AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ಸಿದ್ದರಾಮಯ್ಯಗೆ ಸಿಎಂ ಪಟ್ಟ; ಮೈಸೂರು ಇಂದಿರಾ ಕ್ಯಾಂಟೀನಲ್ಲಿ ಭರ್ಜರಿ ಹೋಳಿಗೆ ಊಟ

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ ಬಸವರಾಜ್ ಎಂಬವರು ಇಂದಿರಾ ಕ್ಯಾಂಟೀನ್‌ನಲ್ಲಿ ಶುಕ್ರವಾರ ಹೋಳಿಗೆ ಸಹಿತ ಊಟ ಹಂಚಿದರು.

Mysuru News: ಸಿದ್ದರಾಮಯ್ಯಗೆ ಸಿಎಂ ಪಟ್ಟ; ಮೈಸೂರು ಇಂದಿರಾ ಕ್ಯಾಂಟೀನಲ್ಲಿ ಭರ್ಜರಿ ಹೋಳಿಗೆ ಊಟ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 19, 2023 | 7:32 PM

Share

ಮೈಸೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ ಬಸವರಾಜ್ ಎಂಬವರು ಇಲ್ಲಿನ ಇಂದಿರಾ ಕ್ಯಾಂಟೀನ್‌ನಲ್ಲಿ ಶುಕ್ರವಾರ ಹೋಳಿಗೆ ಸಹಿತ ಊಟ ಹಂಚಿದರು. ತಮ್ಮ ನೆಚ್ಚಿನ ನಾಯಕ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿರುವುದರ ಸಂಭ್ರಮ ಆಚರಿಸಲು ಅವರು ಮೈಸೂರಿನ 11 ಇಂದಿರಾಗಾಂಧಿ ಕ್ಯಾಂಟೀನ್‌ಗಳಲ್ಲಿ ಇದೇ ರೀತಿ ಶನಿವಾರವೂ ಹೋಳಿಗೆ ಊಟ ನೀಡಲು ಯೋಜಿಸಿದ್ದಾರೆ.

2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಬಸವರಾಜ್ ಅವರು ನಂಜುಮಳಿಗೆ ವೃತ್ತದಲ್ಲಿ ಸಿಹಿ ಹಂಚಿದ್ದರು.

ಕೃಷ್ಣರಾಜೇಂದ್ರ ಸಹಕಾರಿ ಬ್ಯಾಂಕ್‌ನ ಉಪಾಧ್ಯಕ್ಷ ಡಿ ಬಸವರಾಜ್ 1987 ರಿಂದ ಸಿದ್ದರಾಮಯ್ಯ ಅವರೊಂದಿಗೆ ಬಾಂಧವ್ಯ ಹೊಂದಿದ್ದಾರೆ.

ಶುಕ್ರವಾರ ಇಂದಿರಾ ಕ್ಯಾಂಟೀನ್​ನಲ್ಲಿ 150 ಸದಸ್ಯರಿಗೆ ಹೋಳಿಗೆ ವಿತರಿಸಲಾಗಿದೆ. ಶನಿವಾರ ಸಿದ್ದರಾಮಯ್ಯನವರ ಅನ್ನ ಭಾಗ್ಯ ಯೋಜನೆಗೆ ಗೌರವಾರ್ಥ ಹೋಳಿಗೆ ವಿತರಿಸಲು ಮುಂದಾಗಿದ್ದಾರೆ. ‘ಕ್ಷೀರ ಭಾಗ್ಯ’ ಯೋಜನೆಯನ್ನು ಗುರುತಿಸಲು ಅವರು ಬಾದಾಮ್ ಹಾಲು ವಿತರಿಸಲು ಯೋಜಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಾಳೆ ಮಳೆ ಸಾಧ್ಯತೆ; ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅಡ್ಡಿಯ ಆತಂಕ

ಕರ್ನಾಟಕದ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?