿಕೆಟ್​ ಸಿಕ್ಕರೂ ಪ್ರತಾಪಸಿಂಹ ಕೆಲಸ ಮಾಡುತ್ತಾರೆ. ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕವಾಗಿ ಮಾತಾಡಿದ್ದಾರೆ. ಅದರಿಂದ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಮುಜುಗರ ಆಗುತ್ತದೆ. ವಿಚಲಿತರಾಗಿ ಪ್ರತಾಪ್ ಸಿಂಹ ಮಾತನಾಡಬಾರದು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಹೊಂದಾಣಿಕೆ ರಾಜಕೀಯದ ಕಳ್ಳ-ಮಳ್ಳ; ಬಿಎಸ್​ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ತಿರುಗಿಬಿದ್ದ ನೆಟ್ಟಿಗರು, ಕಾರಣ ಇಲ್ಲಿದೆ

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿದ ಮಾಜಿ ಶಾಸಕರೂ ಆಗಿರುವ ಮೈಸೂರು ನಗರ ಘಟಕದ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ, ಡಾ.ಮಂಜುನಾಥ್, ಅಪ್ಪಚ್ಚು ರಂಜನ್ ಸೇರಿ ಹಲವು ಆಕಾಂಕ್ಷಿಗಳಿದ್ದರು. ಕೆ.ಎಸ್.ಈಶ್ವರಪ್ಪ ಬಂದಾಗ ಆಕಾಂಕ್ಷಿಗಳ ಬಗ್ಗೆ ಮಾಹಿತಿ ನೀಡಿದ್ದೆವು. ಅಭ್ಯರ್ಥಿ ಯಾರಾಗಬೇಕೆಂದು ಅಭಿಪ್ರಾಯ ಸಂಗ್ರಹ ಮಾಡಿದ್ದರು. ಅಭ್ಯರ್ಥಿ ಬಗ್ಗೆ ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಅದನ್ನ ಹೈಕಮಾಂಡ್​ಗೆ ತಲುಪಿಸಿದ್ದಾರೆ. ಅದರ ಬಗ್ಗೆ ನಮಗೆ ಮಾಹಿತಿ ಇರಲ್ಲ ಎಂದರು.

ಪ್ರತಾಪ್ ಸಿಂಹಗೆ ನಾಗೇಂದ್ರ ಟಾಂಗ್

ಚುನಾವಣೆಯಲ್ಲಿ ಸೋತವರು ಅವರ ನಡವಳಿಕೆಯಿಂದ ಸೋತಿರಬಹುದು ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಟಾಂಗ್ ಕೊಟ್ಟ ನಾಗೇಂದ್ರ, ನನ್ನ ನಡವಳಿಕೆಯಿಂದ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಆಗಿಲ್ಲ. ನಡವಳಿಕೆ ಸರಿಯಿಲ್ಲ ಅನ್ನೋದಾದರೆ ನನಗೆ ನಗರಾಧ್ಯಕ್ಷ ಸ್ಥಾನ ನೀಡುತ್ತಿದ್ದರೇ ಎಂದು ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:46 pm, Tue, 12 March 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್