AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ನಗರ, ತಾಲೂಕಿನಾದ್ಯಂತ 1ರಿಂದ 9ನೇ ತರಗತಿ ವರೆಗೆ ಶಾಲೆ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ

ಕೊರೊನಾ ಪ್ರಕರಣಗಳು​ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ. ಶಾಲಾ- ಕಾಲೇಜು ಬಂದ್​ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಪ್ರತಿಕ್ರಿಯೆ ನೀಡಿದ್ದರು. 

ಮೈಸೂರು ನಗರ, ತಾಲೂಕಿನಾದ್ಯಂತ 1ರಿಂದ 9ನೇ ತರಗತಿ ವರೆಗೆ ಶಾಲೆ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on: Jan 11, 2022 | 8:31 PM

Share

ಮೈಸೂರು: ಮೈಸೂರು ನಗರ, ತಾಲೂಕಿನಾದ್ಯಂತ ಶಾಲೆಗಳು ಬಂದ್ ಮಾಡಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್​ ಆದೇಶ ಹೊರಡಿಸಿದ್ದಾರೆ. 1 ರಿಂದ 9ನೇ ತರಗತಿವರೆಗೆ ಶಾಲೆಗಳನ್ನು ಬಂದ್ ಮಾಡಿ ಆದೇಶ ನೀಡಲಾಗಿದೆ. ಅದರಂತೆ, ಮೈಸೂರಿನ ಜಿಲ್ಲಾದ್ಯಂತ 1 ರಿಂದ 9ನೇ ತರಗತಿ ಶಾಲೆ ಬಂದ್ ಮಾಡಿ ಆದೇಶಿಸಲಾಗಿದೆ. ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್​ ಮಾಡುವುದಿಲ್ಲ. ಕೊರೊನಾ ಪ್ರಕರಣಗಳು​ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ. ಶಾಲಾ- ಕಾಲೇಜು ಬಂದ್​ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಪ್ರತಿಕ್ರಿಯೆ ನೀಡಿದ್ದರು. 

ಅಲ್ಲಿನ ಅವಶ್ಯಕತೆಗಳಿಗೆ ತಕ್ಕಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಮಾಡಲ್ಲ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಹೇಳಿಕೆ ನೀಡಿದ್ದರು. ಒಂದು ವಾರದಲ್ಲಿ ರಾಜ್ಯದಲ್ಲಿ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. 1 ರಿಂದ 10 ನೇ ತರಗತಿಯ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದರು.

ಕರ್ನಾಟಕ ಕೊರೊನಾ ವರದಿ:

ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 11) ಹೊಸದಾಗಿ 14,473 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,78,129 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,66,461 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,379 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 73,260 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 10,800 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 13,19,340 ಕ್ಕೆ ಏರಿಕೆಯಾಗಿದೆ. 13,19,340 ಸೋಂಕಿತರ ಪೈಕಿ 12,43,995 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,427 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 58,917 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ಸೋಂಕು ಹಿನ್ನೆಲೆ; ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಇದನ್ನೂ ಓದಿ: ಕೊರೊನಾವೈರಸ್ ಲಾಕ್‌ಡೌನ್ ವೇಳೆ ನಡೆದ ಮದ್ಯ ಪಾರ್ಟಿಯಲ್ಲಿ ಬ್ರಿಟನ್ ಪ್ರಧಾನಿ ಭಾಗಿ; ಇಮೇಲ್​​ನಿಂದ ಬಯಲಾಯ್ತು ಪ್ರಕರಣ

ಜುಲೈ 22ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ
ಜುಲೈ 22ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ
ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್