AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರಿಗೆ ಸೋಮಾರಿ ಸಿದ್ದ ಪದ ಬಳಸಿಲ್ಲ: ಸಂಸದ ಪ್ರತಾಪ್​ ಸಿಂಹ​ ಸ್ಪಷ್ಟನೆ

ಫೇಸ್ ಬುಕ್​ ಲೈವ್‌ನಲ್ಲಿ ಸಂಸದ ಪ್ರತಾಪ ಸಿಂಹ ಇಂದು ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಸೋಮಾರಿ ಸಿದ್ದ ಪದ ಬಳಸಿಲ್ಲ. ಸಿದ್ದರಾಮಯ್ಯರನ್ನು ದೃಷ್ಟಿಯಲ್ಲಿ ಇಟ್ಕೊಂಡು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕಲ್ಲು ಬೀಸಿದರೆ ಹಣ್ಣು ಕೊಡಲು ನಾನು ಮರವಲ್ಲ. ನಾನು ಸಹ ತೀವ್ರವಾಗಿಯೇ ಕಲ್ಲು ಬಿಸಾಡುತ್ತೇನೆ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯರಿಗೆ ಸೋಮಾರಿ ಸಿದ್ದ ಪದ ಬಳಸಿಲ್ಲ: ಸಂಸದ ಪ್ರತಾಪ್​ ಸಿಂಹ​ ಸ್ಪಷ್ಟನೆ
ಸಂಸದ ಪ್ರತಾಪ್​ ಸಿಂಹ
ರಾಮ್​, ಮೈಸೂರು
| Edited By: |

Updated on:Dec 27, 2023 | 6:29 PM

Share

ಮೈಸೂರು, ಡಿಸೆಂಬರ್​ 27: ಸಿಎಂ ಸಿದ್ದರಾಮಯ್ಯ ಅವರಿಗೆ ಸೋಮಾರಿ ಸಿದ್ದ ಪದ ಬಳಸಿಲ್ಲ. ಸಿದ್ದರಾಮಯ್ಯರನ್ನು ದೃಷ್ಟಿಯಲ್ಲಿ ಇಟ್ಕೊಂಡು ಹೇಳಿಲ್ಲ ಎಂದು ಸಂಸದ ಪ್ರತಾಪ್​ ಸಿಂಹ (Pratap Simha) ಸ್ಪಷ್ಟನೆ ನೀಡಿದ್ದಾರೆ. ಫೇಸ್ ಬುಕ್​ ಲೈವ್‌ನಲ್ಲಿ ಮಾತನಾಡಿದ ಅವರು, ನೀವು ಕಲ್ಲು ಬಿಸಾಡಿದರೆ, ನಾನು ಹಣ್ಣು ಕೊಡಲ್ಲ. ಕಲ್ಲು ಬೀಸಿದರೆ ಹಣ್ಣು ಕೊಡಲು ನಾನು ಮರವಲ್ಲ. ನಾನು ಸಹ ತೀವ್ರವಾಗಿಯೇ ಕಲ್ಲು ಬಿಸಾಡುತ್ತೇನೆ ಎಂದು ಕಿಡಿಕಾರಿದ್ದಾರೆ.

ನಿಮ್ಮ ಕರ್ನಾಟಕ ಕಾಂಗ್ರೆಸ್ ಫೇಸ್ ಬುಕ್ ಪೇಜ್​ನಲ್ಲಿ ಅಣ್ಣ ನಾಡಕಳ್ಳ, ತಮ್ಮ ಮರಗಳ್ಳ ಅಂತ ಬರೆದುಕೊಂಡಿದ್ದಿರಿ. ಈ ರೀತಿ ಬರೆದು ನನ್ನ ಬಳಿ ನೀವು ಯಾವ ರೀತಿ ಗೌರವ ಕೊಡಿ ಅಂತಾ ಕೇಳುತ್ತಿರಾ ಎಂದು ಪ್ರಶ್ನಿಸಿದ್ದಾರೆ.

ಎಫ್ಐಆರ್‌ನಲ್ಲಿ ನನ್ನ ತಮ್ಮನ ಹೆಸರಿಲ್ಲ. ನನ್ನ ಅಭಿವೃದ್ಧಿ ಕೆಲಸಗಳು ಬಹಳಷ್ಟು ಜನರ ಕಣ್ಣು ಕುಕ್ಕುತ್ತಿದೆ ಹೀಗಾಗಿ ಈ ರೀತಿ ತಿರುಚುತ್ತಿದ್ದಾರೆ. ಮೈಸೂರಿನಲ್ಲಿ ನಿಮ್ಮ ಬಾಲಬುಡುಕರು ಬಹಳಷ್ಟು ಜನ ಹುಟ್ಟಿಕೊಂಡಿದ್ದಾರೆ. ಅದರಲ್ಲಿ ಸ್ವಲ್ಪ ಜನ ಲೋಕಸಭಾ ಚುನಾವಣಾ ಆಕಾಂಕ್ಷಿಗಳಿದ್ದಾರೆ. ಮೊದಲು ನೀವು ಅಭ್ಯರ್ಥಿ ಹೆಸರು ಘೋಷಣೆ ಮಾಡಿ. ಆವಾಗ ಅವರೇ ಕಿತ್ತಾಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಾಖಲಾಯ್ತು ಎಫ್ಐಆರ್, ಏನಿದು ಪ್ರಕರಣ?

ನನ್ನ ಹೆಸರು ಬಳಸಿ ರಾಜಕೀಯ ಮಾಡುತ್ತಿದ್ದಾರೆ. ಜೊತೆಗೆ ನಿಗಮ ಮಂಡಳಿ ಘೋಷಣೆ ಮಾಡಿ ಅವರಿಗೆ ಪುನರ್ವಸತಿ ಕಲ್ಪಿಸಿ. ಆಗ ಅವರೆ ಸುಮ್ಮನಾಗುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಪ್ರತಾಪ್​ ಸಿಂಹ ವಿರುದ್ಧ ಎಫ್​ಐಆರ್ ದಾಖಲು

ನಾನು ಸೋಮಾರಿ ಸಿದ್ದ ಅಲ್ಲ ಎಂದು ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರತಾಪ್​ ಸಿಂಹ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ. 1860ರ ಐಪಿಸಿ ಸೆಕ್ಷನ್​ 504, 153ರ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯರನ್ನು ಸೋಮಾರಿ ಎಂದು ಟೀಕಿಸಿದ್ದರು.

ನಿನ್ನೆ ಹುಣಸೂರಿನಲ್ಲಿ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು ಟೀಕಿಸಿದ್ದರು. ಈ ಸಂಬಂಧ ಮೈಸೂರು ಗ್ರಾಮಾಂತರ ಕಾಂಗ್ರೆಸ್ ಘಟಕದ​​ ಅಧ್ಯಕ್ಷ ವಿಜಯಕುಮಾರ್ ದೂರು ನೀಡಿದ್ದ​​ರು. ಸಂಸದ ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ನಿನ್ನೆ ಕಾಂಗ್ರೆಸ್​​​ ಪ್ರತಿಭಟನೆ ಕೂಡ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:27 pm, Wed, 27 December 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?