AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ದಿನದ ಭಾರತ್​ ಜೋಡೋ ಯಾತ್ರೆ ಮೈಸೂರು ಜಿಲ್ಲೆಗೆ ಎಂಟ್ರಿ, ಉತ್ಸಾಹದಿಂದ ಹೆಜ್ಜೆ ಹಾಕುತ್ತಿರುವ ರಾಹುಲ್​, ಡಿಕೆಶಿ, ಸಿದ್ದರಾಮಯ್ಯ

ಭಾರತ್​ ಜೋಡೋ ಯಾತ್ರೆ ಮೈಸೂರು ಜಿಲ್ಲೆ ಪ್ರವೇಶ ಮಾಡಿದ್ದು ಕಾಂಗ್ರೆಸ್​ ನಾಯಕರಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ರಾಹುಲ್​ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಸೇರಿ ಹಲವು ನಾಯಕರು ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದಾರೆ.

2ನೇ ದಿನದ ಭಾರತ್​ ಜೋಡೋ ಯಾತ್ರೆ ಮೈಸೂರು ಜಿಲ್ಲೆಗೆ ಎಂಟ್ರಿ, ಉತ್ಸಾಹದಿಂದ ಹೆಜ್ಜೆ ಹಾಕುತ್ತಿರುವ ರಾಹುಲ್​, ಡಿಕೆಶಿ, ಸಿದ್ದರಾಮಯ್ಯ
ಭಾರತ್​ ಜೋಡೋ ಯಾತ್ರೆ
TV9 Web
| Updated By: ಆಯೇಷಾ ಬಾನು|

Updated on:Oct 01, 2022 | 10:38 AM

Share

ಮೈಸೂರು: ಜಿಟಿಜಿಟಿ ಮಳೆಯಿಂದ(Karnataka Rains) ಎರಡನೇ ದಿನದ ಕಾಂಗ್ರೆಸ್​ ಜೋಡೋ ಯಾತ್ರೆ(Bharat Jodo Yatra) ಕೊಂಚ ವಿಳಂಬವಾಗಿದ್ದು ಸದ್ಯ ಗುಂಡ್ಲುಪೇಟೆಯ ತೊಂಡವಾಡಿ ಗೇಟ್​​ನಿಂದ ಆರಂಭವಾಗಿದೆ. ಇಂದು ಬೆಳಗ್ಗೆ 6.30ಕ್ಕೆ ಆರಂಭವಾಗಬೇಕಿದ್ದ ಯಾತ್ರೆ ಸುಮಾರು ಒಂದು ಗಂಟೆ ತಡವಾಗಿ ಆರಂಭವಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಜೆ ಜಾರ್ಜ್, ಎಂಬಿ ಪಾಟೀಲ್ ಭಾಗಿಯಾಗಿದ್ದಾರೆ.

ಭಾರತ್​ ಜೋಡೋ ಯಾತ್ರೆ ಮೈಸೂರು ಜಿಲ್ಲೆಗೆ ಎಂಟ್ರಿ

ಭಾರತ್​ ಜೋಡೋ ಯಾತ್ರೆ ಮೈಸೂರು ಜಿಲ್ಲೆ ಪ್ರವೇಶ ಮಾಡಿದ್ದು ಕಾಂಗ್ರೆಸ್​ ನಾಯಕರಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ರಾಹುಲ್​ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಸೇರಿ ಹಲವು ನಾಯಕರು ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದಾರೆ. ಇದನ್ನೂ ಓದಿ: ನ್ಯಾಟೋ ಪ್ರದೇಶದ ಪ್ರತಿ ಇಂಚನ್ನೂ ನಾವು ಕಾಪಾಡಿಕೊಳ್ಳುತ್ತೇವೆ; ಪುಟಿನ್​ಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಎಚ್ಚರಿಕೆ

ಪಾದಯಾತ್ರೆಯಿಂದ ವಿಶ್ರಾಂತಿಗೆ ತೆರಳಿದ ಸಿದ್ದರಾಮಯ್ಯ

ಇನ್ನು ಇದರ ನಡುವೆ ಪಾದಯಾತ್ರೆಯಿಂದ ವಿಶ್ರಾಂತಿ ಪಡೆಯಲು ಸಿದ್ದರಾಮಯ್ಯ ರಾಹುಲ್ ಗಾಂಧಿಗೆ ತಿಳಿಸಿ ತೆರಳಿದ್ದಾರೆ. ಪ್ರತಿದಿನ ಬೆಳಗ್ಗೆ & ಸಂಜೆ ಸಿದ್ದರಾಮಯ್ಯ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ. ಇದೇ ವೇಳೆ ಪೇಸಿಎಂ ಅಭಿಯಾನಕ್ಕೆ ಮಠಾಧೀಶರ ವಿರೋಧ ವಿಚಾರಕ್ಕೆ ಟಿವಿ9ಗೆ ಮಾತನಾಡಿದ ಸಿದ್ದರಾಮಯ್ಯ, ಭ್ರಷ್ಟಾಚಾರಕ್ಕೆ ಜಾತಿಯ ಬಣ್ಣ ಹಚ್ಚುವುದು ತಪ್ಪು. ಭ್ರಷ್ಟಾಚಾರಕ್ಕೆ ಜಾತಿ ಇದೆಯಾ? ನನ್ನ ಜಾತಿಯವರು ಭ್ರಷ್ಟಾಚಾರ ಮಾಡಿ ಅಂತ ಹೇಳಿಕೊಟ್ಟಿದ್ದಾರಾ. ಅಥವಾ ನಾನು ಭ್ರಷ್ಟಾಚಾರ ಮಾಡಿದರೆ ನನ್ನ ಜಾತಿಯವರೆಲ್ಲ ಭ್ರಷ್ಟ ಅನ್ನೋಕಾಗತ್ತಾ? ಮೋದಿ ಏನು ಹೇಳ್ತಾರೆ‌ ಖಾವೂಂಗಾ ನಾ ಖಾನೆ ದೂಂಗಾ. ಈಗ ಇವರು ಮಾಡಿದ ಭ್ರಷ್ಟಾಚಾರ ಸಮರ್ಥನೆ ಮಾಡಿಕೊಳ್ತಾರಾ? ಅತಿ ಕೆಟ್ಟ ರಾಜಕಾರಣ ಮಾಡುವವರು ಮಾಡೋದು ಇದು ಎಂದರು. ಹಾಗೂ ಮಲ್ಲಿಕಾರ್ಜುನ ಖರ್ಗೆಯವರಿಗೆ ಎಐಸಿಸಿ ಅಧ್ಯಕ್ಷರಾಗುವ ಎಲ್ಲ ಅರ್ಹತೆ ಇದೆ. ಎಲ್ಲ ಸಮಾಜದ ಬಗ್ಗೆಯೂ ಅರಿವು ಇರುವವರು ಅವರು. 50 ವರ್ಷ ಕಾಂಗ್ರೆಸ್ ನಲ್ಲಿಯೇ ಇದ್ದವರು. ಸಮಾಜದ ಆಗುಹೋಗುಗಳ ಬಗ್ಗೆ ಖರ್ಗೆಯವರಿಗೆ ಬಹಳ ಚೆನ್ನಾಗಿ ಅರಿವಿದೆ. ಖರ್ಗೆ ಅಧ್ಯಕ್ಷರಾಗುವುದನ್ನು ನಾನು ಸ್ವಾಗತ ಮಾಡ್ತೇನೆ ಎಂದರು.

ಎರಡನೇ ದಿನದ ಭಾರತ್ ಜೋಡೋ ಪಾದಯಾತ್ರೆ ರೂಟ್

ತೊಂಡವಾಡಿ ಗೇಟ್ ಗುಂಡ್ಲುಪೇಟೆಯಿಂದ ಪಾದಯಾತ್ರೆ ಪ್ರಾರಂಭವಾಗಿ ಬೆಳಗ್ಗೆ 11.00ಕ್ಕೆ ವಿರಾಮ ಸಿಗಲಿದೆ. ಮಧ್ಯಾಹ್ನ 4.00 ಗಂಟೆಗೆ ಕಳಲೆ ಗೇಟ್ ನಿಂದ ಪಾದಯಾತ್ರೆ ಪ್ರಾರಂಭವಾಗಿ ಸಂಜೆ 7.00ಕ್ಕೆ ಚಿಕ್ಕಯ್ಯನ ಛತ್ರ ಗೇಟ್ ಬಳಿ ಪಾದಯಾತ್ರೆ ಮುಕ್ತಾಯಗೊಳ್ಳಲಿದೆ. ತಾಂಡವಪುರ ಎಂಐಟಿ ಕಾಲೇಜ್ ಗೇಟ್ ಬಳಿ ಕಾಂಗ್ರೆಸ್ ನಾಯಕರು ರಾತ್ರಿ ಹಾಲ್ಟ್ ಆಗಲಿದ್ದಾರೆ. ಇದನ್ನೂ ಓದಿ: ನಟ ಯಶ್​ ಯಶೋಮಾರ್ಗದ ಕನಸು ನನಸು: ಕೋಡಿ ತುಂಬಿ ಹರಿದ ತಲ್ಲೂರು ಕೆರೆ, ರೈತರ ಮೊಗದಲ್ಲಿ ಮಂದಹಾಸ

23 ದಿನದ ಹಿಂದೆ ತಮಿಳುನಾಡಿನಿಂದ ಆರಂಭವಾಗಿದ್ದ ಯಾತ್ರೆ, ಕೇರಳದಲ್ಲಿ 355 ಕಿಲೋ ಮೀಟರ್‌ ಕ್ರಮಿಸಿ ಸೆಂ.30ರಂದು ಕರ್ನಾಟಕಕ್ಕೆ ಎಂಟ್ರಿಯಾಗಿತ್ತು. ನಿನ್ನೆ ಚಾಮರಾಜನಗರ ಜಿಲ್ಲೆಯಲ್ಲಿ ಪಾದಯಾತ್ರೆ ಆಗಿದ್ದು ಇಂದು ಮೈಸೂರಿನಲ್ಲಿ ಪಾದಯಾತ್ರೆ ನಡೆಯುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:52 am, Sat, 1 October 22

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ