AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘಿಸಿದರೇ ಸಿದ್ದರಾಮಯ್ಯ?

ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಮಧ್ಯೆ, ಮೈಸೂರಿನ ವರುಣಾ ಕ್ಷೇತ್ರದ ಬಿಳುಗುಲಿ ಗ್ರಾಮದಲ್ಲಿ ಕಾರ್ಯಕ್ರವೊಂದರಲ್ಲಿ ಭಾಗವಹಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Siddaramaiah: ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘಿಸಿದರೇ ಸಿದ್ದರಾಮಯ್ಯ?
ಸಿದ್ದರಾಮಯ್ಯ
Ganapathi Sharma
|

Updated on: Mar 29, 2023 | 4:27 PM

Share

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಮಧ್ಯೆ, ಮೈಸೂರಿನ ವರುಣಾ ಕ್ಷೇತ್ರದ ಬಿಳುಗುಲಿ ಗ್ರಾಮದಲ್ಲಿ ಕಾರ್ಯಕ್ರವೊಂದರಲ್ಲಿ ಭಾಗವಹಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರೋಡ್ ಶೋ ವೇಳೆ ತಮಟೆ ಬಡಿಯುವವರಿಗೆ ಸಿದ್ದರಾಮಯ್ಯ 1 ಸಾವಿರ ರೂ. ನೀಡಿದ್ದಾರೆ ಎನ್ನಲಾಗಿದೆ. ಬಿಳುಗುಲಿ ಗ್ರಾಮದಲ್ಲಿ ಸಿದ್ದರಾಮಯ್ಯ ರೋಡ್ ​ಶೋ ನಡೆಸಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಬಿಳುಗಲಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿದ್ದಾರೆ.

ರೋಡ್​ ಶೋ ಹಾಗೂ ಪುತ್ಥಳಿ ಅನಾವರಣದ ವೇಳೆ ಸಿದ್ದರಾಮುಯ್ಯಗೆ ಮಾಜಿ ಸಚಿವ ಹೆಚ್​.ಸಿ. ಮಹದೇವಪ್ಪ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಸುನೀಲ್ ಬೋಸ್ ಸಾಥ್ ನೀಡಿದ್ದಾರೆ.

ಪುತ್ಥಳಿ ಅನಾವರಣದ ಬಳಿಕ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನೆ ಸಮಾರಂಭದಲ್ಲಿಯೂ ಸಿದ್ದರಾಮಯ್ಯ ಭಾಗವಹಿಸಿದ್ದಾರೆ. ಸಮಾರಂಭ ನೆಪದಲ್ಲಿ ಗ್ರಾಮಸ್ಥರು ಬೃಹತ್ ಸಮಾವೇಶ ಏರ್ಪಡಿಸಿದ್ದರು. ಇದರಲ್ಲಿ ಸಿದ್ದರಾಮಯ್ಯ ಅತ್ಯಂತ ಭಾಗಿಯಾಗಿದ್ದಾರೆ.

ಸಮಾವೇಶಕ್ಕೆ ಮಳೆ ಅಡ್ಡಿ

ಸಮಾವೇಶದ ಸಂದರ್ಭ ತುಸು ಮಳೆಯಾಗಿ ಅಡಚಣೆ ಉಂಟಾಯಿತು. ಮಳೆಯಲ್ಲಿ ಕುರ್ಚಿ ಹಿಡಿದು ನಿಂತ ಜನರು ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿದರು. ಜತೆಗೆ ಸಿದ್ದರಾಮಯ್ಯಗೆ ಹಾರ ಹಾಕಲು ಮುಗಿಬಿದ್ದರು. ಸಿದ್ದರಾಮಯ್ಯಗೆ ಬೆಳ್ಳಿ ಗಣಪತಿ ವಿಗ್ರಹ ನೀಡಿ ಗ್ರಾಮಸ್ಥರು ಗೌರವ ಸಲ್ಲಿಸಿದರು.

ಈ ಮಧ್ಯೆ, ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಸರ್ಕಾರಿ ಕಾರು ಖಾಲಿ ಮಾಡಿದ ಸಿದ್ದರಾಮಯ್ಯ ಖಾಸಗಿ ಕಾರಿಗೆ ಶಿಫ್ಟ್ ಆಗುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: Karnataka Election 2023: ಬುಧವಾರವೇ ಚುನಾವಣೆ ನಿಗದಿ ಮಾಡಿದ್ದೇಕೆ? ಇಲ್ಲಿದೆ ಕಾರಣ

ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಈ ಬಾರಿ ವಾರದ ಮಧ್ಯದ ದಿನವಾದ ಬುಧವಾರ ಮತದಾನಕ್ಕೆ ದಿನ ನಿಗದಿ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಬುಧವಾರ ಪತ್ರಿಕಾಗೋಷ್ಠಿ ನಡೆಸಿ, ಮತದಾನ, ಮತ ಎಣಿಕೆ ಸೇರಿದಂತೆ ಎಲ್ಲ ವಿವರಗಳನ್ನು ಪ್ರಕಟಿಸಿದರು. ಇದರಂತೆ, ಮೇ 10ರಂದು ಬುಧವಾರ ಮತದಾನ ನಡೆಯಲಿದ್ದು, ಮೇ 13ರಂದು ಶನಿವಾರ ಫಲಿತಾಂಶ ಪ್ರಕಟಗೊಳ್ಳಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ