AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಖಾ ಸುಮ್ಮನೇ ಚಾಮುಂಡಿ ಬೆಟ್ಟಕ್ಕೆ ಹೋಗೋ ಹಾಗಿಲ್ಲ; ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್

ಚಾಮುಂಡಿ ಬೆಟ್ಟಕ್ಕಾಗಿಯೇ ಎರಡು ವಿಶೇಷ ಗಸ್ತು ವಾಹನಗಳನ್ನು ನಿಯೋಜನೆ ಮಾಡಲಾಗಿದೆ. ದಿನದ 24 ಗಂಟೆಯೂ ಈ ವಾಹನಗಳು ಪಾಳಿಯಲ್ಲಿ ಕೆಲಸ ಮಾಡಲಿವೆ.

ಸುಖಾ ಸುಮ್ಮನೇ ಚಾಮುಂಡಿ ಬೆಟ್ಟಕ್ಕೆ ಹೋಗೋ ಹಾಗಿಲ್ಲ; ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್
ಚಾಮುಂಡಿ ಬೆಟ್ಟ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 19, 2022 | 10:06 PM

ಮೈಸೂರು: ಇನ್ಮುಂದೆ ಸುಖಾ ಸುಮ್ಮನೇ ಚಾಮುಂಡಿ ಬೆಟ್ಟಕ್ಕೆ (Chamundi Hill) ಹೋಗುವ ಮುನ್ನ ಹತ್ತು ಬಾರಿ ಯೋಚಿಸೋದು ಒಳ್ಳೆದು. ಯಾಕಂದ್ರೆ ಚಾಮುಂಡಿಬೆಟ್ಟದಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್ ಹಾಕಲು ಮೈಸೂರು ಪೊಲೀಸರು ಮುಂದಾಗಿದ್ದಾರೆ. ಚಾಮುಂಡಿ ಬೆಟ್ಟ ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನ. ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರ. ಪ್ರತಿದಿನ ಇಲ್ಲಿಗೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಕೇವಲ ನಮ್ಮ ರಾಜ್ಯ ಮಾತ್ರವಲ್ಲ ಹೊರ ರಾಜ್ಯ ಹೊರ ದೇಶದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುತ್ತಾರೆ. ಆದರೆ ಇತ್ತೀಚೆಗೆ ಚಾಮುಂಡಿಬೆಟ್ಟದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ಸರಗಳ್ಳತನ, ಬೈಕ್ ವೀಲಿಂಗ್ ಸುಖಾ ಸುಮ್ಮನೆ ಓಡೋಡುದು ಹೆಚ್ಚಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಮೈಸೂರು ಪೊಲೀಸರು ಮುಂದಾಗಿದ್ದಾರೆ. ಆಪರೇಷನ್ ಚಾಮುಂಡಿಗೆ ಚಾಲನೆ ನೀಡಿದ್ದಾರೆ.

ಚಾಮುಂಡಿ ಬೆಟ್ಟಕ್ಕಾಗಿಯೇ ಎರಡು ವಿಶೇಷ ಗಸ್ತು ವಾಹನಗಳನ್ನು ನಿಯೋಜನೆ ಮಾಡಲಾಗಿದೆ. ದಿನದ 24 ಗಂಟೆಯೂ ಈ ವಾಹನಗಳು ಪಾಳಿಯಲ್ಲಿ ಕೆಲಸ ಮಾಡಲಿವೆ. ಇದರಲ್ಲಿರುವ ಸಿಬ್ಬಂದಿ ಚಾಮುಂಡಿಬೆಟ್ಟಕ್ಕೆ ಬರುವವರ ಬಗ್ಗೆ ಮಾಹಿತಿ ಕಲೆ ಹಾಕುವುದು ಸೇರಿದಂತೆ ಬೆಟ್ಟಕ್ಕೆ ಬರುವವರು ಹೋಗುವವರ ಮೇಲೆ ನಿಗಾ ಇಡಲಿದ್ದಾರೆ. ಜೊತೆಗೆ ಮೈಸೂರಿನ ಸಂಚಾರ ಪೊಲೀಸರು ಅಲರ್ಟ್ ಆಗಿದ್ದು ಚಾಮುಂಡಿಬೆಟ್ಟಕ್ಕೆ ಬರುವ ವಾಹನಗಳ ತಪಾಸಣೆ ನಡೆಸಲಿದ್ದಾರೆ. ಇದನ್ನು ಮೈಸೂರಿಗರು ಸ್ವಾಗತಿಸಿದ್ದಾರೆ.

ಇತ್ತೀಚೆಗೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಅನಧಿಕೃತ ವ್ಯಕ್ತಿಗಳು ಓಡಾಟ ಹೆಚ್ಚಾಗಿದೆ ಅನ್ನೋ ಆರೋಪ ಕೇಳಿ ಬಂದಿತ್ತು. ಅದಕ್ಕೆ ಕಡಿವಾಣ ಹಾಕಲು ಮೈಸೂರು ಪೊಲೀಸರು ಮುಂದಾಗಿರುವುದು ನಿಜಕ್ಕೂ ಖುಷಿಯ ವಿಚಾರ. ಇದನ್ನು ಹೀಗೆ ಮುಂದುವರಿಸಬೇಕು ಮೈಸೂರಿನ ಚಾಮುಂಡಿಬೆಟ್ಟ ಧಾರ್ಮಿಕ ಕೇಂದ್ರವಾಗಿ ಉಳಿಯಬೇಕು ಅನ್ನೋದು ಎಲ್ಲರ ಆಶಯವಾಗಿದೆ.

ವರದಿ: ರಾಮ್ ಟಿವಿ 9 ಮೈಸೂರು

ಇದನ್ನೂ ಓದಿ:

ವಿರೋಧ ಪಕ್ಷಗಳಲ್ಲ ಜನ ಹೇಳುವುದು ಮುಖ್ಯ ಎಂದರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯ್ ಮಲ್ಯ, ನೀರವ್ ಮೋದಿ ಹಸ್ತಾಂತರ ಬಗ್ಗೆ ಬ್ರಿಟನ್ ಪ್ರಧಾನಿ ಜೊತೆ ಭಾರತ ಮಾತುಕತೆ ನಡೆಸಲಿದೆಯೇ? ಪರಾರಿಯಾಗಿರುವ ಉದ್ಯಮಿಗಳು ಈಗೆಲ್ಲಿದ್ದಾರೆ?

VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ