ಮೈಸೂರು ಜಿಲ್ಲೆಯಲ್ಲಿ ಸರಣಿ ಅಪಘಾತ; 6 ಕಾರುಗಳು ಜಖಂ

ಹುಣಸೂರು(Hunsur) ತಾಲೂಕಿನ ಕೊಳಘಟ್ಟ ಗ್ರಾಮದ ಬಳಿ ಸರಣಿ ಅಪಘಾತ (Serial accident) ಸಂಭವಿಸಿದ್ದು, 6 ಕಾರುಗಳು ಜಖಂ ಆಗಿವೆ. ಒಂದರ ಹಿಂದೆ ಒಂದರಂತೆ ಬಂದ ಆರು ಕಾರುಗಳು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಕುರಿತು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಸರಣಿ ಅಪಘಾತ; 6 ಕಾರುಗಳು ಜಖಂ
ಮೈಸೂರು ಜಿಲ್ಲೆಯಲ್ಲಿ ಸರಣಿ ಅಪಘಾತ
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 23, 2024 | 6:23 PM

ಮೈಸೂರು, ಜೂ.23: ಜಿಲ್ಲೆಯ ಹುಣಸೂರು(Hunsur) ತಾಲೂಕಿನ ಕೊಳಘಟ್ಟ ಗ್ರಾಮದ ಬಳಿ ಸರಣಿ ಅಪಘಾತ (Serial accident) ಸಂಭವಿಸಿದ್ದು, 6 ಕಾರುಗಳು ಜಖಂ ಆಗಿವೆ. ಒಂದರ ಹಿಂದೆ ಒಂದರಂತೆ ಬಂದ ಆರು ಕಾರುಗಳು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂದೆ ಇದ್ದ ಕಾರು ಚಾಲಕನೊಬ್ಬ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಜಖಂ ಆಗಿದೆ. ಈ ಕುರಿತು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಇಂದ್ರಾಣಿ ನದಿಗೆ ಉರುಳಿಬಿದ್ದ ಆಟೋ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಬಳಿಯ ಕಲ್ಸಂಕ ರಸ್ತೆಯಲ್ಲಿರುವ ಇಂದ್ರಾಣಿ ನದಿಗೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಉರುಳಿಬಿದ್ದ ಘಟನೆ ನಡೆದಿದೆ. ಕೂದಲೆಳೆ ಅಂತರದಲ್ಲಿ ಆಟೋದಲ್ಲಿದ್ದ 6 ಪ್ರಯಾಣಿಕರು ಪಾರಾಗಿದ್ದು, ತಡೆಗೋಡೆ ಇಲ್ಲದಿರುವುದರಿಂದ ಆಟೋ ನದಿಗೆ ಉರುಳಿಬಿದ್ದಿದೆ. ಇನ್ನು ಆಟೋ ಚಾಲಕ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಸಿದ್ದ ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಉಡುಪಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಪ್ರಿಯಕರನ ಜತೆ ಸೇರಿ ಗಂಡನ ಕೊಲೆಗೆ ಸಂಚು, ಅಪಘಾತದಲ್ಲೂ ಸಾಯ್ಲಿಲ್ಲ ಕೊನೆಗೆ ಗುಂಡು ಹಾರಿಸಿ ಕೊಂದ ಪತ್ನಿ

ನೇಣು ಬೀಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಮೈಸೂರು: ನಗರದ ಗೋಕುಲಂ ಬಡಾವಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಲ್ಲಿಕಾ(47) ಎಂಬುವವರು ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಂಡನಿಂದ ವಿಚ್ಛೇದನ ಪಡೆದು ಮೃತ ಮಲ್ಲಿಕಾ ಅವರು ಒಂಟಿಯಾಗಿ ವಾಸ ಮಾಡುತ್ತಿದ್ದರು. ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಈ ಕುರಿತು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Sun, 23 June 24

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us