AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ಸಿದ್ದರಾಮಯ್ಯಗೆ ಸಿಎಂ ಪಟ್ಟ; ಮೈಸೂರು ಇಂದಿರಾ ಕ್ಯಾಂಟೀನಲ್ಲಿ ಭರ್ಜರಿ ಹೋಳಿಗೆ ಊಟ

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ ಬಸವರಾಜ್ ಎಂಬವರು ಇಂದಿರಾ ಕ್ಯಾಂಟೀನ್‌ನಲ್ಲಿ ಶುಕ್ರವಾರ ಹೋಳಿಗೆ ಸಹಿತ ಊಟ ಹಂಚಿದರು.

Mysuru News: ಸಿದ್ದರಾಮಯ್ಯಗೆ ಸಿಎಂ ಪಟ್ಟ; ಮೈಸೂರು ಇಂದಿರಾ ಕ್ಯಾಂಟೀನಲ್ಲಿ ಭರ್ಜರಿ ಹೋಳಿಗೆ ಊಟ
ಸಾಂದರ್ಭಿಕ ಚಿತ್ರ
Ganapathi Sharma
|

Updated on: May 19, 2023 | 7:32 PM

Share

ಮೈಸೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ ಬಸವರಾಜ್ ಎಂಬವರು ಇಲ್ಲಿನ ಇಂದಿರಾ ಕ್ಯಾಂಟೀನ್‌ನಲ್ಲಿ ಶುಕ್ರವಾರ ಹೋಳಿಗೆ ಸಹಿತ ಊಟ ಹಂಚಿದರು. ತಮ್ಮ ನೆಚ್ಚಿನ ನಾಯಕ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿರುವುದರ ಸಂಭ್ರಮ ಆಚರಿಸಲು ಅವರು ಮೈಸೂರಿನ 11 ಇಂದಿರಾಗಾಂಧಿ ಕ್ಯಾಂಟೀನ್‌ಗಳಲ್ಲಿ ಇದೇ ರೀತಿ ಶನಿವಾರವೂ ಹೋಳಿಗೆ ಊಟ ನೀಡಲು ಯೋಜಿಸಿದ್ದಾರೆ.

2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಬಸವರಾಜ್ ಅವರು ನಂಜುಮಳಿಗೆ ವೃತ್ತದಲ್ಲಿ ಸಿಹಿ ಹಂಚಿದ್ದರು.

ಕೃಷ್ಣರಾಜೇಂದ್ರ ಸಹಕಾರಿ ಬ್ಯಾಂಕ್‌ನ ಉಪಾಧ್ಯಕ್ಷ ಡಿ ಬಸವರಾಜ್ 1987 ರಿಂದ ಸಿದ್ದರಾಮಯ್ಯ ಅವರೊಂದಿಗೆ ಬಾಂಧವ್ಯ ಹೊಂದಿದ್ದಾರೆ.

ಶುಕ್ರವಾರ ಇಂದಿರಾ ಕ್ಯಾಂಟೀನ್​ನಲ್ಲಿ 150 ಸದಸ್ಯರಿಗೆ ಹೋಳಿಗೆ ವಿತರಿಸಲಾಗಿದೆ. ಶನಿವಾರ ಸಿದ್ದರಾಮಯ್ಯನವರ ಅನ್ನ ಭಾಗ್ಯ ಯೋಜನೆಗೆ ಗೌರವಾರ್ಥ ಹೋಳಿಗೆ ವಿತರಿಸಲು ಮುಂದಾಗಿದ್ದಾರೆ. ‘ಕ್ಷೀರ ಭಾಗ್ಯ’ ಯೋಜನೆಯನ್ನು ಗುರುತಿಸಲು ಅವರು ಬಾದಾಮ್ ಹಾಲು ವಿತರಿಸಲು ಯೋಜಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಾಳೆ ಮಳೆ ಸಾಧ್ಯತೆ; ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅಡ್ಡಿಯ ಆತಂಕ

ಕರ್ನಾಟಕದ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್